Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.24: ಅಡ್ಯಾರ್ ಕಣ್ಣೂರಿನಲ್ಲಿ...

ಜ.24: ಅಡ್ಯಾರ್ ಕಣ್ಣೂರಿನಲ್ಲಿ ಎಸ್‌ವೈಎಸ್ ರಾಜ್ಯ ಸಮ್ಮೇಳನ

ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಡಿಕೆ ಶಿವಕುಮಾರ್ ಭಾಗಿ

ವಾರ್ತಾಭಾರತಿವಾರ್ತಾಭಾರತಿ23 Jan 2024 10:42 PM IST
share
ಜ.24: ಅಡ್ಯಾರ್ ಕಣ್ಣೂರಿನಲ್ಲಿ ಎಸ್‌ವೈಎಸ್ ರಾಜ್ಯ ಸಮ್ಮೇಳನ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್‌ವೈಎಸ್)ದ 30ನೆ ವಾರ್ಷಿಕ ಮಹಾ ಸಮ್ಮೇಳನವು ಜ.24ರಂದು ಸಂಜೆ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಹಾಜಿ ಬಿ.ಎಂ. ಮುಮ್ತಾಝ್ ಅಲಿ ಹೇಳಿದರು.

ನಗರದ ಖಾಸಗಿ ಹೊಟೇಲಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಂಪರೆಯ ಪ್ರತಿನಿಧಿ ಗಳಾಗೋಣ’ ಎಂಬ ಧ್ಯೇಯವಾಕ್ಯದಡಿ ನಡೆಯುವ ಈ ಸಮ್ಮೇಳನದ ಪೂರ್ವಭಾವಿಯಾಗಿ ಮಧ್ಯಾಹ್ನ 2 ಗಂಟೆಗೆ ನಗರದ ಪಡೀಲ್‌ನಿಂದ ಸಮ್ಮೇಳನ ನಡೆಯುವ ಅಡ್ಯಾರ್ ಗಾರ್ಡನ್‌ವರೆಗೆ ರ್ಯಾಲಿ ನಡೆಯಲಿದೆ. ಸಂಜೆ 4ಕ್ಕೆ ನಡೆಯುವ ಸಮ್ಮೇಳನವನ್ನು ಕರ್ನಾಟಕ ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕೆ.ಪಿ. ಹುಸೈನ್ ಸಅದಿ ಉದ್ಘಾಟಿಸಲಿದ್ದಾರೆ ಎಂದರು.

ಸ್ವಾಗತ ಸಮಿತಿಯ ಕೋಶಾಧಿಕಾರಿ ಕೆ.ಎಂ. ಶಾಫಿ ಸಅದಿ ಬೆಂಗಳೂರು ಮಾತನಾಡಿ ಚಿಂತಕ, ಸಾಮಾಜಿಕ ಹೋರಾಟ ಗಾರ ನಿಖಿತ್ ರಾಜ್ ಮೌರ್ಯ ‘ಭಾರತೀಯ ಪರಂಪರೆ’ಯ ಕುರಿತು ಮಾತನಾಡಲಿದ್ದಾರೆ. ಸಂಜೆ 6ಕ್ಕೆ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಅವರ ಸಮ್ಮುಖ ನಡೆಯುವ ಸಮ್ಮೇಳನ ವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಯ್ಯಿದ್ ಕುಂಬೋಳ್ ಆಟಕ್ಕೋಯ ತಂಙಳ್, ಸಯ್ಯಿದ್ ಖಲೀಲುಲ್ ಬುಖಾರಿ ತಂಙಳ್, ಸಯ್ಯಿದ್ ಕೂರತ್ ತಂಙಳ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡ್ ಅಬ್ದುರ‌್ರಹ್ಮಾನ್ ಸಖಾಫಿ, ಡಾ. ಕಾವಲಕಟ್ಟೆ ಹಝ್ರತ್ ಭಾಷಣ ಮಾಡಲಿದ್ದಾರೆ ಎಂದರು.

ಸ್ವಾಗತ ಸಮಿತಿಯ ಮುಖ್ಯ ಸಂಯೋಜಕ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಮಾತನಾಡಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಸಚಿವ ರಹೀಂ ಖಾನ್, ಶಾಸಕರಾದ ಬಿ.ಎಂ. ಫಾರೂಕ್, ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಶಾಸಕ ಮೊಯ್ದಿನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ಯೆನೆಪೊಯ ವಿವಿಯ ಕುಲಾಧಿಪತಿ ವೈ. ಅಬ್ದುಲ್ಲಾ ಕುಂಞಿ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆಎಸ್ ಮುಹಮ್ಮದ್ ಮಸೂದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಎಸ್‌ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಲ್ ಸಅದಿ ಕೊಳಕೇರಿ ಮಾತನಾಡಿ ಮೂವತ್ತನೇ ವಾರ್ಷಿಕದ ಅಂಗವಾಗಿ ಹಮ್ಮಿಕೊಂಡಿದ್ದ ಒಂದು ವರ್ಷದ ಅಭಿಯಾನಕ್ಕೆ ಕಳೆದ ವರ್ಷದ ಜನವರಿ 24ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿತ್ತು. ಒಂದು ವರ್ಷದಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮ, ಯೋಜನೆಯನ್ನು ಕಾರ್ಯಕತಗೊಳಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಜಿ ಶಕೀರ್ ಹೈಸಮ್, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಬಿ ಮುಹಮ್ಮದ್ ಸಾದಿಕ್ ಮಲೆಬೆಟ್ಟು, ಎಸ್‌ವೈಎಸ್ ಮಾಧ್ಯಮ ಕಾರ್ಯದರ್ಶಿ ಹಸೈನಾರ್ ಆನೆ ಮಹಲ್, ಪ್ರಮುಖರಾದ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಮುಹಮ್ಮದ್ ಅಲಿ, ಅಶ್ರಫ್ ಕಿನಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X