Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ

ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ

ವಾರ್ತಾಭಾರತಿವಾರ್ತಾಭಾರತಿ24 Dec 2025 6:50 PM IST
share
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ

ಮಂಗಳೂರು: ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ -ಲಕ್ಷ್ಮಣ ಜೋಡುಕರೆಯಲ್ಲಿ ಹೊನಲು-ಬೆಳಕಿನ 9ನೇ ವರ್ಷದ ಮಂಗಳೂರು ಕಂಬಳ ಡಿ.27ರಂದು ನಡೆಯಲಿದೆ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ , ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 9ನೇ ವರ್ಷದ ಕಂಬಳದಲ್ಲಿ 9 ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ನಗರದಲ್ಲಿ ಕಂಬಳವನ್ನು ಉಳಿಸಿ ಬೆಳೆಸಬೇಕು.ನಗರದಲ್ಲಿ ನೆಲೆಸಿರುವ ದೇಶವಿದೇಶದ ಜನರಿಗೆ ತುಳು ಸಂಸ್ಕೃತಿಯ ಪರಿಚಯವಾಗಬೇಕು. ನಮ್ಮ ಮುಂದಿನ ಪೀಳಿಗೆಯ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿಯ ಪರಿಚಯ ಹತ್ತಿರದಿಂದ ಆಗಬೇಕು ಎಂಬ ಉದ್ದೇಶದಿಂದ ಕಂಬವನ್ನು ಆಯೋಜಿಸಲಾಗುತ್ತದೆ ಎಂದರು.

ಕಂಬಳದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ಈ ಬಾರಿಯ ಕಂಬಳದಲ್ಲಿ 9 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ತುಳುನಾಡಿನ ರಾಣಿ ಅಬ್ಬಕ್ಕನ ಚಾರಿತ್ರಿಕ ಚಿತ್ರಕಲಾ ಪ್ರದರ್ಶನ, ವಂದೇ ಮಾತರಂನ 150ನೇ ವರ್ಷಾಚರಣೆಯ ಅಂಗವಾಗಿ 150 ವಿದ್ಯಾರ್ಥಿನಿಯರಿಂದ ‘ವಂದೇ ಮಾತರಂ’ ಸಾಮೂಹಿಕ ಗಾಯನ, ಪರಿಸರ ಸ್ನೇಹಿಯಾದ ಪ್ರಧಾನ ಮಂತ್ರಿಯ ಸಂಕಲ್ಪ ‘ಏಕ್ ಪೇಡ್ ಮಾ ಕ ನಾಮ್’ ಎಂಬ ಕಾರ್ಯಕ್ರಮದಂತೆ ತಾಯಿ ಹೆಸರಲ್ಲಿ ಒಂದು ಗಿಡ ನೆಡಲು ಗಿಡಗಳ ವಿತರಣೆ, ಬ್ಯಾಕ್ ಊರು ಪರಿಕಲ್ಪನೆಯಲ್ಲಿ ವಿದೇಶದಿಂದ ಊರಿಗೆ ವಾಪಸ್ ಬಂದು ಉದ್ಯಮ ಆರಂಭಿಸಿ, ಯಶಸ್ವಿಯಾಗಿರುವ 9 ಮಂದಿ ಉದ್ಯಮಿಗಳಿಗೆ ಸನ್ಮಾನ, ವೃದ್ಧಾಶ್ರಮದ ನಿವಾಸಿಗಳನ್ನು ಕರೆದುಕೊಂಡು ಬಂದು ಕಂಬಳವನ್ನು ಪರಿಚಯಿಸಲಾ ಗುವುದು, ಈ ಚಟುವಟಿಕೆಗಳೊಂದಿಗೆ ನಾಲ್ಕು ಸ್ಪರ್ಧೆಗಳು ‘ರಂಗ್ ದ ಕೂಟ’, ಮಂಗಳೂರು ಕಂಬಳದ ರೀಲ್ಸ್, ಮಂಗಳೂರು ಕಂಬಳದ ಫೋಟೋಗ್ರಾಫಿ, ಎಐ ಕ್ರಿಯೇಟಿವ್ ಯೋಧ ಸ್ಪರ್ಧೆ ನಡೆಯಲಿದೆ. ಮಂಗಳೂರು ಕಂಬಳ ತುಳುನಾಡಿನ ಸಂಸ್ಕೃತಿಯ ಹಬ್ಬವಾಗಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಮಂಗಳೂರು ಕಂಬಳ ಬೆಳಗ್ಗೆ 8:30ಕ್ಕೆ ಉದ್ಘಾಟನೆಯಾಗಲಿದೆ. ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಉದ್ಘಾಟನೆ ನೆರವೇರಿಸಲಿರುವರು.ಸಭಾ ಕಾರ್ಯಕ್ರಮ ಸಂಜೆ 6 ಗಂಟೆಗೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು , ಬಹುಮಾನ ವಿತರಣೆ ರವಿವಾರ ಬೆಳಗ್ಗೆ ನಡೆಯಲಿದೆ ಎಂದು ವಿವರಿಸಿದರು.

ಕಂಬಳದಲ್ಲಿ ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಹಗ್ಗ ಕಿರಿಯ, ಅಡ್ಡ ಹಲಗೆ ಮತ್ತು ಕನೆಹಲಗೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.160-170 ಕೋಣಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಸಂಚಾಲಕ ಸಾಂತ್ಯಗುತ್ತು ಸಚಿನ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಪ್ರಮುಖರಾದ ಸಂಜಯ ಪ್ರಭು, ಪ್ರಸಾದ್ ಕುಮಾರ್ ಶೆಟ್ಟಿ, ವಿಜಯಕುಮಾರ್ ಕೆಂಗಿನ ಮನೆ, ಜೋಯ್ಲಸ್ ಡಿ ಸೋಜ, ಕಿರಣ್ ಕುಮಾರ್ ಕೋಡಿಕಲ್, ವಸಂತ ಜೆ ಪೂಜಾರಿ, ಅವಿನಾಶ್ ಸುವರ್ಣ, ಬಟ್ಟಿರ ಅಜಿತ್ ಭೋಪಯ್ಯ,ಅಭಿಷೇಕ್ ರೈ ಕುಳಾಲು, ಗುರುಚಂದ್ರ ಹೆಗ್ಡೆ ,ಈಶ್ವರ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X