Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ...

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಆರೋಪ; ಕಾನೂನು ಕ್ರಮಕ್ಕೆ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Nov 2024 1:05 PM IST
share
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಆರೋಪ; ಕಾನೂನು ಕ್ರಮಕ್ಕೆ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯ

ಮಂಗಳೂರು, ನ. 16: ಈಗಾಗಲೇ ಜಿಲ್ಲೆಯಲ್ಲಿ ನಿಷೇಧಿತ ‘ಮನ್ಸ’ ಹೆಸರು ರಾಜ್ಯ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲ. ಆದರೆ ತಮ್ಮನ್ನು ಈ ಜಾತಿಯವರೆಂದು ಕರೆಸಿಕೊಳ್ಳುವ ತುಲುನಾಡ್ ಮನ್ಸ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಈಗಾಗಲೇ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ಪಡೆದು ಸರಕಾರ ಮತ್ತು ಸಮಾಜಕ್ಕೆ ವಂಚಿಸಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನುಕ್ರಮ ವಹಿಸಬೇಕು ಎಂದು ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಸೇವಾ ಸಂಘದ ವತಿಯಿಂದ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಮಾತನಾಡಿ, ಈ ಸಂಘದ ಪದಾಧಿಕಾರಿಗಳು ತಾವು ಹೇಳುತ್ತಿರುವ ನಿಷೇಧಿತ ಪದದ ಜಾತಿಯನ್ನು ಇನ್ನೂ ಸರಕಾರ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸಿಲ್ಲ ಎಂಬುದನ್ನು ತಿಳಿದಿದ್ದರೂ ದುರುದ್ದೇಶರ್ಪೂಕವಾಗಿ ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು, ಸವಲತ್ತುಗಳನು ಪಡೆದು ಮೀಸಲಾತಿ ನೀತಿಯನ್ನು ಅಣಕ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಸಂಘದ ವ್ಯಕ್ತಿಗಳು ಮತ್ತು ಅವರ ಮಕ್ಕಳು ಆದಿ ದ್ರಾವಿಡ, ಹೊಲೆಯ ಅಥವಾ ಇತರ ಯಾವುದೇ ಹೆಸರಿನಲ್ಲಿ ಪಡೆದಿರಬಹುದಾದ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ರದ್ದುಪಡಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಪರಿಶಿಷ್ಟ ಜಾತಿಯ ಹೆಸರಿನಲ್ಲಿ ಪಡೆದ ಉದ್ಯೋಗ, ಜಮೀನು, ಇತರ ವಿಶೇಷ ಸೌಲಭ್ಯವನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡು ಈ ರೀತಿ ಮುಂದೆ ಯಾರೂ ವಂಚನೆ ಮಾಡದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧಪಟ್ಟವರಿಗೆ ದೂರು ನೀಡುತ್ತಿರುವುದಾಗಿ ಅವರು ಹೇಳಿದರು.

ರಾಜ್ಯದ ಅವಿಭಜಿತ ದ.ಕ. ಜಿಲ್ಲೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರುಸೇರಿದಂತೆ ಆದಿ ದ್ರಾವಿಡ ಸಮಾಜದ ಸುಮಾರು ಆರು ಲಕ್ಷ ಜನರಿದ್ದು, ಈ ಸಮುದಾಯವನ್ನು ಒಡೆಯುವ ಹಾಗೂ ಸಮಾಜವನ್ನು ದಾರಿ ತಪ್ಪಿಸುವ ಉದ್ದೇಶದಿಂದ ಇತ್ತೀಚೆಗೆ ತುಳುನಾಡ್ ಮನ್ಸ ಸೇವಾ ಸೇವಾ ಸಂಘ ಪತ್ರಿಕಾಗೋಷ್ಟಿ ನಡೆಸಿ ತಾವು ಮನ್ಸ ಜಾತಿಗೆ ಸೇರಿದವರಾಗಿದ್ದು, ತಮ್ಮ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸಿಲ್ಲವಾದ್ದರಿಂದ ತಾವು ಹಾಗೂ ಇತರರು ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರ ಪಡೆದಿರುವುದಾಗಿ ತಿಳಿಸಿದ್ದಾರೆ. ಆದರೆ ಇಂತಹ ಪ್ರಯೋಜನ ಪಡೆಯುವುದು ಶಿಕ್ಷಾರ್ಹ ಅಪರಾಧ. ಈ ಬಗ್ಗೆ ನಾವು ಕಾನೂನಾತ್ಮಕ ಹೋರಾಟಕ್ಕೂ ಸಿದ್ಧತೆ ನಡೆಸಿದ್ದೇವೆ ಎಂದು ಸತ್ಯಸಾರಮಣಿ ಮೂಲ ಕ್ಷೇತ್ರದ ಕಾರ್ಯದರ್ಶಿ ಗಣೇಶ್ ಪ್ರಸಾದ್ ತಿಳಿಸಿದರು.

ತಮ್ಮ ಯಾವುದೇ ಜಾತಿಗೆ ಸೇರಿಸಬೇಕೆಂಬ ಅವರ ಹೋರಾಟಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಈವರೆಗೆ ಆದಿ ದ್ರಾವಿಡ ಸಮಾಜದ ಹೆಸರಿನಲ್ಲಿ ಸೌಲಭ್ಯಗಳನ್ನು ಪಡೆದು ಇದೀಗ ತಾವು ಬೇರೆ ಜಾತಿ ಎಂದು ಹೇಳಿಕೊಳ್ಳುತ್ತಿರುವುದು ವಂಚನೆಯಾಗಿದೆ. ಒಳ ಮೀಸಲಾತಿ ಬಗ್ಗೆ ಆದಿ ದ್ರಾವಿಡ ಸಮಾಜದ ವಿರೋಧ ಎಂಬುದು ತಪ್ಪು ಮಾಹಿತಿ. ನಮ್ಮ ಬೆಂಬಲವಿದೆ. ಆದರೆ ಈಗಾಗಲೇ ಮಾಡಿರುವ ಆಯೋಗದ ವರದಿಯನ್ನು ಮರು ಪರಿಶೀಲಿಸಿ ತಪ್ಪುಗಳನ್ನು ಸರಿಪಡಿಸಿಕೊಂಡು ವೈಜ್ಞಾನಿಕವಾಗಿ ದತ್ತಾಂಶಗಳನ್ನು ಕ್ರೋಢೀಕರಿಸಬೇಕೆಂಬುದು ನಮ್ಮ ಆಗ್ರಹ ಎಂದವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಬಳ್ಳಾಲ್‌ಬಾಗ್, ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ರಮೇಶ್ ಉಳ್ಳಾಲ್, ಪ್ರೇಮನಾಥ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X