ಆ. 31: ಕಲ್ಲಚ್ಚು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ "ಕಲ್ಲಚ್ಚು ಪ್ರಶಸ್ತಿ ಪ್ರದಾನ" ಸಮಾರಂಭ ಆಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಝಬೀವುಲ್ಲಾ ಎಂ ಅಸದ್, ಗೋಕಾವಿ ಗೆಳೆಯರ ಬಳಗ, ರೆಮೊನಾ ಎವೆಟ್ ಪೆರೇರಾ ಮತ್ತು ಡಾ ಪ್ರಕಾಶ ಕೇಶವ ನಾಡಿಗ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಣೆ ಆಗಿದೆ.
ಕಸಾಪದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಸಂತೋಷಕುಮಾರ ಮೆಹಂದಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕವಿ ರಘು ಇಡ್ಕಿದು ಅವರು ಅಭಿನಂದನೆ ಹಾಗೂ ಎನ್ ಸುಬ್ರಾಯ ಭಟ್ ಅವರು ಕಾರ್ಕ್ರಮ ನಿರೂಪಿಸಲಿದ್ದಾರೆ
ಈ ಸಮಾರಂಭಕ್ಕೆ ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಮುಖ್ಯಸ್ಥ ಮಹೇಶ ಆರ್ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





