Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳಪು ಸಹಕಾರಿ ಸಂಘ ಶೇ.12 ಡಿವಿಡೆಂಡ್...

ಬೆಳಪು ಸಹಕಾರಿ ಸಂಘ ಶೇ.12 ಡಿವಿಡೆಂಡ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Sept 2023 10:52 PM IST
share
ಬೆಳಪು ಸಹಕಾರಿ ಸಂಘ ಶೇ.12 ಡಿವಿಡೆಂಡ್ ಘೋಷಣೆ

ಉಚ್ಚಿಲ: ಬೆಳಪು ವ್ಯವಸಾಯ ಸಹಕಾರಿ ಸಂಘವು 2012-13 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಸಾಧಿಸಿದ್ದು, ಸಂಘವು ಈ ವರ್ಷ 5.72 ಕೋಟಿ ಸರ್ವಕಾಲಿಕ ಲಾಭ ಗಳಿಸಿದ್ದು ವಾರ್ಷಿಕ ನಿವ್ವಳ ಲಾಭ 51 ಲಕ್ಷವಾಗಿರುತ್ತದೆ ಸದಸ್ಯರಿಗೆ 12% ಡಿವಿಡೆಂಡ್ ನೀಡುವುದಾಗಿ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಘೋಷಿಸಿದರು.

ಶನಿವಾರ ಉಚ್ಚಿಲ ಸಹಕಾರಿ ಮಹಲ್ ಸಭಾಂಗಣದಲ್ಲಿ ನಡೆದ ಬೆಳಪು ವ್ಯವಸಾಯ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ವಾರ್ಷಿಕ ವ್ಯವಹಾರ 300 ಕೋಟಿ ದಾಟಿದೆ. ಮುಂದಿನ ವರ್ಷ 400 ಕೋಟಿ ರೂ. ವ್ಯವಹಾರ ನಡೆಸುವ ಗುರಿ ಹೊಂದಿದೆ ಎಂದರು.

ಸಂಘಕ್ಕೆ ಉಚ್ಚಿಲ ಶಾಖೆಯಲ್ಲಿ ನಬಾರ್ಡ್ ಯೋಜನೆಯಡಿ 3.70 ಕೋಟಿ ವೆಚ್ಚದಲ್ಲಿ ಸಹಕಾರಿ ಮಹಲ್ ಸ್ಥಾಪನೆಗೆ ಮಂಜೂ ರಾತಿ ದೊರಕಿದ್ದು, ಈ ಮಹಲ್‍ನಲ್ಲಿ ಶಾಪಿಂಗ್ ಮಹಲ್, ಸಹಕಾರಿ ಸಭಾಂಗಣ, ರೈತರ ದಾಸ್ತಾನು ಕೊಠಡಿ ಮತ್ತು ವಿವಿಧ ರೈತ ಸಲಕರಣೆಗಳ ಮಾರಾಟ ಮಳಿಗೆ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪ್ರಾಥಮಿಕ ಸಹಕಾರಿ ಕ್ಷೇತ್ರದಲ್ಲಿ ದಾಖಲೆಯ ಸಾಧನೆಗೆ ಪಾತ್ರವಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಜನೌಷಧಾಲಯ ಮತ್ತು ಕೃಷಿ ರಾಸಾಯನಿಕ ಔಷಧಿ ಕೇಂದ್ರವನ್ನು ಸಾರ್ವಜನಿಕರಿಗೆ ಸೇವಾ ಮನೋ ಭಾವನೆಯೊಂದಿಗೆ ಪ್ರಾರಂಭಿಸಲಾಗುವುದು ಎಂದರು. ಪಣಿಯೂರಿನ ಪ್ರಧಾನ ಕಛೇರಿಯನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ ಹಾಗೂ ಗ್ರಾಹಕರ ಬೇಡಿಕೆಯಂತೆ ದೊಡ್ಡ ಗಾತ್ರದ ಸೇಫ್ ಲಾಕರ್ ಅಳವಡಿಸಲಾಗಿದೆ. ಉಚ್ಚಿಲ ಶಾಖೆಯಲ್ಲಿ ಗ್ರಾಹಕರ ಸೇಫ್ ಲಾಕರ್ ಅಳವಡಿಸಲಾಗಿದೆ ಎಂದರು.

ವಿದ್ಯಾರ್ಥಿ ವೇತನ, ಧನಸಹಾಯ: ಸಂಘದ ವ್ಯವಹಾರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಖೆಯ ಏಳು ಮತ್ತು ಹತ್ತನೆಯ ತರಗತಿಯಲ್ಲಿ ಗರಿಷ್ಠ ಅಂಕ ಪಡೆದ ಪ್ರಥಮ ಹಾಗೂ ದ್ವಿತೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು, ನವೋದಯ ಗುಂಪಿನ ಸದಸ್ಯರ ಮಕ್ಕಳಿಗೆ ಶಾಲೆಯಲ್ಲಿ ಗರಿಷ್ಠ ಅಂಕ ಪಡೆದವರಿಗೆ ವಿದ್ಯಾರ್ಥಿವೇತನವನ್ನು ಹಾಗೂ ನಮ್ಮ ಸಂಘದ ಸದಸ್ಯರ ಮಕ್ಕಳು 10 ನೇ ಮತ್ತು ಪಿಯುಸಿ ಯಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿವೇತನ ಹಾಗು ಅನಾರೋಗ್ಯ ಪೀಡಿತರಿಗೆ ಆರ್ಥಿಕ ಧನಸಹಾಯ ವಿತರಿಸಲಾಯಿತು.

ಸಂಘದ ನಿರ್ದೇಶಕರಾದ ಪಾಂಡು ಶೆಟ್ಟಿ,ಪಾಂಡು ಶೇರಿಗಾರ,ಗೋಪಾಲ ಪೂಜಾರಿ,ಆಲಿಯಬ್ಬ,ಸೈಮನ್ ಡಿ'ಸೋಜ, ಮೀನ ಪೂಜಾರ್ತಿ,ಅನಿತ,ವಿಮಲ ಅಂಚನ್, ಬಾಲಕೃಷ್ಣ ಎಸ್. ಆಚಾರ್ಯ, ಶೋಭ ಬಿ. ಭಟ್,ದ್ಯುಮಣಿ ಆರ್ ಭಟ್,ಹಾಗು ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿಗಳಾದ ಬಾಲಕೃಷ್ಣ ಭಟ್ ಉಪಸ್ಥಿತಿತರಿದ್ದರು. ಸಂಘದ ಆಡಳಿತ ಮಂಡಳಿ ನಿರ್ದೆಶಕ ಬಾಲಕೃಷ್ಣ ಎಸ್.ಆಚಾರ್ಯ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಲೋಚನ ವಾರ್ಷಕ ವರದಿ ಮಂಡಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X