Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಎಸ್. ಮಹಾಬಲೇಶ್ವರ ಭಟ್ ಅವರ...

ಬಂಟ್ವಾಳ : ಎಸ್. ಮಹಾಬಲೇಶ್ವರ ಭಟ್ ಅವರ ನೂರರ ನೆನಪು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Nov 2023 10:29 PM IST
share
ಬಂಟ್ವಾಳ : ಎಸ್. ಮಹಾಬಲೇಶ್ವರ ಭಟ್ ಅವರ ನೂರರ ನೆನಪು ಕಾರ್ಯಕ್ರಮ

ಬಂಟ್ವಾಳ : ನ.26, ಎಸ್. ಮಹಾಬಲೇಶ್ವರ ಭಟ್ ಅವರು 1942 ರ ಕ್ವಿಟ್ ಇಂಡಿಯಾ ಚಳುವಳಿ ಮತ್ತು ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಂಧನಕ್ಕೆ ಒಳಗಾಗಿದ್ದ ಒಬ್ಬ ಧೀಮಂತ ಸ್ವಾತಂತ್ರ್ಯ ಸೇನಾನಿ ಎಂದು ಮಂಗಳೂರಿನ ತಜ್ಞ ವೈದ್ಯ ಹಾಗೂ ಚಿಂತಕ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅಭಿಪ್ರಾಯಪಟ್ಟರು.

ರವಿವಾರ ಬಂಟ್ವಾಳದ ಎ.ಶಾಂತಾರಾಮ ಪೈ ಸ್ಮಾರಕ ಭವನದಲ್ಲಿ ಜರುಗಿದ ಕಮ್ಯೂನಿಸ್ಟ್ ನಾಯಕ ಎಸ್. ಮಹಾಬಲೇಶ್ವರ ಭಟ್ ರವರ ನೂರರ ನೆನಪು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಎಸ್.ಮಹಾಬಲೇಶ್ವರ ಭಟ್ ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿ ಎಸ್.ವಿ.ಘಾಟೆ, ಸಿಂಪ್ಸನ್ ಸೋನ್ಸ್, ಎ.ಶಾಂತಾರಾಮ ಪೈ, ಬಿ.ವಿ.ಕಕ್ಕಿಲ್ಲಾಯ, ಲಿಂಗಪ್ಪ ಸುವರ್ಣ, ದಾಸಶ್ರೇಷ್ಠರಾದ ಮಾಸ್ಟರ್, ಎ.ಶಿವಶಂಕರ ರಾವ್, ಎಸ್.ಆರ್ ಮುಂತಾದ ಘಟಾನುಘಟಿ ನಾಯಕರ ಸಂಪರ್ಕ ಬೆಳೆಸಿ ಅವರ ಸದಾಶಯದಂತೆ ಸಮ ಸಮಾಜದ ಕನಸು ಕಂಡು ಚಳುವಳಿಯಲ್ಲಿ ಧುಮುಕಿದವರು ಎಂದ ಅವರು ಇಂದು ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹಾಗೂ ಸಾಮರಸ್ಯಕ್ಕೆ ಕಿಂಚಿತ್ತೂ ಕೊಡುಗೆ ನೀಡದ ಶಕ್ತಿಗಳಿಂದ ದೇಶ ಪ್ರೇಮದ ಪಾಠ ಕೇಳುವ ದುರಂತ ಬಂದೊದಗಿದೆ. ಸಾಮರಸ್ಯದಲ್ಲಿ ಬದುಕಲು ಪೂರಕವಾದ ಎಲ್ಲಾ ಕ್ಷೇತ್ರಗಳನ್ನು ಈ ಶಕ್ತಿಗಳು ಅತಿಕ್ರಮಿಸಿಕೊಂಡಿದ್ದಾರೆ. ಖಾಲಿಯಾದ ಜಾಗವನ್ನು ಮರು ಪಡೆಯುವುದೇ ಮಹಾಬಲೇಶ್ವರ ಭಟ್ ರವರಿಗೆ ಕೊಡುವ ನಿಜವಾದ ಗೌರವ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಾನು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷನಾಗಿದ್ದ ಸಂದರ್ಭ ಮಹಾಬಲೇಶ್ವರ ಭಟ್ ನಿರ್ದೇಶಕರಾಗಿದ್ದರು. ನಮಗೆ ವಯಸ್ಸಿನ ಅಂತರ ತೀರಾ ವ್ಯತ್ಯಾಸ ಇದ್ದರೂ ಹಿರಿಯ ಕಿರಿಯ ಎಂಬ ಭೇದ ಭಾವ ಇಲ್ಲದೇ ಅಪಾರ ಗೌರವ ನೀಡುತ್ತಿದ್ದರು. ಇದು ಅವರ ಕಮ್ಯೂನಿಸ್ಟ್ ಚಿಂತನೆ. ಮೇಲ್ವರ್ಗದ, ಶ್ರೀಮಂತ ಜಮೀನ್ದಾರಿ, ಕುಲೀನ ಮನೆತನದಲ್ಲಿ ಜನಿಸಿ, ಸಾಮಾಜಿಕ ನ್ಯಾಯವನ್ನು ದುರ್ಬಲ ಅತೀ ಹಿಂದುಳಿದ ವರ್ಗದ ದೀನದಲಿತರ ಪರವಾಗಿ ಕಾಳಜಿ ವಹಿಸಿ ಕೆಲಸ ಮಾಡುವ ಹೃದಯದ ಶ್ರೀಮಂತಿಕೆ ಮಹಾಬಲೇಶ್ವರ ಭಟ್ಟರದ್ದು. ಇಂತಹ ವ್ಯಕ್ತಿಗಳು ಅಪರೂಪ ಎಂದ ಅವರು ಭಾರತ ಕಮ್ಯೂನಿಸ್ಟ್ ಪಕ್ಷದ ಗೇಣಿದಾರರ ಪರವಾದ ಹೋರಾಟ ಅವಿಸ್ಮರಣೀಯ. ಅದರಲ್ಲೂ ಬಂಟ್ವಾಳ ತಾಲೂಕಿನಲ್ಲಿ ಐತಿಹಾಸಿಕ ಹೋರಾಟ ನಡೆದಿದೆ. ಅದರ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡವರು ಎಸ್.ಮಹಾಬಲೇಶ್ವರ ಭಟ್. ಆದರೆ ಇಂದು ಭೂ ಸುಧಾರಣೆ ಮುಖೇನ ಭೂಮಿ ಪಡೆದವರಿಗೆ ಅದು ಯಾರಿಂದ ಬಂದಿದೆ ಎಂದು ತಿಳಿಯದೇ ಇರುವುದು ವಿಪರ್ಯಾಸ ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಅತ್ಯಂತ ಸರಳ ಸಜ್ಜನ ಮಹಾಬಲೇಶ್ವರ ಭಟ್ ರವರಿಗೆ ನನ್ನ ತಂದೆ ಸಂಜೀವ ಗಟ್ಟಿ ಯವರು ನಿಕಟವರ್ತಿಯಾಗಿದ್ದರು. ಕೊಡುಗೈ ದಾನಿಯಾದ ಮಹಾಬಲೇಶ್ವರ ಭಟ್ ರವರ ಸವರ್ಕುಡೇಲು ಮನೆತನದ ಸುಮಾರು 5 ಎಕರೆ ಜಾಗವನ್ನು ಶಾಲೆಗೆ ದಾನವಾಗಿ ನೀಡಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಒಬ್ಬ ವ್ಯಕ್ತಿಯನ್ನು ನಾವು ನೂರ್ಕಾಲ ನೆನಪಿಸಿಕೊಳ್ಳುವುದೇ ಅವರ ವ್ಯಕ್ತಿತ್ವ ಎಂಬುದನ್ನು ಬಿಂಬಿಸುತ್ತದೆ ಎಂದರು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎನ್.ಪದ್ಮನಾಭ ರವರು ತನಗೆ ಮಹಾಬಲೇಶ್ವರ ಭಟ್ ಮಾಡಿದ ಸಹಾಯ ಹಾಗೂ ತನ್ನ ವ್ಯಕ್ತಿತ್ವ ಬೆಳೆಸಲು ಸಹಕರಿಸಿರುವುದನ್ನು ನೆನಪಿಸಿಕೊಂಡರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಎಐಟಿಯುಸಿ ನಾಯಕರಾದ ವಿ.ಕುಕ್ಯಾನ್, ಮಹಾಬಲೇಶ್ವರ ಭಟ್ ರವರ ಪುತ್ರ ಡಾ.ಉದಯ ಶಂಕರ್, ಪುತ್ರಿ ಡಾ.ಮಾಧವಿ, ನರಿಂಗಾನ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಮಾತನಾಡಿದರು.

ಸಿಪಿಐ ನಾಯಕ ಅಮ್ಟಾಡಿ ಗ್ರಾಮ ಪಂಚಾಯಿತ್ ಸದಸ್ಯ ಬಿ.ಬಾಬು ಭಂಡಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ, ಸಹ ಕಾರ್ಯದರ್ಶಿ ಪ್ರೇಮನಾಥ ಕೆ ವಂದಿಸಿದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X