Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.18 -19ರಂದು ಸೌದಿ ಅರೇಬಿಯಾದಲ್ಲಿ 17ನೇ...

ಜ.18 -19ರಂದು ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ26 Dec 2023 5:53 PM IST
share
ಜ.18 -19ರಂದು ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ಮಂಗಳೂರು: ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ, ಕರ್ನಾಟಕದ ಹೃದಯವಾಹಿನಿ ಸಂಸ್ಥೆಗಳ ಆಶ್ರಯದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ದಮಾಮ್ ನ ಸಫ್ವಾ ಸಭಾಂಣದಲ್ಲಿ ನಡೆಯಲಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್, ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಸಂಬಂದಪಟ್ಟಂತೆ ಕವಿಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರಗಲಿವೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪ, ಯಕ್ಷಗಾನ, ಡೊಳ್ಳು ಕುಣಿತ, ದಫ್ ಮುಂತಾದ ಕಲೆಗಳು ಪ್ರದರ್ಶನಗೊಳ್ಳುವವು. ಕರ್ನಾಟಕದ ಕಲೆ, ಮತ್ತು ಸಂಸ್ಕೃತಿಗಳು ವಿದೇಶಿ ನೆಲವಾದ ದಮ್ಮಾಮ್ ನಲ್ಲಿ ಪ್ರತಿಬಿಂಬಿಸಲಿವೆ.

ಈ ಹಿಂದೆ 2004, 2012 ಮತ್ತು 2019ರಲ್ಲಿ ಅಬುಧಾಬಿ, 2005 ಮತ್ತು 2010ರಲ್ಲಿ ಸಿಂಗಾಪುರ, 2006 ಮತ್ತು 2011ರಲ್ಲಿ ಬಹ್ರೈನ್, 2007ರಲ್ಲಿ ಕುವೈಟ್, 2008ರಲ್ಲಿ ಖತರ್, 2009ರಲ್ಲಿ ದುಬೈ ಮತ್ತು 2013ರಲ್ಲಿ ಆಫ್ರಿಕಾದ ಕೀನ್ಯಾ, 2014ರಲ್ಲಿ ಶಾರ್ಜಾ, 2017ರಲ್ಲಿ ಆಸ್ಟ್ರೇಲಿಯಾ, 2015, 2018 ಕೆನಡಾ ಮತ್ತು 2021 ಮಸ್ಕತ್ ಅನುಕ್ರಮವಾಗಿ 16 ಸಮ್ಮೇಳನಗಳು ನಡೆದಿವೆ ಎಂದು ಅವರು ಹೇಳಿದರು.

ಸಮ್ಮೇಳನ ನಡೆಯಲಿರುವ ಸಭಾಂಗಣದ ಹೊರವಲಯದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು. ಸೌದಿ ಅರೇಬಿಯಾದಲ್ಲಿ 40,000ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವಂತೆ ಪ್ರಚಾರ ನೀಡಲಾಗುವುದು. ಗಲ್ಫ್ ರಾಷ್ಟ್ರಗಳಾದ, ಬಹರೇನ್, ಅಬುಧಾಬಿ, ಕುವೈತ್, ಖತರ್, ಶಾರ್ಜಾ ಮತ್ತು ದುಬೈನಲ್ಲಿ ನೆಲೆಸಿರುವ ಕನ್ನಡಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಲಾಗುವುದು.

ಜನವರಿ 18 ರಂದು ಮಧ್ಯಾಹ್ನ ಉದ್ಘಾಟನೆ ನೆರವೇರಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಮಂತ್ರಿಸಲಾಗುವುದು ಎಂದು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಸೌದಿ ಅರೇಬಿಯಾ ಗೌರವಾಧ್ಯಕ್ಷರಾದ ಝಕರಿಯಾ ಬಜ್ಪೆತಿಳಿಸಿದರು.

ರಾಜ್ಯದ ವಿವಿಧ ಸಚಿವರು, ವಿಧಾನಸಭೆ ಅಧ್ಯಕ್ಷರು ಹಾಗೂ ಇತರ ಗಣ್ಯರನ್ನು ಆಹ್ವಾನಿಸಲಾಗಿದ್ದು, ಕರ್ನಾಟಕ ಮತ್ತು ಭಾರತದ ಇತರ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚು ಸದಸ್ಯರ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ. ವಿವಿಧ ದೇಶಗಳ ಕನ್ನಡ ಸಂಘಗಳ ಪದಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದವರು ಹೇಳಿದರು.

ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯನ್ನು ಜನವರಿ ಪ್ರಥಮ ವಾರದಲ್ಲಿ ನಡೆಯಲಿದೆ. ಹಿರಿಯ ಅರ್ಹ ಸಾಹಿತಿಗಳ ಹೆಸರು ಸೂಚಿಸಲಿಚ್ಚಿಸುವವರು ಜನವರಿ 2ರೊಳಗೆ hrudayavahinirediffmail.com ಈ ಮೈಲ್ ಗೆ ಮಾಹಿತಿ ಕಳುಹಿಸಬಹುದು ಎಂದು ಅವರು ತಿಳಿಸಿದರು.

ಗೋಷ್ಟಿಯಲ್ಲಿ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಬಜಾಲ್, ಪ್ರವೀಣ್ ಪೀಟರ್ ಆರಾನ್ಹ, ಅಯಾಝ್ ಕೈಕಂಬ, ಅಶ್ರಫ್ ನೌಶಾದ್ ಕೊಲ್ಯ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X