Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾಷೆಗಳ ಉಳಿವಿಗೆ ದೇಶದಲ್ಲಿ ಸಮರ್ಪಕ ಭಾಷಾ...

ಭಾಷೆಗಳ ಉಳಿವಿಗೆ ದೇಶದಲ್ಲಿ ಸಮರ್ಪಕ ಭಾಷಾ ನೀತಿ ಅಗತ್ಯ: ಡಾ.ಪುರುಷೋತ್ತಮ ಬಿಳಿಮಲೆ

ಅಖಿಲ ಭಾರತ ಕೊಂಕಣಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ4 Nov 2023 11:23 PM IST
share
ಭಾಷೆಗಳ ಉಳಿವಿಗೆ ದೇಶದಲ್ಲಿ ಸಮರ್ಪಕ ಭಾಷಾ ನೀತಿ ಅಗತ್ಯ: ಡಾ.ಪುರುಷೋತ್ತಮ ಬಿಳಿಮಲೆ

ಮಂಗಳೂರು, ನ.4: ದೇಶದಲ್ಲಿ ಸಾಕಷ್ಟು ಭಾಷೆಗಳು ಅವನತಿ ಹೊಂದಿವೆ ಮತ್ತು ಅವನತಿಯ ದಾರಿಯಲ್ಲಿವೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸಮರ್ಪಕ ಭಾಷಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರಕಾರವನ್ನು ಆಗ್ರಹಿಸ ಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಅವರು ಇಂದು ನಗರದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಕೊಂಕಣಿ ಸಮ್ಮೇಳನದಲ್ಲಿ ಬರಹಗಾರರ ಸವಾಲುಗಳ ಬಗ್ಗೆ ಹಮ್ಮಿಕೊಂಡಿದ್ದ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈ ಹಿಂದಿನ ದೇಶದ ಜನಗಣತಿಯ ಪ್ರಕಾರ ಯಾವ ಭಾಷೆಗಳು ನಮ್ಮ ನಡುವಿನಿಂದ ಕಣ್ಮರೆಯಾಗಿವೆ ಎಂದು ಗಮನಿಸಬಹುದು. ಉದಾಹರಣೆಗೆ 2001 ಮತ್ತು 2011ರ ಗಣತಿಯನ್ನು ಗಮನಿಸಿದಾಗ ಕೊಂಕಣಿ ಮಾತನಾಡುವವರ ಸಂಖ್ಯೆ 10 ವರ್ಷಗಳಲ್ಲಿ ಶೇ.9.2ಕ್ಕೆ ಇಳಿಕೆ ಯಾಗಿದೆ. ಅದೇ ರೀತಿ ಕೊಡವ ಭಾಷೆ ಮಾತನಾಡುವವರ ಸಂಖ್ಯೆ ಶೇ.30ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಕೊರಗ ಭಾಷೆ ಮಾತನಾಡುವವರ ಸಂಖ್ಯೆ 55,000 ಜನರಿದ್ದರು. ಆದರೆ 2011ರ ಗಣತಿಯಲ್ಲಿ ಕೊರಗ ಭಾಷೆ ಮಾತನಾಡುತ್ತಿರುವವರ ಸಂಖ್ಯೆ ಕೇವಲ 5,000. ಇನ್ನು 5-6ವರ್ಷಗಳಲ್ಲಿ ಈ ಭಾಷೆ ಮಾತನಾಡುವವರೇ ಸಿಗದೆ ಇರಬಹುದು ಎಂದರು.

ಕೊಂಕಣಿ ಭಾಷೆಯೂ ಈ ಹಾದಿಯಲ್ಲೇ ಸಾಗುತ್ತಿದೆ. ಇದು ನಡೆಯುತ್ತಿದ್ದರೂ ಬರಹಗಾರರಾದ ನಾವು ಏನು ಮಾಡದೆ ಕಣ್ಮುಚ್ಚಿ ಕುಳಿತಿರುವುದು ಇಂದಿನ ಸವಾಲು. ದೇಶದಲ್ಲಿ ತ್ರಿಭಾಷಾ ಸೂತ್ರ ಇದೆ. ಅದು ಸಮರ್ಪಕವಾಗಿ ಅನುಷ್ಠಾನ ಗೊಂಡರೆ ಉತ್ತಮ. ಆದರೆ ಒಂದೊಂದು ರಾಜ್ಯದಲ್ಲಿ ಈ ಭಾಷಾ ಸೂತ್ರ ಒಂದೊಂದು ರೀತಿ ಅನುಷ್ಠಾನಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಾಯುತ್ತಿರುವ ನಮ್ಮ ಭಾಷೆಯನ್ನು ಬರಹಗಾರರು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ಕೊರೋನ ಸಂದರ್ಭದಲ್ಲಿ ಜನ ಸಾಮಾನ್ಯರ ಬವಣೆಗಳ ಬಗ್ಗೆ ಬರಹಗಾರರು ಕೃತಿಗಳನ್ನು ರಚಿಸಿರುವುದು ಕಡಿಮೆ. ಇಂತಹ ಸಂದರ್ಭದಲ್ಲಿ ನಮ್ಮ ಸುತ್ತ ಮುತ್ತಲಿನ ವಿದ್ಯಾಮಾನಗಳನ್ನು ಬರಹಗಾರರು ಕಣ್ತೆರೆದು ನೋಡಬೇಕಾಗಿದೆ. ಅದನ್ನು ತಮ್ಮ ಭಾಷೆಯಲ್ಲಿ ಪ್ರಾಮಾಣಿಕವಾಗಿ ತಿಳಿಸಬೇಕಾಗಿದೆ. ಇತರ ಭಾಷೆಗಳಿಗೂ ಭಾಷಾಂತರ ಮಾಡಿ ಜನ ಓದುವಂತೆ ಮಾಡಬೇಕಾಗಿದೆ. ಸರಕಾರವು ಭಾಷೆಯ ಉಳಿವಿಗೆ ಸಮರ್ಪಕವಾದ ಭಾಷಾ ನೀತಿಯನ್ನು ಜಾರಿಗೊಳಿಸಬೇಕಾಗಿದೆ ಎಂದು ಬಿಳಿಮಲೆ ತಿಳಿಸಿದರು.

ಗೋಷ್ಠಿಯಲ್ಲಿ ಉದಯ ವಾಜಪೇಯಿ, ಮಮತಾ ಜಿ. ಸಾಗರ್ ಉಪಸ್ಥಿತರಿದ್ದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X