Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ.24ರಿಂದ ಉಳ್ಳಾಲ ಉರೂಸ್: ಸಂಚಾರ...

ಎ.24ರಿಂದ ಉಳ್ಳಾಲ ಉರೂಸ್: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ23 April 2025 7:09 PM IST
share
ಎ.24ರಿಂದ ಉಳ್ಳಾಲ ಉರೂಸ್: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು, ಎ.23: ಉಳ್ಳಾಲ ಖುತ್‌ಬುಝ್ಝಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್‌ರವರ 432ನೇ ವಾರ್ಷಿಕ ಹಾಗೂ 22ನೇ ಪಂಚವಾರ್ಷಿಕ ಉರೂಸ್ ಎ.24 ರಿಂದ ಮೇ 18ರ ತನಕ ನಡೆಯಲಿದೆ.

ಉರೂಸ್ ಕಾರ್ಯಕ್ರಮದಲ್ಲಿ ಹೊರ ರಾಜ್ಯ ಮತ್ತು ಇತರೆ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿರುವುದರಿಂದ ಉಳ್ಳಾಲ ಸಂಪರ್ಕಿಸುವ ಪಂಪುವೆಲ್ -ಉಳ್ಳಾಲ ನೇತ್ರಾವತಿ ಬ್ರಿಡ್ಜ್ -ತೊಕ್ಕೊಟ್ಟು- ಉಳ್ಳಾಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಮತ್ತು ತೊಕ್ಕೊಟ್ಟು ಜಂಕ್ಷನ್- ಉಳ್ಳಾಲ ಮುಖ್ಯ ರಸ್ತೆ - ಮಾಸ್ತಿಕಟ್ಟೆ -ರಾಣಿ ಅಬ್ಬಕ್ಕ ಸರ್ಕಲ್ -ಸೋಮೇಶ್ವರ ರಸ್ತೆಯಲ್ಲಿ ಎ.24ರಿಂದ ಮೇ 18ರ ತನಕ ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಾಹನಗಳ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ಸುಗಮ ಸಂಚಾರಕ್ಕಾಗಿ ಕೆಳಕಂಡ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ವಿವರ ಇಂತಿವೆ

* ಮೆಲ್ಕಾರು ಜಂಕ್ಷನ್(ರಾಷ್ಟ್ರೀಯ ಹೆದ್ದಾರಿ-75): ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಬಿ.ಸಿ.ರೋಡ್ ಕಡೆಯಿಂದ ಕೇರಳಕ್ಕೆ ಹೋಗುವ ಮತ್ತು ತೊಕ್ಕೊಟ್ಟು, ಉಳ್ಳಾಲ ಹಾಗೂ ಉರೂಸ್ ಕಾರ್ಯಕ್ರಮಕ್ಕೆ ಬರುವ ಮತ್ತು ಹೋಗುವ ಸಾರ್ವಜನಿಕರ ವಾಹನಗಳು ಮೆಲ್ಕಾರು ಜಂಕ್ಷನ್‌ನಲ್ಲಿ ತಿರುವು ಪಡೆದು ಬೊಳ್ಯಾರ್ -ಮುಡಿಪು -ಕೊಣಾಜೆ -ತೊಕ್ಕೊಟ್ಟು ಮೂಲಕ ಸಂಚರಿಸಬಹುದಾಗಿದೆ.

* ಅಡ್ಯಾರು ಕಟ್ಟಿ (ರಾಷ್ಟ್ರೀಯ ಹೆದ್ದಾರಿ-73): ಫರಂಗಿಪೇಟೆ, ತುಂಬೆ, ಅಡ್ಯಾರ ಕಡೆಯಿಂದ ಕೇರಳಕ್ಕೆ ಹೋಗುವ ಮತ್ತು ತೊಕ್ಕೊಟ್ಟು, ಉಳ್ಳಾಲ ಹಾಗೂ ಉರೂಸ್ ಕಾರ್ಯಕ್ರಮಕ್ಕೆ ಬರುವ ಅಥವಾ ಹೋಗುವ ಕಾರು, ದ್ವಿ-ಚಕ್ರ ವಾಹನಗಳು ಅಡ್ಯಾರು ಕಟ್ಟೆ (ಬೊಂಡಾ ಫ್ಯಾಕ್ಟರಿ) ರಸ್ತೆಯಾಗಿ ಹರೇಕಳ ಸೇತುವೆ- ಗ್ರಾಮಚಾವಡಿ ನ್ಯೂಪಡ್ಪು -ತೊಕ್ಕೊಟ್ಟು ಮೂಲಕ ಸಂಚರಿಸಬಹುದಾಗಿದೆ.

ಸಲಹೆಗಳು

* ನೇತ್ರಾವತಿ ಹಳೆಯ ಸೇತುವೆಯ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಮತ್ತು ಸವಾರರು ಸರದಿಯಂತೆ ಎಚ್ಚರಿಕೆಯಿಂದ ಚಲಿಸುವುದು.

* ಉರೂಸ್ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಉಳ್ಳಾಲ ಮುಖ್ಯರಸ್ತೆ, ಅಬ್ಬಕ್ಕ ವೃತ್ತದಿಂದ ದರ್ಗಾದ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬಾರದು.

* ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ನಿಗದಿಪಡಿಸಿದ ನಿಲುಗಡೆ ಸ್ಥಳಗಳಲ್ಲೇ ನಿಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X