Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.19ರಂದು ಮುಡಿಪು ಎಜು ಪಾರ್ಕ್‌ನಲ್ಲಿ...

ಸೆ.19ರಂದು ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್ ’ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ17 Sept 2025 10:37 PM IST
share
ಸೆ.19ರಂದು ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್ ’ಸಂಭ್ರಮ

ಮಂಗಳೂರು: ಪ್ರವಾದಿ ಪೈಗಂಬರರ 1,500ನೇ ಜನ್ಮ ಮಾಸಾಚರಣೆಯ ಅಂಗವಾಗಿ ಮಜ್ಲಿಸ್ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮುಡಿಪು ಸಂಸ್ಥೆಯ ವತಿಯಿಂದ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶವು ಸೆ.19ರಂದು ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಮುಡಿಪು ಮಜ್ಲಿಸ್ ಎಜು ಪಾರ್ಕ್‌ನ ಅಧ್ಯಕ್ಷ ಶರಫ್ಫುಸ್ಸಾದಾತ್ ಸಯ್ಯದ್ ಮುಹಮ್ಮದ್ ಅಶ್ರಫ್ ಅಸ್ಸಖಾಫ್ ತಂಳ್ ಆದೂರು ತಿಳಿಸಿದ್ದಾರೆ.

ಮಂಗಳೂರು ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಸೇವೆಯೇ ಅತ್ಯಂತ ಶ್ರೇಷ್ಠ ಸತ್ಕರ್ಮ ಎಂಬ ಪ್ರವಾದಿಗಳ ಸಂದೇಶವನ್ನು ಅಳವಡಿಸಿಕೊಂಡು ಪ್ರಸ್ತುತ ಸಮಾವೇಶದ ಅಂಗವಾಗಿ ವಿವಿಧ ಜನಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿರುವ ಅಂಗವಿಕಲರ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಉದ್ದೇಶದಿಂದ ಕೃತಕ ಕೈ ಮತ್ತು ಕಾಲುಗಳನ್ನು ಉಚಿತ ವಾಗಿ ಅಳವಡಿಸಲಾಗುವುದು. ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ವತಿಯಿಂದ ಅಂಗವಿಕಲರಿಗೆ ಕೃತಕ ಕಾಲುಗಳನ್ನು ನೀಡಲಾಗಿದ್ದು, ಈ ಬಾರಿ ಕೈ ಇಲ್ಲದವರನ್ನು ಕೂಡ ಪರಿಗಣಿಸಲಾಗಿದೆ. ಜಾತಿ ಮತ ಭೇದವಿಲ್ಲದೆ ಅಂಗವಿಕಲರಿಗೆ ಒದಗಿಸಲಾಗುವ ಈ ಸೇವೆಗಾಗಿ ಈಗಾಗಲೇ 150ಕ್ಕೂ ಅಧಿಕ ಅರ್ಹರು ಹೆಸರು ನೋಂದಾಯಿಸಿ ದ್ದಾರೆ. ಅವರೆಲ್ಲರಿಗೂ ಕೃತಕ ಕೈ ಮತ್ತು ಕಾಲುಗಳನ್ನು ಒದಗಿಸಲಾಗುವುದು.

ಸೆ. 19ರಂದು ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರ ಮತ್ತು ಬೃಹತ್ ವೈದ್ಯಕೀಯ ಶಿಬಿರ ನಡೆಯಲಿದ್ದು ಅಲೋಪತಿ, ಹೋಮಿಯೋಪತಿ ಮತ್ತು ಆಯುರ್ವೇದಿಕ್ ಚಿಕಿತ್ಸೆಯನ್ನು ನೀಡಲಾಗುವುದು. ಇದೇ ವೇಳೆ ಯು ಟಿ ಫರೀದ್ ಸ್ಮರಣಾ ಸಂಗಮ ನಡೆಯಲಿದೆ. ಓಲ್ಡ್ ಏಜ್ ಮದ್ರಸಕ್ಕೆ ಶಿಲಾನ್ಯಾಸ ನಡೆಯಲಿದೆ. ಸಂಜೆ 4 ಗಂಟೆಗೆ ನಡೆಯುವ ಬೃಹತ್ ಸಮ್ಮೇಳನ ‘ಹುಬ್ಬುನ್ನಬಿ ಕಾನ್ಫರೆನ್ಸ್’ನಲ್ಲಿ ನಾಗೂರು ದರ್ಗಾ ಶರೀಫ್ ಖಲೀಫಾ ಹಝ್ರತ್ ಸಯ್ಯದ್ ಮುಹಮ್ಮದ್, ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೇರಳ ರಾಜ್ಯ ಹಜ್ ಕಮಿಟಿ ಅಧ್ಯಕ್ಷ ಡಾ.ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ವಿಧಾನಸಭಾ ಸ್ಪೀಕರ್ ಯು ಟಿ. ಖಾದರ್, ಯೇನಪೋಯ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ವೈ ಅಬ್ದುಲ್ಲ ಕುಂಞಿ ಹಾಜಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

ಕಾಸರಗೋಡು ಜಿಲ್ಲೆಯ ಮಲೆನಾಡು ಪ್ರದೇಶವಾದ ಅದೂರಿನಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವೆಯ ಉದ್ದೇಶದಿಂದ 2002 ರಲ್ಲಿ ಸ್ಥಾಪಿಸಿದ ಮಜ್ಲಿಸ್ ಇಂದು 15ಕ್ಕೂ ಅಧಿಕ ಶಿಕ್ಷಣಾಲಯಗಳ ಮೂಲಕ ಸಾವಿರಾರು ಮಕ್ಕಳಿಗೆ ಬಹುಮುಖ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ. ಈಗಾಗಲೇ 10,000 ಕ್ಕೂ ಅಧಿಕ ಮಕ್ಕಳು ಅಧ್ಯಯನ ವನ್ನು ಪೂರ್ಣಗೊಳಿಸಿದ್ದು ,ಪ್ರಸ್ತುತ 2,000 ಕ್ಕೂ ಹೆಚ್ಚು ಮಕ್ಕಳು ಅಧ್ಯಯನ ನಿರತರಾಗಿದ್ದಾರೆ. ಅನಾಥ ಮಕ್ಕಳಿಗೆ ಶಿಕ್ಷಣ, ಕಲಿಕಾ ಸಾಮಗ್ರಿಗಳು ಮತ್ತು ಶೈಕ್ಷಣಿಕ ಪ್ರವಾಸಗಳನ್ನು ಪ್ರಾರಂಭದಿಂದಲೂ ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ. ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಇಂದು ವೈದ್ಯರು, ಇಂಜಿನಿಯರ್‌ಗಳು, ವಕೀಲರು, ಶಿಕ್ಷಕರು ಉದ್ಯಮಿಗಳು ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಒಂದು ದಶಕದಿಂದ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿ ವಿದ್ಯಾಭ್ಯಾಸ ಕೇಂದ್ರವನ್ನು ಆರಂಭಿಸಿರುವ ‘ಮಜ್ಲಿಸ್’ ನಲ್ಲಿ ಶಾಲಾಪೂರ್ವ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣದ ತನಕ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸವನ್ನು ನೀಡುತ್ತಿದೆ. ಹೆಣ್ಮಕ್ಕಳ ಪಿಯು ಕಾಲೇಜು, ಧಾರ್ಮಿಕ-ಲೌಕಿಕ ಸಮನ್ವಯ ಉಚಿತ ಶಿಕ್ಷಣ ಕೇಂದ್ರಗಳು ಇಲ್ಲಿದ್ದು , ಧಾರ್ಮಿಕ ಮತ್ತು ಸಾಮಾಜಿಕ ಅರಿವು ಪಡೆಯ ಬಯಸುವ 70 ವರ್ಷ ದಾಟಿದ ವೃದ್ಧರು ಸೇರಿದಂತೆ ವಯಸ್ಕರಿಗಾಗಿ ಓಲ್ಡ್ ಏಜ್ ಮದರಸಾವನ್ನು ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರೋಗದಿಂದ ಬಳಲುತ್ತಿರುವ ಹಲವು ಅಸಹಾಯಕ ಬಡ ರೋಗಿಗಳಿಗೆ ಚಿಕಿತ್ಸೆ ಮತ್ತು ಔಷಧಿಗಳಿಗಾಗಿ ಮಾಸಿಕ ಸಹಾಯಧನವನ್ನು ‘ಮಜ್ಲಿಸ್ ನೀಡುತ್ತಿದ್ದು, ವಿಧವೆಯರು ಮತ್ತು ನಿರ್ಗತಿಕ ಗೃಹಿಣಿಯರಿಗೆ ಮಾಸಿಕ ಜೀವನ ವೆಚ್ಚ ವನ್ನು ಒದಗಿಸಲಾಗುತ್ತಿದೆ. ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮತ್ತು ನಿವೇಶನ ಖರೀದಿಗೆ ನೆರವು ನೀಡುವುದು ಸೇರಿದಂತೆ ಹಲವು ಜನಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ.

ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ಸಖಾಫಿಯ್ಯ ಅಧ್ಯಾತ್ಮಿಕ ಸಂಗಮವು ಪ್ರತೀ ತಿಂಗಳು ನಡೆಯುತ್ತಿದ್ದು, ದೈವಿಕ ಪುಣ್ಯ ಮತ್ತು ಮಾನಸಿಕ ನೆಮ್ಮದಿಯನ್ನು ಬಯಸಿ ಸಾವಿರಾರು ಜನ ಸೇರುತ್ತಾರೆ. ರೋಗ ರುಜಿನಗಳು ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುವ ಅಸಂಖ್ಯಾತ ಜನರು ಪರಿಹಾರಕ್ಕಾಗಿ ಇಲ್ಲಿಗೆ ಬರುತ್ತಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಸಂಚಾಲಕ ಕೆ.ಎಂ. ಅಬೂಬಕರ್ ಸಿದ್ದೀಖ್ , ಉಪಾಧ್ಯಕ್ಷರು ಜಲಾಲುದ್ದೀನ್ ತಂಙಳ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿ.ಬಿ.ತೌಸಿಫ್ ಉಪಸ್ಥಿತರಿದ್ದವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X