Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ...

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ರೂ. ಹಗರಣ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ24 May 2025 1:54 PM IST
share
ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ರೂ. ಹಗರಣ; ಪ್ರಕರಣ ದಾಖಲು

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024 ರವರೆಗೆ ಸೊಸೈಟಿಯಲ್ಲಿ ಜವಬ್ದಾರಿ ವಹಿಸಿಕೊಂಡಿದ್ದ 14 ಜನರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ(ರಿ) ನಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಕೋಟ್ಯಾಂತರ ರೂಪಾಯಿ ಹಣ ವಾಪಸ್ ಗ್ರಾಹಕರಿಗೆ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಗ್ರಾಹಕರು ಒಟ್ಟಾಗಿ ಸೇರಿ ದಾಖಲೆಗಳನ್ನು ತೆಗೆದು ಡಿಸಿ, ಎಸ್ಪಿ, ಸಹಕಾರ ಸಂಘ, ಗ್ರಾಹಕರ ವೇದಿಕೆ ಸೇರಿದಂತೆ ಎಲ್ಲಾ ಕಡೆ ದೂರು ನೀಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕೆ.ಪಿ.ಐ.ಡಿ ಅಧಿನಿಯಮದ ಕಲಂ 3ರಂತೆ ದೂರು ನೀಡಲಾಗಿತ್ತು. ಅದಾದ ಬಳಿಕ ಇದೀಗ ಠೇವಣಿ ಇರಿಸಿ ಹಣ ಕಳೆದುಕೊಂಡ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಹಾಗು ಇತರ 12 ಮಂದಿ ಗ್ರಾಹಕರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.23 ರಂದು KARNATAKA PROTECTION OF INTEREST DEPOSITIONS EXORBITANT ACT 2004 (u/s -9) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

2021 ರಿಂದ 2024 ರ ವರೆಗೆ ಬ್ಯಾಂಕ್ ನಲ್ಲಿ ಕರ್ತವ್ಯದಲ್ಲಿದ್ದ ಬ್ಯಾಂಕ್ ಸಿಇಒ ಚಂದ್ರಕಾಂತ್, ಅಧ್ಯಕ್ಷ ಪ್ರಭಾಕರ ಸಿ.ಹೆಚ್, ಉಪಾಧ್ಯಕ್ಷ ಸದಾನಂದ.ಎಮ್ ಉಜಿರೆ, ನಿರ್ದೇಶಕ ರುಗಳಾದ ವಿಶ್ವನಾಥ.ಆರ್.ನಾಯಕ್, ಪ್ರಮೋದ್. ಆರ್‌.ನಾಯಕ್, ವಿಶ್ವನಾಥ, ಜಗನ್ನಾಥ.ಪಿ, ರತ್ನಾಕರ, ಸುಮ ದಿನೇಶ್ ಉಜಿರೆ, ನಯನ ಶಿವಪ್ರಸಾದ್, ಮೋಹನ್ ದಾಸ್.ಕೆ, ಕಿಶೋರ್ ಕುಮಾರ್ ಲಾಯಿಲ, ಬ್ಯಾಂಕ್ ಸಿಬ್ಬಂದಿ ಸರಿತಾ.ಎಸ್ ಮತ್ತು ವಿನೋದ್ ಕುಮಾರ್.ಸಿ.ಹೆಚ್ ಸೇರಿ ಒಟ್ಟು 14 ಮಂದಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಯಾನಂದ ನಾಯಕ್, ನಿಧೀಶ್‌.ಡಿ. ನಾಯಕ್, ಶ್ರದ್ಧಾ.ಬಿ ಮಾಲಿನಿ.ಟಿ.ರಾವ್, ತುಕರಾಮ್ ರಾವ್, ಅಕ್ಷಯಾ.ಟಿ.ರಾವ್, ಅಕ್ಷತಾ ರಾವ್, ಚೈತ್ರಾ ಭಟ್, ಮೈತ್ರಿ ಭಟ್, ಸ್ವಾತಿ ಭಟ್, ನಂದಕುಮಾರ್, ಬಿ.ಗಣೇಶ್ ಭಟ್, ವಿದ್ಯಾ ಭಟ್ ಸೇರಿ 13 ಮಂದಿ ದೂರು ನೀಡಿದ್ದಾರೆ. ತಾವು ಬ್ಯಾಂಕಿ‌ಲ್ಲಿ ವಿವಿಧ ಸಂದರ್ಭದಲ್ಲಿ ಠೇವಣೆ ಇರಿಸಿದ್ದ ರೂ 4 ಕೋಟಿಗೂ ಅಧಿಕ ಮೊತ್ತವನ್ನು ಠೇವಣೆ ಅವಧಿ ಮುಗಿದು ಮರಳಿ ಕೇಳಿದಾಗ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷರು ಹಾಗು ನಿರ್ದೆಶಕರುಗಳು ಹಣವನ್ನು ಹಿಂದಕ್ಕೆ ನೀಡಿರುವುದಿಲ್ಲ ಹಾಗೂ ಈ ಬಗ್ಗೆ ಮತ್ತೆ ವಿಚಾರಿಸಿದಾಗ ಇವರು ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಈ ಬಗ್ಗೆ ಸಹಕಾರಿ ಸಂಘಗಳ ನಿಬಂಧಕರು ಮಂಗಳೂರು ಇವರ ನಿರ್ದೇಶನದಂತೆ ಸಂಸ್ಥೆಯ ಹಣಕಾಸು ವ್ಯವಹಾರಗಳ ಬಗ್ಗೆ ಲೆಕ್ಕ ಪರಿಶೋಧನೆಯನ್ನು ನಡೆಸಿದ್ದು, ಈ ವೇಳೆ ಸುಳ್ಳು ಸಾಲದ ಖಾತೆಗಳನ್ನು ತೆರೆದು ಕೋಟ್ಯಾಂತರ ರುಪಾಯಿ ಸಾಲ ಪಡೆದಿರುವುದು ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರಿಗೆ ಕೆ.ಪಿ.ಐ.ಡಿ ಅಧಿನಿಯಮದ ಕಲಂ 3ರಂತೆ ದೂರು ನೀಡಲಾಗಿದೆ. ಇದಾದ ಬಳಿಕ ಇದೀಗ ಪೊಲೀಸರಿಗೂ ದೂರು ನೀಡಲಾಗಿದ್ದು, ತಾವು ವಂಚನೆಗೆ ಒಳಗಾಗಿರುವಂತೆ ಇನ್ನೂ ಹಲವರು ಇದೇ ಸಂಸ್ಥೆಯಲ್ಲಿ ಹಣವನ್ನು ಠೇವಣಿಯಾಗಿ ಇರಿಸಿದ್ದು ಒಟ್ಟು ಸುಮಾರು 40ಕೋಟಿ ರುಪಾಯಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಅದರಂತೆ ಎಫ್.ಐ.ಆರ್ ದಾಖಲಿಸಲಾಗಿದೆ.

ಸುಮಾರು 200 ಕ್ಕೂ ಮಿಕ್ಕಿ ಗ್ರಾಹಕರಿಗೆ ಈ ಸೊಸೈಟಿಯಿಂದ ವಂಚನೆಯಾಗಿದ್ದು ಕೆಲವರು ದೂರು ಕೊಡಲು ಮುಂದೆ ಬರುತ್ತಿಲ್ಲ ಈಗ ನಾವು 13 ಮಂದಿ ನೊಂದವರು ಮುಂದೆ ಬಂದು ದೂರು ನೀಡಿದ್ದೇವೆ. ತಾಲೂಕಿನ ಬಡವರು, ಸಾಮಾನ್ಯ ಜನರು ಇಲ್ಲಿ ಹಣ ಠೇವಣೆ ಇಟ್ಟಿದ್ದಾರೆ. ನೂರಾರು ಜನರಿಗೆ ಅನ್ಯಾಯವಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಬೇಕು.

ದಯಾನಂದ ನಾಯಕ್, ದೂರುದಾರರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X