Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿ...

ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿ ವಾರದೊಳಗೆ ಆರಂಭಿಸದಿದ್ದರೆ ಉಪವಾಸ: ದಲಿತರ ನಾಯಕರ ಎಚ್ಚರಿಕೆ

ಮಂಗಳೂರು ತಾಪಂನಲ್ಲಿ ದಲಿತ ಕುಂದುಕೊರತೆಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ6 July 2024 3:59 PM IST
share
ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿ ವಾರದೊಳಗೆ ಆರಂಭಿಸದಿದ್ದರೆ ಉಪವಾಸ: ದಲಿತರ ನಾಯಕರ ಎಚ್ಚರಿಕೆ

ಮಂಗಳೂರು, ಜು.6: ನಗರದ ಹೃದಯ ಭಾಗದಲ್ಲಿ (ಹಿಂದಿನ ಜ್ಯೋತಿ ಟಾಕೀಸ್ ಎದುರು) ಡಾ. ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ವೃತ್ತ ನಿರ್ಮಿಸಬೇಕೆಂಬ ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ನನೆಗುದಿಗೆ ಬಿದ್ದಿದ್ದು, ತಾಪಂ ಕಚೇರಿಯಲ್ಲಿ ಶನಿವಾರ ನಡೆದ ದಲಿತ ಕುಂದುಕೊರತೆಗಳ ಸಭೆಯಲ್ಲೂ ದಲಿತ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು.

ಒಂದು ವಾರದೊಳಗೆ ವೃತ್ತಕ್ಕೆ ಸಂಬಂಧಿಸಿದ ಕಾಮಗಾರಿಗಳು ಆರಂಭಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ದಲಿತ ಮುಖಂಡರು ಸಭೆಯಲ್ಲಿ ನೀಡಿದರು.

ಕಳೆದ ಹಲವು ವರ್ಷಗಳಿಂದ ದಲಿತ ಸಂಘಟನೆಗಳು, ನಾಯಕರು ಜಿಲ್ಲಾಡಳಿತ, ಶಾಸಕರು ಹಾಗೂ ಮನಪಾ ಆಡಳಿತಕ್ಕೆ ದೂರು, ಮನವಿಗಳನ್ನು ನೀಡುತ್ತಿದ್ದರೂ ಅಂಬೇಡ್ಕರ್ ವೃತ್ತ ನಿರ್ಮಾಣದ ಬಗ್ಗೆ ನಿರ್ಲಕ್ಷ್ಯ ತಾಳುವ ಮೂಲಕ ಸಮುದಾಯದ ಜತೆಗೆ ಸಂವಿಧಾನ ಶಿಲ್ಪಿಗೂ ಅವಮಾನ ಮಾಡಲಾಗಿದೆ ಎಂದು ಸಭೆಯಲ್ಲಿ ಜಿನ್ನಪ್ಪ ಬಂಗೇರ, ರಮೇಶ್ ಕೋಟ್ಯಾನ್, ಎಸ್.ಪಿ.ಆನಂದ, ಅಶೋಕ್ ಕೊಂಚಾಡಿ ಸೇರಿದಂತೆ ದಲಿತ ನಾಯಕರನೇಕರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಮಂಗಳಾದೇವಿ, ಲೇಡಿಹಿಲ್, ನಂದಿಗುಡ್ಡೆ, ಕೊಡಿಯಾಲ್ಬೈಲ್ ಮೊದಲಾದ ಕಡೆಗಳಲ್ಲಿ ವೃತ್ತ ನಿರ್ಮಾಣ ಆಗಿದೆ. ಮೇಲ್ವರ್ಗದವರ ಬೇಡಿಕೆ ಬಹು ಬೇಗ ಮಾನ್ಯವಾಗುತ್ತದೆ. ಆದರೆ ದಲಿತರ ಬೇಡಿಕೆಗೆ ಮಾತ್ರ ಯಾವುದೇ ಬೆಲೆ ಇಲ್ಲವಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಹೀಗಾಗುತ್ತಿದೆ. ಕಳೆದ ಆರು ತಿಂಗಳ ಹಿಂದೆಯೂ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆದರೆ ಯಾವುದೇ ಕ್ರಮ ಆಗಿಲ್ಲ. ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ದೌರ್ಜನ್ಯ ಪ್ರಕರಣವನ್ನು ನಾವು ದಾಖಲಿಸಲಿದ್ದೇವೆ ಎಂದು ಜಿನ್ನಪ್ಪ ಬಂಗೇರ ಹಾಗೂ ರಮೇಶ್ ಕೋಟ್ಯಾನ್ ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ವೃತ್ತ ನಿರ್ಮಾಣಕ್ಕೆ ಕ್ರಮವಾಗಿದ್ದು, 40 ಲಕ್ಷ ರೂ. ಮಂಜೂರಾಗಿದೆ. ಅಲ್ಲಿ ಅಂಬೇಡ್ಕರ್ ಪುತ್ಥಳಿಯೂ ಬೇಕು ಎಂಬ ಬೇಡಿಕೆಯ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಮನಪಾ ಅಧಿಕಾರಿ ಸಭೆಯಲ್ಲಿ ತಿಳಿಸಿದಾಗ ಸಭೆಯಲ್ಲಿ ದಲಿತ ನಾಯಕರಿಂದ ಮತ್ತೆ ಆಕ್ಷೇಪಿಸಿದರು.

ಇಂತಹ ತಪ್ಪು ಮಾಹಿತಿ ನೀಡುವುದು ಬೇಡ. ಅಲ್ಲಿ ವೃತ್ತ ನಿರ್ಮಾಣಕ್ಕೆ ಮಾತ್ರವೇ ನಿರ್ಧಾರವಾಗಿದೆ. ಈ ಹಿಂದಿನ ನೀಲಿ ನಕ್ಷೆಯ ಪ್ರಕಾರವೇ ಅಲ್ಲಿ ವೃತ್ತ ನಿರ್ಮಾಣವಾಗಬೇಕು ಎಂದು ದಲಿತ ನಾಯಕರು ಒತ್ತಾಯಿಸಿದರು.

ಕೆಲ ದಿನಗಳ ಹಿಂದೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜತೆ ನಾವು ಮಾತುಕತೆ ನಡೆಸಿದಾಗ 40 ಲಕ್ಷ ರೂ. ಬಿಡುಗಡೆಯಾಗಿದ್ದು, ಮೂರು ದಿನಗಳಲ್ಲಿ ಕಾಮಗಾರಿ ಆರಂಭಿಸುವುದಾಗಿ ಹೇಳಿದ್ದಾರೆ. ಆದರೆ 10 ದಿನಗಳಾದರೂ ಯಾವುದೇ ಕಾಮಗಾರಿ ಆರಂಭಿಸಿಲ್ಲ. ಪ್ರತಿ ಸಭೆಯಲ್ಲಿಯೂ ಸುಳ್ಳು ಭರವಸೆ ಮಾತ್ರ ಸಿಗುತ್ತಿರುವುದರಿಂದ ದೌರ್ಜನ್ಯ ಪ್ರಕರಣ ದಾಖಲಿಸುವ ಜತೆಗೆ ಒಂದು ವಾರದೊಳಗೆ ಕ್ರಮ ಆಗದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಎಸ್.ಪಿ. ಆನಂದ ಹೇಳಿದರು.

ನಿಜಕ್ಕೂ ಇದು ಬೇಸರದ ಸಂಗತಿ. ಪ್ರತೀ ಬಾರಿ ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪವಾಗುತ್ತಿದೆ. ಕಳೆದ ಆರು ತಿಂಗಳ ಹಿಂದೆ ಈ ಬಗ್ಗೆ ಮತ್ತೆ ಚರ್ಚೆಯಾಗಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದಾಗ ಅವರು ಹೇಳುತ್ತಿರುವಂತೆ ಇಚ್ಛಾಶಕ್ತಿ ಕೊರತೆಯ ಆರೋಪ ನಿಜವಾದಂತಾಗುತ್ತದೆ. ನಾಲ್ಕು ದಿನಗಳಲ್ಲಿ ಈ ಬಗ್ಗೆ ಚರ್ಚಿಸಿ ಕಾಮಗಾರಿ ಆರಂಭಕ್ಕೆ ಕ್ರಮ ವಹಿಸಬೇಕು ಎಂದು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಮನಪಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೃತ್ತ ನಿರ್ಮಾಣವಾಗುವ ಜಾಗದಲ್ಲಿ ಟ್ರಾಫಿಕ್ ಪೊಲೀಸರಿಗಾಗಿ ಇರಿಸಲಾಗಿರುವ ತಾತ್ಕಾಲಿಕ ಸ್ಟ್ಯಾಂಡ್ನಲ್ಲಿ ಬ್ಯಾಂಕ್ ನ ಜಾಹೀರಾತು ಇದ್ದು, ಅಂಬೇಡ್ಕರ್ ವೃತ್ತವೆಂಬ ಉಲ್ಲೇಖವಿಲ್ಲ. ಅದನ್ನು ತೆರವುಗೊಳಿಸಬೇಕು. ಹಾಗೂ ಸಮೀಪದಲ್ಲಿ ಅಂಬೇಡ್ಕರ್ ಪಾರ್ಕ್ ಗಾಗಿ ನಿಗದಿಪಡಿಸಿದ ಜಾಗದಲ್ಲಿ ಕಟೌಟ್ ಗಳನ್ನು ಹಾಕಿರುವುದನ್ನು ತೆರವುಗೊಳಿಸಬೇಕು ಎಂದು ದಲಿತ ನಾಯಕರು ಈ ಸಂದರ್ಭ ಮನವಿ ಮಾಡಿದರು.

ಉರ್ವಾಸ್ಟೋರ್ ಬಳಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನದ ಸುತ್ತ ಹುಲ್ಲು ಬೆಳೆದಿದ್ದು, ಟ್ರಾಫಿಕ್ ಪೊಲೀಸರ ಗುಜರಿ ತಾಣವಾಗಿ ಮಾರ್ಪಟ್ಟಿದೆ ಎಂದು ಸದಾಶಿವ ಉರ್ವಾಸ್ಟೋರ್ ಆರೋಪಿಸಿದಾಗ, ಹುಲ್ಲು ಸ್ವಚ್ಛಗೊಳಿಸಿ, ಅಲ್ಲಿರುವ ಗುಜುರಿ ವಾಹನಗಳನ್ನು ತೆರವುಗೊಳಿಸಬೇಕೆಂದು ತಹಶೀಲ್ದಾರ್ ಸೂಚನೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸುಮಾರು 8 ತಿಂಗಳ ಹಿಂದೆ ಕಾನೂನು ಅಧಿಕಾರಿ ಹುದ್ದೆಗೆ ಸಂದರ್ಶನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಸಂದರ್ಶನದಲ್ಲಿ ಭಾಗಿಯೇ ಆಗಿಲ್ಲದವರನ್ನು ಕಾನೂನು ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸಂದರ್ಶನದಲ್ಲಿ ಭಾಗವಹಿಸಿದ್ದವರಿಗೆ ಈ ಬಗ್ಗೆ ಯಾವುದೇ ಮಾಹಿತಿಯೂ ನೀಡಿಲ್ಲ ಎಂದು ವಿಶ್ವನಾಥ ಬಂಟ್ವಾಳ ಆರೋಪಿಸಿದರು.

ಇದಕ್ಕೆ ಮನಪಾ ಅಧಿಕಾರಿ ಪ್ರತಿಕ್ರಿಯಿಸಿ, ಸಂದರ್ಶನದಲ್ಲಿ ಅರ್ಹ ಅಭ್ಯರ್ಥಿ ಬಂದಿಲ್ಲದ ಕಾರಣ, ಆ ಸಂದರ್ಭ ಕಾನೂನು ಅಧಿಕಾರಿಯ ಅಗತ್ಯದ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಒಬ್ಬರನ್ನು ನೇಮಕ ಮಾಡಲಾಗಿದ್ದು, ಮತ್ತೆ ಹುದ್ದೆಗೆ ಸಂದರ್ಶನ ನಡೆಯಲಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ, ಬಿಸಿ ನೀರಿನ ವ್ಯವಸ್ಥೆ ಮಾಡಬೇಕು ಎಂದು ದಲಿತ ನಾಯಕರು ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X