Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಎಲ್‌ಒ ಕರ್ತವ್ಯದಿಂದ ಮುಕ್ತಗೊಳಿಸಿ,...

ಬಿಎಲ್‌ಒ ಕರ್ತವ್ಯದಿಂದ ಮುಕ್ತಗೊಳಿಸಿ, ಇಲ್ಲವಾದರೆ ಸಿ ದರ್ಜೆ ನೌಕರರಾಗಿ ಪರಿಗಣಿಸಿ: ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 July 2025 2:49 PM IST
share
ಬಿಎಲ್‌ಒ ಕರ್ತವ್ಯದಿಂದ ಮುಕ್ತಗೊಳಿಸಿ, ಇಲ್ಲವಾದರೆ ಸಿ ದರ್ಜೆ ನೌಕರರಾಗಿ ಪರಿಗಣಿಸಿ: ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಮಂಗಳೂರು, ಜು.10: ಅಂಗನವಾಡಿ ಕೆಲಸದ ಜತೆಗೆ ಕಳೆದ 18 ವರ್ಷಗಳಿಂದ ಬಿಎಲ್‌ಒ ಕರ್ತವ್ಯವನ್ನು ನಿರ್ವಹಿಸಲು ಅಸಾಧ್ಯವಾಗಿದ್ದು, ನಮ್ಮನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಇಲ್ಲವೇ ಸಿ ದರ್ಜೆ ನೌಕರರೆಂದು ಪರಿಗಣಿಸಿ ಎಂದು ಮಂಗಳೂರು ನಗರದ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷೆ ಆಶಲತಾ ಎಂ.ವಿ., ವಾರ್ಷಿಕವಾಗಿ ಬಿಎಲ್‌ಒ ಕೆಲಸಕ್ಕೆ 7000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದರೆ ಕೈಯಿಂದ ದುಡ್ಡು ಖರ್ಚು ಮಾಡಿ ಈ ಕೆಲಸ ನಿರ್ವಹಿಸುವ ಪರಿಸ್ಥಿತಿ ನಮ್ಮದಾಗಿದೆ. ರಾಜೀನಾಮೆ ನೀಡುತ್ತೇವೆ ಎಂದರೆ ಪ್ರೋತ್ಸಾಹ ಧನ ಹೆಚ್ಚು ಮಾಡುವ ಭರವಸೆ ಮಾತ್ರವೇ ಸಿಗುತ್ತದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಇಲಾಖೆಯಿಂದ ಸಿ ದರ್ಜೆ ನೌಕರರನ್ನು ಬಿಎಲ್‌ಒ ಕರ್ತವ್ಯಕ್ಕೆ ನೇಮಿಸಕಬೇಕೆಂದು ಆದೇಶವಾಗಿದೆ. ಆದರೆ ಮಂಗಳೂರು ನಗರಕ್ಕೆ ಸಂಬಂಧಪಟ್ಟಂತೆ ವಿಧಾನಸಭಾ ಕ್ಷೇತ್ರದಿಂದಲೇ ಸಿ ದರ್ಜೆ ನೌಕರರ ಪಟ್ಟಿ ನಮ್ಮಿಂದಲೇ ಪಡೆದುಕೊಂಡಿದ್ದರೂ, ವಿಎ ಅವರು ಹೆಚ್ಚಿನ ಕಡೆಗಳಲ್ಲಿ ಸಿ ದರ್ಜೆ ನೌಕರ ಪಟ್ಟಿ ಕಡೆಗಣಿಸಿ ಒತ್ತಾಯ ಪೂರ್ವಕವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಎಲ್‌ಒ ಕರ್ತವ್ಯದ ಆದೇಶ ನೀಡಿದ್ದಾರೆ. ಈ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಬಿಎಲ್‌ಒ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮೂರರಿಂದ 6 ವರ್ಷಗಳ ಒಳಗಿನ ಮಕ್ಕಳ ಶಾಲಾ ಪೂರ್ವ ಶಿಕ್ಷಣ, 40 ದಾಖಲಾತಿಗಳು, ತಾಯಂದಿರ ಸಭೆ, ಪೌಷ್ಟಿಕ ಆಹಾರ ಕಾರ್ಯಕ್ರಮ, ಬಾಲ ವಿಕಾಸ ಸಮಿತಿ ಸಭೆ, ಪೋಷಣಾ ಅಭಿಯಾನ ಕಾರ್ಯಕ್ರಮ ಇದರ ಜತೆಗೆ ಪೋಷಣಾ ಟ್ರಾಕ್ಟರ್‌ನಲ್ಲಿ ಕೇಂದ್ರದ ಮಕ್ಕಳ ಎಲ್ಲಾ ಮಾಹಿತಿ ಒದಗಿಸಬೇಕು. ಈಗ ಮನೆಗೆ ಆಹಾರ ವಿತರಣೆ ಮಾಡುವ ಫಲಾನುಭವಿಗಳ ಇಕೆವೈಸಿ, ಫೇಸ್ ಕ್ಯಾಪ್ಚರ್ ಮಾಡಬೇಕು. ಈ ಸಂದರ್ಭ ಪ್ರತಿ ಫಲಾನುಭವಿಗಳ ಒಟಿಪಿ ಕೇಳುವಾಗ ಅನೇಕ ಸಮಸ್ಯೆ ಎದುರಾಗುತ್ತಿದೆ. ಫೇಸ್ ಕ್ಯಾಪ್ಚರ್ ವ್ಯವಸ್ಥೆ ಬಂದ ಬಳಿಕ ಫಲಾನುಭವಿಗಳು ಕೇಂದ್ರದಿಂದ ಆಹಾರ ಪಡೆಯಲು ಇಷ್ಟಪಡುವುದಿಲ್ಲ. ಇತಂಹ ಸಂದರ್ಭದಲ್ಲಿ ಕಾರ್ಯಕರ್ತೆಯರಿಗೆ ಸಮಸ್ಯೆಯಾಗುತ್ತಿದೆ ಎಂದು ಅವರು ದೂರಿದರು.

ಪೋಷಣ್ ಆ್ಯಪ್‌ಗೆ ಭದ್ರತೆ ಒದಗಿಸಿ- ಗೌರವಧನ ನೀಡಿ

ಅಂಗನವಾಡಿ ಮೂಲಕ ಬಾಣಂತಿಯರಿಗೆ ನೀಡುವ ಪೌಷ್ಟಿಕ ಆಹಾರಕ್ಕೆ ಸಂಬಂಧಿಸಿ ಜಾರಿಯಲ್ಲಿರುವ ‘ಪೋಷಣ್ ಆ್ಯಪ್’ನ ಮಾಹಿತಿಗಳು ಸೋರಿಕೆಯಾಗಿರುವ ಅನುಮಾನವಿದೆ. ಮಾತೃ ವಂದನಾ ಫಲಾನುಭವಿಗಳಿಗೆ ಅಪರಿಚಿತ ವ್ಯಕ್ತಿಗಳಿಂದ ದೂರವಾಣಿ ಕರೆ ಬರುತ್ತಿದ್ದು, ಫಲಾನುಭವಿಗಳಿಗೆ 20000 ರೂ. ಮತ್ತು 12000 ರೂ. ಸಿಗುತ್ತಿದ್ದು ಅದಕ್ಕಾಗಿ ಇಲಾಖೆಗೆ 4598 ರೂ.ಗಳನ್ನು ಗೂಗಲ್ ಪೇ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಕರೆ ಮಾಡುವವರು ಫಲಾನುಭವಿಗಳ ಸಂಪೂರ್ಣ ಮಾಹಿತಿಯನ್ನು ಹೇಳುತ್ತಿರುವುದರಿಂದ ಕೆಲವರು ಹಣ ಪಾವತಿ ಮಾಡಿ ಮೋಸ ಹೋಗುತ್ತಿದ್ದಾರೆ. ಈ ರೀತಿ ಹಣ ಪಾವತಿ ಮಾಡುತ್ತಿರುವರ ಖಾತೆಯಲ್ಲಿದ್ದ ಬಾಕಿ ಹಣವನ್ನು ಲಪಟಾಯಿಸಲಾಗುತ್ತಿದ್ದು, ಮಂಗಳೂರಿನಲ್ಲಿ ಹಲವು ಇಂತಹ ಪ್ರಕರಣಗಳು ನಡೆದಿವೆ. ಈ ಬಗ್ಗೆ ಅಂಗನವಾಡಿ ಕೇಂದ್ರಗಳಿಂದ ಫಲಾನುಭವಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದ್ದರೂ, ಕೆಲವೊಂದು ಫಲಾನುಭವಿಗಳು ಅರಿವಿಲ್ಲದೆ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಆಶಲತಾ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರಕಾರದ ಯೋಜನೆಯಾದ ಪೋಷಣ್ ಮೂಲಕ ಫಲಾನುಭವಿಗಳಿಗೆ ಸವಲತ್ತು ಒದಗಿಸುವ ಕಾರ್ಯ ಹಲವು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದರೂ ಈವರೆಗೆ ಗೌರವಧನ ದೊರಕಿಲ್ಲ ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರಿಯರ ಸಂಘದ ಪದಾಧಿಕಾರಿಗಳಾದ ಸುಜಾತ ರೈ, ಸುಜಾತ ಶೆಟ್ಟಿ, ಭವಾನಿ, ಜಯಶ್ರೀ ಉಪಸ್ಥಿತರಿದ್ದರು.

ಮುಂಗಡ ಮೊಟ್ಟೆ ಹಣ ನೀಡದಿದ್ದರೆ ವಿತರಣೆ ಮಾಡುವುದಿಲ್ಲ

ಇಲಾಖೆಯಿಂದ ನೀಡುವ ಮೊಟ್ಟೆಯ ಹಣವನ್ನು ಮುಂಗಡವಾಗಿ ನೀಡದೆ ಇರುವುದರಿಂದ ಫಲಾನುಭವಿಗಳಿಗೆ ಮೊಟ್ಟೆ ವಿತರಣೆ ಮಾಡಲು ಸಮಸ್ಯೆಯಾಗುತ್ತಿದೆ. ಇಲಾಖೆಯಿಂದ ಮೊಟ್ಟೆಯೊಂದಕ್ಕೆ 6 ರಬ. ನೀಡುತ್ತಿದ್ದು ಮೊಟ್ಟೆಯ ಬೆಲೆ 7 ರೂ.ಗಳಾಗಿದೆ. ಈ ಮೊತ್ತವನ್ನು ಕಾರ್ಯಕರ್ತೆಯರು ತಮ್ಮ ಕೈಯಿಂದ ಭರಿಸಿ ಫಲಾನುಭವಿಗಳಿಗೆ ಮೊಟ್ಟೆ ನೀಡಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಮುಂಗಡ ಹಣ ಹಾಕದೆ ಮೊಟ್ಟೆ ವಿತರಿಸದಿರಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಕೋಶಾಧಿಕಾರಿ ವಿಶಾಲಾಕ್ಷಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X