Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ...

ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ನಿರಾಕರಣೆ ಸಲ್ಲದು: ಡಾ. ತಿಮ್ಮಯ್ಯ

ವಾರ್ತಾಭಾರತಿವಾರ್ತಾಭಾರತಿ29 Jan 2026 10:28 PM IST
share
ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ನಿರಾಕರಣೆ ಸಲ್ಲದು: ಡಾ. ತಿಮ್ಮಯ್ಯ
ಶೀಘ್ರದಲ್ಲಿ ಡಿಸಿ ನೇತೃತ್ವದಲ್ಲಿ ಆಸ್ಪತ್ರೆಗಳ ಪ್ರಮುಖರ ಸಭೆ

ಮಂಗಳೂರು: ರಾಜ್ಯ ಸರಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ(ಎಬಿ-ಎಆರ್‌ಕೆ)ಯಲ್ಲಿ ನೋಂದಾಯಿತ ಯಾವುದೇ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯನ್ನು ನಿರಾಕರಿಸುವಂತಿಲ್ಲ. ಇಂತಹ ದೂರುಗಳು ಕೆಲವು ಆಸ್ಪತ್ರೆಗಳ ವಿರುದ್ಧ ಬಂದಿದೆ . ಇದನ್ನು ಆರೋಗ್ಯ ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಕೆಲವು ಆಸ್ಪತ್ರೆಗಳಲ್ಲಿ ಯೋಜನೆ ಮತ್ತು ಆರೋಗ್ಯ ಮಿತ್ರ ಸಿಬ್ಬಂದಿ ಇದ್ದರೂ, ನಮ್ಮಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಇಲ್ಲ ಎಂದು ಹೇಳಿ ಪೂರ್ಣ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದ.ಕ. ಜಿಲ್ಲಾಧಿಕಾರಿ ಅವರು ನಡೆಸಿದ ಫೋನ್ ಇನ್‌ನಲ್ಲಿ ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ ಎಂದರು.

ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವ ಪ್ರಥಮ ಮತ್ತು ದ್ವಿತೀಯ ಹಂತದ ಕಾಯಿಲೆಗಳಿಗೆ ಹೊರಗೆ ರೆಫರಲ್ ಕೊಡುವುದಿಲ್ಲ. ಕ್ಯಾನ್ಸರ್ ಸಹಿತ ತೃತೀಯ ಹಂತದ ಚಿಕಿತ್ಸೆಗೆ ರೆಫರಲ್ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು

* ಆರೋಗ್ಯ ಕಾರ್ಡ್ ಕಡ್ಡಾಯವಲ್ಲ: ಅಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಸೌಲಭ್ಯ ಪಡೆಯಲು ಆರೋಗ್ಯ ಕಾರ್ಡ್ ಹೊಂದಿರುವುದು ಕಡ್ಡಾಯವಲ್ಲ. ಆರೋಗ್ಯ ಕಾರ್ಡ್ ಇಲ್ಲದಿದ್ದರೂ, ಸೌಲಭ್ಯ ಪಡೆಯಲು ಅರ್ಹರಿರುವ ರೋಗಿಗಳ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ಫೋನ್ ಸಂಖ್ಯೆ, ಪಡಿತರ ಚೀಟಿ ನೀಡಿ, ಈ ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.

*ತುರ್ತು ಚಿಕಿತ್ಸೆಗೆ ನೇರ ಹೋಗಬಹುದು: ಹೃದಯಾಘಾತ, ಅಪಘಾತ ಮೊದಲಾದ ತುರ್ತು ಸಂದರ್ಭದಲ್ಲಿ ನೋಂದಾಯಿತ ಆಸ್ಪತ್ರೆಗೆ ನೇರವಾಗಿ ಕೊಂಡೊಯ್ದು ಚಿಕಿತ್ಸೆ ಪಡೆಯಬಹುದು. ಈ ನಿಟ್ಟಿನಲ್ಲಿ ಈಗಾಗೇ ಎಲ್ಲ ಆಸ್ಪತ್ರೆಗಳಿಗೆ ಪತ್ರ ಬರೆಯಲಾಗಿದೆ.

ನಗರದ ಎಲ್ಲ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯ ಸಿಗುವ ಸಂಬಂಧ ಶೀಘ್ರದಲ್ಲಿ ದ.ಕ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಲ್ಲ ಆಸ್ಪ ತ್ರೆಗಳ ಪ್ರಮುಖರ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.

*108 ಆ್ಯಂಬುಲೆನ್ಸ್ ಉಸ್ತುವಾರಿ ಮತ್ತೆ ಆರೋಗ್ಯ ಇಲಾಖೆಗೆ : 108 ಆ್ಯಂಬುಲೆನ್ಸ್ ವಾಹನಗಳ ಉಸ್ತುವಾರಿ ಪುನಃ ಆರೋಗ್ಯ ಇಲಾಖೆಗೆ ದೊರೆಯಲಿದ್ದು, ಇದಕ್ಕೆ ಸಂಬಂಧಿಸಿ ಪೈಲೆಟ್ ಯೋಜನೆ ಚಾಮರಾಜನಗರದಲ್ಲಿ ಈಗಾಗಲೇ ಅನುಷ್ಠಾನಗೊಂಡಿದೆ.

ದ.ಕ. ಜಿಲ್ಲೆಯಲ್ಲಿ 108 ಆ್ಯಂಬುಲೆನ್ಸ್‌ಗಳ ಸಂಖ್ಯೆ 26 ಇದೆ. ಕೊರತೆ ಇರುವ ಸಿಬ್ಬಂದಿಯ ನೇಮಕಕ್ಕೆ ಶೀಘ್ರದಲ್ಲೇ ಅನುಮತಿ ದೊರೆಯಲಿದೆ ಎಂದು ಹೇಳಿದರು.

ಎನ್‌ಎಚ್‌ಎಂ: 9.67 ಕೋಟಿ ಮಂಜೂರು :ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ವೇತನ ಪಾವತಿಗೆ 9.67 ಕೋಟಿ ಅನುದಾನ ಮಂಜೂರು ಆಗಿದೆ. ನವೆಂಬರ್‌ ನಿಂದ ಜನವರಿ ತನಕ ವೇತನ ಪಾವತಿಗೆ ಬಾಕಿ ಇದೆ. ಶೀಘ್ರದಲ್ಲೇ ಸಿಬ್ಬಂದಿಗೆ ಖಾತೆಗೆ ವೇತನದ ಮೊತ್ತ ಜಮಾ ಆಗಲಿದೆ. ಗುತ್ತಿಗೆ ವೈದ್ಯರು, ಪ್ರಯೋಗಾಲಯ ಸಿಬ್ಬಂದಿ, ಸ್ವಚ್ಛತಾ ಕೆಲಸಗಾರರು ಸೇರಿದಂತೆ ಎಲ್ಲ ಹೊರಗುತ್ತಿಗೆ ನೌಕರರ ಗೌರವಧನವನ್ನೂ ಪಾವತಿಸಲಾಗಿದೆ ಎಂದು ಡಾ. ತಿಮ್ಮಯ್ಯ ಮಾಹಿತಿ ಒದಗಿಸಿದರು.

Tags

Ayushmanschemedenied. registered. private hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X