Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುಸ್ತಕಗಳ ಬಗ್ಗೆ ಕೃತಕ ಅಭಿಪ್ರಾಯಗಳು...

ಪುಸ್ತಕಗಳ ಬಗ್ಗೆ ಕೃತಕ ಅಭಿಪ್ರಾಯಗಳು ಅಪಾಯಕಾರಿ ಬೆಳವಣಿಗೆ: ಬಾಲಸುಬ್ರಹ್ಮಣ್ಯ ಕಂಜರ್ಪಣೆ

ವಾರ್ತಾಭಾರತಿವಾರ್ತಾಭಾರತಿ17 Aug 2025 10:07 PM IST
share
ಪುಸ್ತಕಗಳ ಬಗ್ಗೆ ಕೃತಕ ಅಭಿಪ್ರಾಯಗಳು ಅಪಾಯಕಾರಿ ಬೆಳವಣಿಗೆ: ಬಾಲಸುಬ್ರಹ್ಮಣ್ಯ ಕಂಜರ್ಪಣೆ
ಮುನವ್ವರ್ ಜೋಗಿಬೆಟ್ಟು ಅವರ ʼಟಚ್ ಮೀ ನಾಟ್ʼ ಕಥಾ ಸಂಕಲನ ಬಿಡುಗಡೆ

ಮಂಗಳೂರು: ಕನ್ನಡ ಸಾಹಿತ್ಯವನ್ನು ಸಾರಾಸಗಟಾಗಿ ಓದುತ್ತಿದ್ದ ಕಾಲವೊಂದಿತ್ತು. ಅದರಲ್ಲೂ ರವಿವಾರದ ದಿನಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದ ಸಾಹಿತ್ಯವನ್ನು ಇಷ್ಟಪಟ್ಟು ಓದುವವರ ಸಂಖ್ಯೆಯೂ ಹೆಚ್ಚಿತ್ತು. ಸಾಮಾಜಿಕ ಜಾಲತಾಣ ಬಂದ ಬಳಿಕ ಯುವ ಸಮೂಹ ಆ ಓದುವಿನಿಂದ ವಿಮುಖವಾಗಿದೆ. ಪುಸ್ತಕಗಳ ಬಗ್ಗೆ ಕೃತಕ ಅಭಿಪ್ರಾಯ ಪ್ರಕಟಿಸುವ ಧಾವಂತ ಹೆಚ್ಚುತ್ತಿದೆ. ಸಾಹಿತ್ಯದ ದೃಷ್ಟಿಯಿಂದ ಇದು ಹೆಚ್ಚು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹಿರಿಯ ವಿಮರ್ಶಕ, ಅಂಕಣಕಾರ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಹೇಳಿದರು.

ಸಸಿ ಪ್ರಕಾಶನ ಪ್ರಕಟಿಸಿದ, ಮುನವ್ವರ್ ಜೋಗಿಬೆಟ್ಟು ಬರೆದ : ʼಟಚ್ ಮೀ ನಾಟ್ʼ ಕಥಾ ಸಂಕಲನವನ್ನು ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ, ಕನ್ನಡ ವಿಭಾಗ, ರಂಗ ಅಧ್ಯಯನ ಕೇಂದ್ರದ ವಿವಿಯ ರಾಬರ್ಟ್ ಸಿಕ್ವೇರ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈಗ ಸಾಹಿತ್ಯದ ಎಲ್ಲ ಆಗುಹೋಗುಗಳು ಸಾಮಾಜಿಕ ಜಾಲತಾಣಗಳ ಮೂಲಕ ಬೆಳಕಿಗೆ ಬರುತ್ತಿದೆ. ಪತ್ರಿಕೆಗಳಲ್ಲಿ ಪ್ರಕಟಗೊಂಡರೂ ಕೂಡ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪು ಎನ್ನಲಾರೆ ಎಂದ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಈ ಕೃತಿಯ ಒಳಹೂರಣವು ಚೆನ್ನಾಗಿವೆ. ಸಮಾಜವನ್ನು ತಲ್ಲಣ, ಪಲ್ಲಟಗೊಳಿಸುವತ್ತ ಕಥೆಗಾರರು ಪ್ರಯತ್ನಿಸಿದ್ದಾರೆ. ಒಬ್ಬ ಲೇಖಕ ಪ್ರಸಿದ್ಧಿ ಬಯಸುವುದು ಸಹಜ. ಆದರೆ ಓದುಗರ ನೆನಪಿನಲ್ಲಿ ಉಳಿಯುವಂತಹ ಕೃತಿಯನ್ನು ಬರೆದರೆ ಕೃತಿಕಾರರ ಸಾಹಿತ್ಯ ಕೃಷಿಯು ಸಾರ್ಥಕತೆ ಪಡೆಯಲಿದೆ ಎಂದು ಅಭಿಪ್ರಾಯಪಟ್ಟರು.

ಕಥೆಗಾರ್ತಿ ಸುಧಾ ಅಡುಕಳ ಮಾತನಾಡಿ ಇಂದು ಎಣಿಕೆಗೆ ಸಿಗದಷ್ಟು ಕೃತಿಗಳು ಹೊರಬರುತ್ತದೆ. ಸ್ಪರ್ಧೆಗಳಿಂದ ಸಾಹಿತ್ಯ ಬರೆಯುವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕತೆಗಳ ಬಗ್ಗೆ ಕತೆಗಳು ಮತ್ತು ಕತೆಯೊಳಗೆ ಕತೆಗಳೂ ಇರುತ್ತದೆ. ಕತೆಗಳು ಒಂದಕ್ಕೊಂದು ಬೆಸದಂತೆ ಮನಸ್ಸುಗಳನ್ನೂ ಬೆಸೆಯುತ್ತದೆ. ಕತೆಗಳು ಕಿಟಕಿಯಂತೆ. ಒಬ್ಬೊಬ್ಬರು ತಮ್ಮ ಮನೆಯ ಕಿಟಕಿಗಳಲ್ಲಿ ಇಣುಕಿ ನೋಡುವಾಗಿನ ದೃಶ್ಯಗಳು ಬೇರೆ ಬೇರೆ ಆಗಿರುತ್ತದೆ. ಅಂತೆಯೇ ಇಲ್ಲಿನ ಕತೆಗಳು ಕಿಟಕಿಯಂತಿವೆ. ಭಾಷಾ ಪ್ರಯೋಗವೂ ಉತ್ತಮವಾಗಿದೆ. ಕಥಾ ವಸ್ತುವು ವೈವಿಧ್ಯಮವಗಿದೆ ಎಂದು ಹೇಳಿದರು.

ಲೇಖಕ ಮುನವ್ವರ್ ಜೋಗಿಬೆಟ್ಟು ಮತ್ತು ಸಸಿ ಪ್ರಕಾಶನದ ಪ್ರಕಾಶಕ ಜಯರಾಮಾಚಾರಿ ಮಾತನಾಡಿದರು. ಸೈಫ್ ಕುತ್ತಾರ್ ಕಾರ್ಯಕ್ರಮ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X