Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.22-23: ಪಿಲಿಕುಳದಲ್ಲಿ ಹಣ್ಣು-ಹಲಸು...

ಜೂ.22-23: ಪಿಲಿಕುಳದಲ್ಲಿ ಹಣ್ಣು-ಹಲಸು ಮೇಳ

ವಾರ್ತಾಭಾರತಿವಾರ್ತಾಭಾರತಿ20 Jun 2024 3:42 PM IST
share
ಜೂ.22-23: ಪಿಲಿಕುಳದಲ್ಲಿ ಹಣ್ಣು-ಹಲಸು ಮೇಳ

ಮಂಗಳೂರು, ಜೂ.20: ರೈತರು ಮತ್ತು ಉತ್ಪಾದಕರಿಗೆ ನೇರ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ 10 ವರ್ಷಗಳಿಂದ ಆಯೋಜಿಸಲಾಗುತ್ತಿರುವ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ ಈ ಬಾರಿ ಜೂ.22 ಮತ್ತು 23ರಂದು ನಡೆಯಲಿದೆ ಎಂದು ಪ್ರಾಧಿಕಾರದ ಆಯುಕ್ತ ಪ್ರವೀಣ್ ನಾಯಕ್ ಪಿಲಿಕುಳದ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣದಲ್ಲಿ ನಡೆಯಲಿರುವ ಮೇಳದಲ್ಲಿ ಮಳಿಗೆ ತೆರೆಯಲು 72 ಮಂದಿ ಅರ್ಜಿ ಹಾಕಿದ್ದು, 100ರಷ್ಟು ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರಾಮನಗರ, ತಿಪಟೂರು, ಕೋಲಾರ, ಧಾರವಾಡ, ಕುಶಾಲನಗರ, ಮಡಿಕೇರಿ ಮೊದಲಾದ ಕಡೆಗಳಿಂದ ರೈತರು ಹಾಗೂ ಬೆಳೆಗಾರರು ತಮ್ಮ ಹಣ್ಣು ಹಂಪಲು ಮತ್ತು ಹಲಸು ಸೇರಿದಂತೆ ಇತರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಹಣ್ಣು ಹಂಪಲುಗಳ ಜತೆಗೆ ಔಷಧೀಯ ಗಿಡಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಮತ್ತಿತರ ಪದಾರ್ಥಗಳು, ಹಣ್ಣುಗಳಿಂದ ತಯಾರಿಸಿದ ಖಾದ್ಯಗಳು, ಪಾನೀಯಗಳ ಪ್ರದರ್ಶನವೂ ಇರಲಿದೆ. ಜೂ. 22ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಮೇಳ ನಡೆಯುವ ಅರ್ಬನ್ ಹಾಥ್ ಸುತ್ತಮುತ್ತ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ವಾಹನಗಳ ಮೂಲಕವೂ ನೇರವಾಗಿ ಅರ್ಬನ್ ಹಾಥ್ವರೆಗೂ ಶುಲ್ಕ ರಹಿತವಾಗಿ ಆಗಮಿಸಿ ಪ್ರದರ್ಶನ ವೀಕ್ಷಣೆ ಹಾಗೂ ಖರೀದಿಗೆ ಅವಕಾಶವಿರಲಿದೆ ಎಂದು ಅವರು ವಿವರಿಸಿದರು.

ವೈವಿಧ್ಯಮಯ ತಳಿಗಳ ತರಕಾರಿ ಬೀಜಗಳ ಪ್ರದರ್ಶನ

ಈ ಬಾರಿಯ ಮೇಳದಲ್ಲಿ ವಿವಿಧ ಪ್ರದೇಶಗಳ ದೇಸೀ ತಳಿಗಳ ತರಕಾರಿ ಬೀಜಗಳ ವಿಶೇಷ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಕುಶಾಲನಗರದ ಆಫ್ತಾಬ್ ಎಂಬವರು ಬದನೆಯ 238 ತಳಿ, ಮೂಲಂಗಿಯ 15, ಅಲಸಂಡೆ ಹಾಗೂ ಬೆಂಡೆಕಾಯಿಯ ತಲಾ 40 ತಳಿಗಳು, ಸೋರೆಕಾಯಿಯ 20 ತಳಿ, ಟೊಮೋಟೋ 100, ಮೆಣಸಿನಕಾಯಿ 70, ಕುಂಬಳಕಾಯಿಯ 20 ತಳಿಗಳ ಬೀಜಗಳನ್ನು ಸಂರಕ್ಷಿಸಿದ್ದಾರೆ. ಈ ಬೀಜಗಳು ಮೇಳದಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಾಗಲಿದೆ ಎಂದು ಪ್ರವೀಣ್ ನಾಯಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರದ ಆಡಳಿತಾಧಿಕಾರಿ ಡಾ.ಅಶೋಕ್ ಉಪಸ್ಥಿತರಿದ್ದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಒಳಪಟ್ಟಿದ್ದು, ನಿಸರ್ಗಧಾಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೆಪಿಎಸ್ಇ ಪರೀಕ್ಷೆಯ ಮೂಲಕ ವೃಂದ ಮತ್ತು ನೇಮಕಾತಿ ನಿಯಮದಡಿ ಅಗತ್ಯ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕಕ್ಕೆ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸುಮಾರು 365 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಪಿಲಿಕುಳ ನಿಸರ್ಗಧಾಮಕ್ಕೆ ಸುತ್ತ ಆವರಣಗೋಡೆ ಇಲ್ಲದಿರುವ ಕಾರಣ ಭದ್ರತಾ ಸಿಬ್ಬಂದಿ ಅತೀ ಅಗತ್ಯವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರವೀಣ್ ನಾಯಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X