ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ, ಹಯಾತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ನೂರನೇ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ,ಜೂ.26 : ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಳ್ರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಫೈಝಿ ಯವರು ದುಆ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯ ಅವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದ ಅವರು ಈ ಕಾರ್ಯಕ್ರಮಕ್ಕೆ ಎಲ್ಲರಿಗೂ ಅಹ್ವಾನ ನೀಡಿದರು.
ಖಿಳ್ರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ರಝಾಕ್ ಬಿ.ಎಚ್, ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹ್ಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.
ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು. ಮುಖ್ಯೋಪಾಧ್ಯಾಯರಾದ ಸಿದ್ದೀಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಖಬರ್ ಝಿಯಾರತ್ ಮಾಡಿ ಸಿಹಿ ತಿಂಡಿ ಹಂಚಿದರು.







