Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ʼಪುರುಷರ ಪೂಜೆʼ ವೇಳೆ...

ಬೆಳ್ತಂಗಡಿ | ʼಪುರುಷರ ಪೂಜೆʼ ವೇಳೆ ಮುಸ್ಲಿಂ ಸಮುದಾಯದ ಅವಹೇಳನ ಆರೋಪ : ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ15 April 2025 3:41 PM IST
share
ಬೆಳ್ತಂಗಡಿ | ʼಪುರುಷರ ಪೂಜೆʼ ವೇಳೆ ಮುಸ್ಲಿಂ ಸಮುದಾಯದ ಅವಹೇಳನ ಆರೋಪ : ದೂರು ದಾಖಲು

ಬೆಳ್ತಂಗಡಿ : ವೇಣೂರು ಸಮೀಪ ಪೆರ್ಲಡ್ಕದಲ್ಲಿ ʼಪುರುಷರ ಪೂಜೆʼ ಆಚರಣೆಯ ವೇಳೆ ಕೆಲವು ಕಿಡಿಗೇಡಿಗಳು ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಎಸ್‌ಡಿಪಿಐ ವೇಣೂರು ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಈ ಕುರಿತ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಮುಸ್ಲಿಂ ಮಹಿಳೆಯಂತೆ ಬುರ್ಖಾ ಧರಿಸಿದ ವ್ಯಕ್ತಿಯೋರ್ವ ಅಸಭ್ಯ ರೀತಿಯಲ್ಲಿ ಕುಣಿದಾಡುತ್ತಿದ್ದಾನೆ. ಮತ್ತೋರ್ವ ವ್ಯಕ್ತಿ ಮುಸ್ಲಿಮರು ಧರಿಸುವ ಟೋಪಿಯನ್ನು ಧರಿಸಿ ಓಡಾಡುತ್ತಿದ್ದಾನೆ. ಧಾರ್ಮಿಕ ಉಡುಪುಗಳನ್ನು ಅಗೌರವ ಮತ್ತು ಅಪಹಾಸ್ಯ ಮಾಡುವ ರೀತಿಯಲ್ಲಿ ಧರಿಸಿರುವುದು ವೀಡಿಯೊದಲ್ಲಿ ಕಂಡು ಬಂದಿದೆ. ಅಲ್ಲದೇ, ವಿಡಿಯೋದಲ್ಲಿ ಎಸ್‌ಡಿಪಿಐ ಪಕ್ಷದ ಧ್ವಜವೊಂದನ್ನು ಯುವಕನೋರ್ವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವುದು ಕಂಡು ಬರುತ್ತಿದೆ.

ಉದ್ದೇಶಪೂರ್ವಕವಾಗಿ ಸಮಯದಾಯವನ್ನು ಅವಮಾನಿಸಲು ಈ ರೀತಿ ಮಾಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಪಕ್ಷದ ಧ್ವಜ ದುರ್ಬಳಕೆ ಆರೋಪಿಸಿ SDPI ವೇಣೂರು ಠಾಣೆಗೆ ದೂರು ನೀಡಿದೆ.

ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡುವ ದುರುದ್ದೇಶದಿಂದ ಮುಸ್ಲಿಂ ಧಾರ್ಮಿಕ ವೇಷ ಧರಿಸಿ ಹಾಗೂ ಎಸ್ಡಿಪಿಐ ಪಕ್ಷದ ಅಧಿಕೃತ ಧ್ವಜವನ್ನು ಕಳ್ಳತನ ಮಾಡಿ ದುರ್ಬಳಕೆ ಮಾಡಿದ್ದಾರೆಂದು ಎಸ್ಡಿಪಿಐ ವೇಣೂರು ಗ್ರಾಮ ಸಮಿತಿ ವೇಣೂರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದೆ.

ʼವೇಣೂರಿನ ಪೆರ್ಲಡ್ಕದಲ್ಲಿ ಪುರುಷರಪೂಜೆ ಎಂಬ ಪಾರಂಪರಿಕ ಆಚರಣೆಯಲ್ಲಿ ಕೆಲ ಕಿಡಿಗೇಡಿಗಳು ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡುವ ದುರುದ್ದೇಶದಿಂದ ಮುಸ್ಲಿಂ ಸಮುದಾಯದ ಗುರುಗಳು ಧರಿಸುವ ಟೋಪಿ ಹಾಗೂ ಮಹಿಳೆಯರ ವೇಷ ಭೂಷಣ ಧರಿಸಿಕೊಂಡು ಧಾರ್ಮಿಕ ನಿಂದನೆ ಮಾಡಿದ್ದಾರೆ. ಅದೇ ರೀತಿ ಎಸ್‌ಡಿಪಿಐ ಪಕ್ಷದ ಅಧಿಕೃತ ಧ್ವಜವನ್ನು ಕಳ್ಳತನ ಮಾಡಿ ದುರ್ಬಳಕೆ ಮಾಡಿರುತ್ತಾರೆ. ಇಂತಹ ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ವೇಳೆ ಎಸ್‌ಡಿಪಿಐ ಮುಖಂಡರಾದ ಹಮೀದ್ ವೇಣೂರು, ಅಶ್ರಫ್ ಬದ್ಯಾರು, ನಿಝಾಮ್ ಕಟ್ಟೆ, ಅಸ್ಲಾಂ ಮದ್ದಡ್ಕ, ರಿಝ್ವಾನ್ ಉಪಸ್ಥಿತರಿದ್ದರು.

In #Belthangady's #Venur, individuals dressed in #Muslim religious and women's attire performed a dance with the intent to insult the Muslim community.At a #Hindu traditional event held in a place called #Purusharakatte, miscreants misused the occasion. A video shows them… pic.twitter.com/zYvR5TW0kq

— Hate Detector (@HateDetectors) April 15, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X