Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ...

ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

ವಾರ್ತಾಭಾರತಿವಾರ್ತಾಭಾರತಿ2 Feb 2026 9:40 PM IST
share
ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

ಸುರತ್ಕಲ್‌ : ಪರಮಪವಿತ್ರ ಕ್ಷೇತ್ರ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು ಇದರ ಜೀರ್ಣೋದ್ಧಾರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಫೆ.4 ರಿಂದ 10ರ ವರೆಗೆ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಜರುಗಲಿದೆ.

ಈ ಸಂಬಂಧ ದೈವಸ್ಥಾನದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಿ.ಬಿ.ಕರ್ಕೇರ ಅವರು, ಬಡವರೇ ಇರುವ ಸಸಿಹಿತ್ಲು ಎಂಬ ಇಷ್ಟು ಸಣ್ಣ ಗ್ರಾಮದಲ್ಲಿ ನಾಲ್ಕು ಕರೆ ಸಮಾಜ ಒಟ್ಟಾಗಿ ಸುಮಾರು 3.5 ಕೋಟಿ ರೂ. ವೆಚ್ಚದ ಸಂಪೂರ್ಣ ಶಿಲಾಮಯ ದೈವಸ್ಥಾನ ನಿರ್ಮಾಣ ಮಾಡಲಾ ಗಿದ್ದು, ನಮ್ಮ ಹೃದಯಂತರಾಳದ ಮನವಿಗೆ ದಾನಿಗಳು ಸಕಾರಾತ್ಮವಾಗಿ ಸ್ಪಂದಿಸಿದ ಫಲ. ಅಲ್ಲದೆ, ಉಳ್ಳಾಯ ಮತ್ತು ಪರಿವಾರ ದೈವಗಳ ಕಾರಣಿಕ ಎಂದರು.

ದೈವಸ್ಥಾನದ ಒಳಾಂಗಣದಲ್ಲಿ ಫೆ.4 ರಿಂದ 8 ರ ತನಕ ನಿರಂತರ ವೈದಿಕ ವಿಧಿ ವಿಧಾನಗಳು, ಋತ್ವಿಜರ ನೇತೃತ್ವ ದಲ್ಲಿ ನಡೆಯುತ್ತಿದ್ದರೆ ಹೊರಾಂಗಣದಲ್ಲಿ ಹಾಕಿರುವ ಎರಡು ವೇದಿಕೆಯಲ್ಲಿ ಪ್ರತ್ಯೇಕವಾಗಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಒಂದು ವೇದಿಕೆಗೆ "ಉಳ್ಳಾಯ ಮದಿಪು ಚಾವಡಿ" ಎಂಬ ಹೆಸರಿಡಲಾ ಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ವೇದಿಕೆಗೆ ಕಾಂತುಲಕಣ ಗಡಿಪ್ರದಾನ ಯಾನೆ ಪಠೇಲ್ ಯಾದವ ಜಿ. ಬಂಗೇರ ಸಾಂಸ್ಕೃತಿಕ ವೇದಿಕೆ ಎಂದು ಹೆಸರಿಡಲಾಗಿದೆ. ಫೆ.4ರಿಂದ 8ರ ವರೆಗೆ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದ್ದು, ಈ ವೇದಿಕೆಗೆ "ಕಾಂತಾಬಾರೆ ಬುಧಾಬಾರೆ ಭಜಕ ವೇದಿಕೆ" ಎಂದು ಹೆಸರಿಡಲಾಗಿದೆ ಎಂದರು.

ಶ್ರೀ ಉಳ್ಳಾಯ ಹಾಗೂ ಪರಿವಾರ ಶಕ್ತಿಗಳಿಗೆ ಪ್ರಧಾನಗೊಂಡ ಕಾಂತಾಬಾರೆ ಬುಧಾಬಾರೆ ಮತ್ತು ಮಾಯಂದಾಳ ದೈವಕ್ಕೆ ಪ್ರತ್ಯೇಕ ಗುಡಿ ನಿರ್ಮಾಣ ಮಾಡಲಾಗಿದ್ದು, ಎದುರಿನ ಗೋಪುರ ನವೀಕರಣ ಹಾಗೂ ಪ್ರವೇಶದ್ವಾರ ಉದ್ಘಾಟನೆ ನಡೆಯಲಿದೆ. ಜೀರ್ಣೋದ್ಧಾರ ಯಶಸ್ಸಿಗೆ ಊರಿನ ಜೀರ್ಣೋದ್ಧಾರ, ಆಡಳಿತ ಹಾಗೂ ಮಹಿಳಾ ಸಮಿತಿ ಗಳ ಜೊತೆಗೆ ಮುಂಬೈ, ಬೆಂಗಳೂರು ಸೇರಿದಂತೆ ಹೊರನಾಡು ಸಮಿತಿಗಳ ಸಹಕಾರವೇ ಕಾರಣವಾಗಿದೆ. ವಿವಿಧ ಉಪಸಮಿತಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ವಾಹನಗಳ ಪಾರ್ಕಿಂಗ್, ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ರೂಪಿಸಲಾಗಿದೆ ಎಂದು ನುಡಿದರು.

ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ.ಬಿ. ಕರ್ಕೇರ, ಗೌರವಾಧ್ಯಕ್ಷ ಮಿಥುನ್ ರೈ, ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್ ಮತ್ತು ಚಣ್ಯದ್ರಶೇಖರ ನಾನಿಲ್, ಕಾರ್ಯಾಧ್ಯಕ್ಷ ಪರಮಾನಂದ ವಿ. ಸಾಲ್ಯಾನ್, ಆಡಳಿತ ಸಮಿತಿಯ ಅಧ್ಯಕ್ಷ ಜಗನ್ನಾಥ ಆರ್. ಕೋಟ್ಯಾನ್, ಉಪಾಧ್ಯಕ್ಷ ಅನಿಲ್ ಪೂಜಾರಿ, ಕೋಶಾಧಿಕಾರಿ ಎಸ್. ದಯಾನಂದ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಶ್ರೀಧರ ವಿ. ಸುವರ್ಣ, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್‌ ಎನ್. ಕೋಟ್ಯಾನ್ ಹಾಗೂ ಸಂಚಾಲಕ ಪದ್ಮನಾಭ ಸಸಿಹಿತ್ಲು, ಜೊತೆಗೆ ಗೌರವ ಸಲಹೆಗಾರರಾದ ಪದ್ಮನಾಭ ಬಂಗೇರ ಮತ್ತು ರಮೇಶ್ ಪಿ. ಸನಿಲ್, ಕಾಂತುಲಕಣ ಗಡಿಪುದಾನರಾದ ನಿರಂಜನ್ ಬಂಗೇರ ಹಾಗೂ ಲೀಲಾಧರ ಬಂಗೇರ, ಪ್ರಧಾನ ಅರ್ಚಕ ತೋಚೋಡಿ ಶೇಖರ ಪೂಜಾರಿ, ಅರ್ಚಕರಾದ ಸುರೇಶ್ ಪೂಜಾರಿ ಮತ್ತು ದಾಮೋದರ ಪೂಜಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಶಕುಂತಳಾ ಭೋಜ ಬಂಗೇರ ಹಾಗೂ ಗೌರವಾಧ್ಯಕ್ಷೆ ಪುಷ್ಪಾ ದಯಾನಂದ್‌, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಎಸ್.ಆರ್. ಪ್ರಭಾತ್, ಆಡಳಿತ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್, ಜೊತೆ ಕಾರ್ಯದರ್ಶಿ ಹರೀಶ್ ಕುಮಾ‌ರ್, ಜೊತೆ ಕೋಶಾಧಿಕಾರಿ ಯತೀಶ್ ಸಾಲ್ಯಾನ್ ಮತ್ತು ಮಾಧ್ಯಮ ಸಂಚಾಲಕ ಯಶೋಧರ ಕೋಟ್ಯಾನ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X