Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯಿಂದ...

ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯಿಂದ ಜನತೆಗೆ ಮೋಸ: ಶಾಸಕ ಅಶೋಕ್ ರೈ

ಬಲ್ನಾಡು: ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Oct 2023 6:19 PM IST
share
ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯಿಂದ ಜನತೆಗೆ ಮೋಸ: ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಜನರನ್ನು ಮೋಸ ಮಾಡಿ ಗೆಲ್ಲುವ ಬಿಜೆಪಿ, ಗೆದ್ದ ಬಳಿಕ ಜನರನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ. ಇಷ್ಟು ವರ್ಷ ಆಡಳಿತ ನಡೆಸಿದ ಬಿಜೆಪಿಯವರು ಬಡವರಿಗೆ ಪ್ರಯೋಜನವಾಗುವ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬಲ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾನು ಈ ಹಿಂದೆ ಬಿಜೆಪಿಯಲ್ಲೇ ಇದ್ದೆ, ಬಿಜೆಪಿಯರಿಗೆ ಬಡವರ ಕಷ್ಟ ಬೇಕಾಗಿಲ್ಲ ಅವರಿಗೆ ಚುನಾವಣೆಯಲ್ಲಿ ಗೆಲ್ಲಬೇಕು ಅಷ್ಟೆ ಆದರೆ ಅವರಲ್ಲಿ ಅಭಿವೃದ್ಧಿ ಅಜೆಂಡಾ ಇಲ್ಲ ಹಿಂದುತ್ವದ ಹೆಸರಿನಲ್ಲಿ ಜನತೆಗೆ ಮೋಸ ಮಾಡುವುದೇ ಅವರ ಕಾಯಕವಾಗಿದೆ. ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ಕಳೆದ ಐದು ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ನಿಮಗೆ ಏನು ಕೊಟ್ಟಿದೆ ಎಂಬುದನ್ನು ಚಿಂತಿಸಿ , ಕೇಂದ್ರದಲ್ಲಿರುವ ಬಿಜೆಪಿ ಬೆಲೆ ಏರಿಕೆ ಮಾಡಿ ಜನರನ್ನು ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಹಾಗೆ ಮಾಡಿರುವುದು ಅವರ ಸಾಧನೆಯಾಗಿದೆ ಎಂದು ಹೇಳಿದರು.

ಉಚಿತ ಅಕ್ಕಿ, ಉಚಿತ ಬಸ್, ಉಚಿತ ಕರೆಂಟ್, ತಿಂಗಳಿಗೆ ಖಾತೆಗೆ ಎರಡು ಸಾವಿರ, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್, ಸ್ಟ್ರೈಫಂಡ್ ಎಲ್ಲವನ್ನೂ ನೀಡುತ್ತಿದೆ ಆದರೂ ಕೆಲವರು ಕಾಂಗ್ರೆಸ್ಸನ್ನು ದೂರುತ್ತಿದ್ದಾರೆ, ಕಾಂಗ್ರೆಸ್ ಜನತೆಗೆ ಇನ್ನೇನನ್ನು ಕೊಡಬೇಕು. ಕೊಡಬೇಕಾದ ಎಲ್ಲವನ್ನೂ ಕೊಟ್ಟಿದೆ, ಬಡವರು ಸ್ವಾಭಿಮಾನದಿಂದ ಬದುಕುವ ಹಾಗೆ ಮಾಡಿದೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ಕೊಡುಗೆಯನ್ನು ನೀಡಿದ ಯಾವುದಾದರೂ ಸರಕಾರ ಇದೆಯಾ ಎಂದು ಪ್ರಶ್ನಿಸಿದ ಶಾಸಕರು ಪ್ರತೀಯೊಬ್ಬರು ಅರ್ಥ ಮಾಡಿಕೊಳ್ಳಬೇಕಿದೆ. ದೇಶದಲ್ಲಿ ಬಡವ ನೆಮ್ಮದಿಯ ಜೀವನ ನಡೆಸಬೇಕಾದರೆ ಕಾಂಗ್ರೆಸ್ ಅಧಿಕಾರದಲ್ಲಿರಬೇಕು. ಧರ್ಮದ ಹೆಸರಿನಲ್ಲಿ ದಂಗೆ ಎಬ್ಬಿಸುವ ಬಿಜೆಪಿಯಿಂದ ಅಭಿವೃದ್ಧಿ ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದರು.

ಗೃಹಲಕ್ಷ್ಮಿ ಹಣ ತಾಂತ್ರಿಕ ದೋಷದಿಂದ ಕೆಲವರಿಗೆ ಬಂದಿಲ್ಲ, ಮುಂದಿನ ದಿನಗಳಲ್ಲಿ ಎಲ್ಲರ ಖಾತೆಗೂ ಹಣ ಜಮಾವಣೆ ಯಾಗಲಿದೆ. ಕಾಂಗ್ರೆಸ್ ಕೊಟ್ಟ ಮಾತನ್ನು ಎಂದಿಗೂ ಉಳಿಸುತ್ತದೆ, 15 ಲಕ್ಷ ಕೊಡುವುದಾಗಿ ಹೇಳಿದವರು ಇನ್ನೂ ಆ ಹಣ ಹಾಕಿಲ್ಲ ಈ ಬಗ್ಗೆ ಬಿಜೆಪಿಯವರು ಜನತೆಗೆ ಉತ್ತರವನ್ನು ಕೊಡಬೇಕು ಎಂದು ಹೇಳಿದರು.

ಕ್ಷೇತ್ರದ ಯಾವುದೇ ಒಬ್ಬ ಪ್ರಜೆಗೂ ತೊಂದರೆಯಾದಲ್ಲಿ ನನ್ನ ಕಚೇರಿಗೆ ಬನ್ನಿ. ನಮ್ಮಿಂದಾಗುವ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಹೇಳಿದರು. ಬಿಜೆಪಿಯವರ ಕುತಂತ್ರಕ್ಕೆ ಯಾರೂ ಬಲಿಯಾಗದಿರಿ. ದೇಶದಲ್ಲಿ ಎಲ್ಲಾ ಧರ್ಮ, ಜಾತಿಯವರು ಒಂದೇ ತಾಯಿ ಮಕ್ಕಳಂತೆ ಬದುಕಿದರೆ ಮಾತ್ರ ಭಾರತ ವಿಶ್ವ ಗುರುವಾಗಲು ಸಾಧ್ಯವಾಗುತ್ತದೆ. ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣವನ್ನು ಕಾಂಗ್ರೆಸ್ ಸರಕಾರ ಮಾಡಲಿದೆ ಎಂದು ಹೇಳಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ. ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ ಚಂಧ್ರ ಆಳ್ವ ಬ್ಲಾಕ್ ಉಪಾಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಕಾಂಗ್ರೆಸ್ ಮುಖಂಡ ಅಶ್ರಫ್ ಬಸ್ತಿಕಾರ್, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶರೀಫ್ ರೋಯಲ್, ಕಾಲೇಜ್‍ನ ಕಾರ್ಯಾಧ್ಯಕ್ಷ ಪ್ರಕಾಶ್ ಚಂದ್ರ ಆಳ್ವ, ಕೆ ಬಿ ಅಶ್ರಫ್, ಬಲ್ನಾಡು ಮತ್ತಿತರರು ಉಪಸ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X