Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.3-5: ಅತಿಥಿ ಉಪನ್ಯಾಸಕರ ಸಂದರ್ಶನ

ಜು.3-5: ಅತಿಥಿ ಉಪನ್ಯಾಸಕರ ಸಂದರ್ಶನ

ವಾರ್ತಾಭಾರತಿವಾರ್ತಾಭಾರತಿ1 July 2025 8:34 PM IST
share
ಜು.3-5: ಅತಿಥಿ ಉಪನ್ಯಾಸಕರ ಸಂದರ್ಶನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (ಯುಜಿ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆಯ ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜು.3, 4 ಮತ್ತು 5ರಂದು ನಡೆಯಲಿದೆ.

*ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜು.3ರ ಬೆಳಗ್ಗೆ 10ರಿಂದ 11:45ರವರೆಗೆ ಕನ್ನಡ, 11:45ರಿಂದ ಮಧ್ಯಾಹ್ನ 1ರವರೆಗೆ ಇಂಗ್ಲಿಷ್, 1ರಿಂದ 1:30ರವರೆಗೆ ಹಿಂದಿ, 2:30ರಿಂದ 2:45ರವರೆಗೆ ಸಂಸ್ಕೃತ, 2:45ರಿಂದ 3:45ರವರೆಗೆ ಇತಿಹಾಸ, 3:45ರಿಂದ 5:30ರವರೆಗೆ ಅರ್ಥಶಾಸ್ತ್ರ.

ಜುಲೈ 4ರಂದು ಬೆಳಗ್ಗೆ 10ರಿಂದ 11:45ರವರೆಗೆ ರಾಜ್ಯಶಾಸ್ತ್ರ, 11:45ರಿಂದ 11:50ರವರೆಗೆ ಸಮಾಜ ಶಾಸ್ತ್ರ, 11:50ರಿಂದ 12:30ರವರೆಗೆ ಭೂಗೋಳಶಾಸ್ತ್ರ, 12:30ರಿಂದ ಮಧ್ಯಾಹ್ನ 1ರವರೆಗೆ ಪತ್ರಿಕೋದ್ಯಮ, 1ರಿಂದ 1:30ರವರೆಗೆ ದೈಹಿಕ ಶಿಕ್ಷಣ/ಕ್ರೀಡೆ, 2:30ರಿಂದ ಅಪರಾಹ್ನ 3ರವರೆಗೆ ಕಂಪ್ಯೂಟರ್ ಸೈನ್ಸ್/ಬಿಸಿಎ, 3ರಿಂದ 3:10ರವರೆಗೆ ಫಿಸಿಕ್ಸ್ , 3:10ರಿಂದ ಸಂಜೆ 4ರವರೆಗೆ ಕೆಮಿಸ್ಟ್ರಿ, 4ರಿಂದ 4:30ರವರೆಗೆ ಮ್ಯಾತ್‌ಮ್ಯಾಟಿಕ್ಸ್, 4:30ರಿಂದ 5ರವರೆಗೆ ಬಾಟನಿ, 5ರಿಂದ 5:10ರವರೆಗೆ ಪ್ರಾಣಿಶಾಸ್ತ್ರ, 5:10ರಿಂದ 5:30ರವರೆಗೆ ಮೈಕ್ರೋ ಬಯಾಲಜಿ.

ಜು.5ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್, 2:30ರಿಂದ 3:30ರವರೆಗೆ ಬಿಬಿಎ (ಟ್ರಾವೆಲ್ ಟೂರಿಸಂ).

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕು. ಪೂರ್ಣಕಾಲಿಕ ಬೋಧನಾ ಅವಧಿ ಯನ್ನು ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ ವಾರಕ್ಕೆ 16 ಗಂಟೆ ಹಾಗೂ ವಿಜ್ಞಾನ ನಿಕಾಯಕ್ಕೆ 20 ಗಂಟೆ ಎಂದು ಪರಿಗಣಿಸಲಾಗುತ್ತದೆ. ಪೂರ್ಣಕಾಲಿಕ ಬೋಧನಾ ಅವಧಿಯಿದ್ದಲ್ಲಿ ಮಾಸಿಕ ಗರಿಷ್ಠ 40,000 ರೂ. (ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಮಾತ್ರ) ಮತ್ತು ಯು.ಜಿ.ಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದದವರಿಗೆ ಮಾಸಿಕ ಗರಿಷ್ಟ 35,000 ರೂ. ಸಂಭಾವನೆ ಪಾವತಿ ಮಾಡಲಾಗುತ್ತದೆ.

ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ 16 ಗಂಟೆಗಿಂತ ಕಡಿಮೆ ಕಾರ್ಯಭಾರ/ ವಿಜ್ಞಾನ ನಿಕಾಯಕ್ಕೆ 20 ಗಂಟೆಗಿಂತ ಕಡಿಮೆ ಕಾರ್ಯಭಾರ ಇದ್ದಲ್ಲಿ ಪ್ರತಿ ಗಂಟೆಯ ’ಬೋಧನಾ ಅವಧಿಗೆ 650 ರೂ.ರಂತೆ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದದವರಿಗೆ ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ 16 ಗಂಟೆಗಿಂತ ಕಡಿಮೆ ಕಾರ್ಯಭಾರ/ ವಿಜ್ಞಾನ ನಿಕಾಯಕ್ಕೆ 20 ಗಂಟೆಗಿಂತ ಕಡಿಮೆ ಕಾರ್ಯಭಾರ ಇದ್ದಲ್ಲಿ ಪ್ರತಿ ಗಂಟೆಯ ಬೋಧನಾ ಅವಧಿಗೆ 600 ರೂ. ರಂತೆ ಸಂಭಾವನೆ ಪಾವತಿ ಮಾಡಲಾಗುತ್ತದೆ.

ವಿಶ್ವವಿದ್ಯಾನಿಲಯವು ವಹಿಸುವ ಇತರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಬದ್ಧರಿರಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಿದ ಅರ್ಜಿ ಹಾಗೂ ಮೂಲದಾಖಲೆಗಳ ಪ್ರತಿಯನ್ನು ಸಂದರ್ಶನದ ದಿನ ದಂದು ಕಡ್ಡಾಯವಾಗಿ ತರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವ ವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು ಎಂದು ಕುಲಸಚಿವರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X