Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚುನಾವಣೆಯಲ್ಲಿ ಮಿಶ್ರ ಪ್ರತಿಕ್ರಿಯೆ,...

ಚುನಾವಣೆಯಲ್ಲಿ ಮಿಶ್ರ ಪ್ರತಿಕ್ರಿಯೆ, ಪ್ರತಿಫಲ ಸಿಕ್ಕಿದೆ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ24 Nov 2024 3:11 PM IST
share
ಚುನಾವಣೆಯಲ್ಲಿ ಮಿಶ್ರ ಪ್ರತಿಕ್ರಿಯೆ, ಪ್ರತಿಫಲ ಸಿಕ್ಕಿದೆ : ಬಿ.ಕೆ.ಹರಿಪ್ರಸಾದ್

ಮಂಗಳೂರು : ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆದ ಚುನಾವಣೆಯಲ್ಲಿ ಮಿಶ್ರ ಪ್ರತಿಕ್ರಿಯೆ ಹಾಗೂ ಪ್ರತಿ ಫಲ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ

ನಗರದ ಮಲ್ಲಿಕಟ್ಟೆಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು‌ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೂರರಲ್ಲೂ ಕಾಂಗ್ರೆಸ್ ಪಕ್ಷ ಜಯಿಸಿದೆ. ಕಾಂಗ್ರೆಸ್ ತನ್ನ ಕೈಯಲ್ಲಿದ್ದ ಒಂದನ್ನು ಉಳಿಸಿಕೊಂಡು, ವಿಪಕ್ಷದ ಹಿಡಿತದಲ್ಲಿದ್ದ ಎರಡನ್ನು ಗೆದ್ದುಕೊಂಡು ಅಭೂತಪೂರ್ವ ಯಶಸ್ಸು ಗಳಿಸಿದ್ದು, ಕರ್ನಾಟಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದರು.

ಚುನಾವಣಾ ಮೊದಲು ಕರ್ನಾಟಕದಲ್ಲಿ ವಿಪಕ್ಷಗಳು ಹಲವಾರು ಷಡ್ಯಂತ್ರ , ಕುತಂತ್ರಗಳನ್ನು , ಅಪಪ್ರಚಾರ, ಸುಳ್ಳು ಸುದ್ದಿಯನ್ನು ಹರಡಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಪ್ರಯತ್ನ ಮಾಡಿರುವುದನ್ನು ಜನಸಾಮಾನ್ಯರು ನೋಡಿದ್ದಾರೆ. ಮೊದಲನೆಯದಾಗಿ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಬಗ್ಗೆ, ವಕ್ಫ್, ಭ್ರಷ್ಟಾಚಾರದ ಬಗ್ಗೆ ಇಲ್ಲ ಸಲ್ಲದ ಆರೋಪ, ಭ್ರಷ್ಟಾಚಾರದ ಆರೋಪ, ಈಡಿ, ಸಿಬಿಐ,ಐಟಿ ಸಂಸ್ಥೆ ಗಳ ದುರುಪಯೋಗ ಮಾಡಿಕೊಂಡು ಕಾಂಗ್ರೆಸನ್ನು ಮಣಿಸಲು ವಿಪಕ್ಷಗಳು ಸತತ ಪ್ರಯತ್ನ ಮಾಡಿದರೂ, ಜನತೆ ಅವರನ್ನು ತಿರಸ್ಕರಿಸಿ ಜನತೆ ಒಳ್ಳೆಯ ತೀರ್ಪನ್ನು ನೀಡಿದ್ದಾರೆ. ಅದಕ್ಕಾಗಿ ನಾನು ಕಾಂಗ್ರೆಸ್ ಪಕ್ಷದ ಪರವಾಗಿ ಮತ್ತು ವೈಯಕ್ತಿಕವಾಗಿ ಕರ್ನಾಟಕದ ಜನತೆಯನ್ನು, ಅದರಲ್ಲೂ ಮೂರು ಕ್ಷೇತ್ರಗಳ ಮತದಾರರನ್ನು ಅಭಿನಂದಿಸುತ್ತೇನೆ ಎಂದರು.

ರಾಷ್ಟ್ರ ರಾಜಕಾರಣದ ವಿಚಾರವನ್ನು ನೋಡಿದರೆ ಜಾರ್ಖಂಡ್ ನಲ್ಲಿ ಜೆಎಂಎಂ ,ಕಾಂಗ್ರೆಸ್, ಆರ್ ಜೆಡಿ ಮತ್ತು ಸಿಪಿಐಎಂಎಲ್ ಒಟ್ಟಾಗಿ ಚುನಾವಣೆ ಎದುರಿಸಿ ಯಶಸ್ಸು ಸಾಧಿಸಿದೆ. ಅಲ್ಲಿರುವ 81 ಕ್ಷೇತ್ರಗಳ ಪೈಕಿ 70ರಲ್ಲಿ ಕಾಂಗ್ರೆಸ್ ಮತ್ತು ಜೆಎಎಂ ಸ್ಪರ್ಧೆ ಮಾಡಿದ್ದೆವು. ಆರ್‌ಜೆಡಿ 6ರಲ್ಲಿ ,ಕಮ್ಯುನಿಸ್ಟ್ 2ರಲ್ಲಿ ಸ್ಪರ್ಧಿಸಿದ್ದವು‌. 56 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಿದೆ.

ಕಳೆದ ಬಾರಿ 30 ಸ್ಥಾನಗಳಲ್ಲಿ 16ಸ್ಥಾನಗಳನ್ನು ನಾವು ಜಯಿಸಿದ್ದೆವು. ಅಲ್ಲಿದ್ದ ಜೆಎಂಎಂ ಮುಖ್ಯ ಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ಸರಕಾರ ಐದು ವರ್ಷಗಳನ್ನು ಪೂರ್ಣಗೊಳಿಸಿತ್ತು. ಹೇಮಂತ್ ಸೊರೆನ್ ಗೆ ಐದು ವರ್ಷ ಗಳಲ್ಲಿ ಎರಡು ವರ್ಷ ಕೊರೋನ ಸಮಸ್ಯೆ, ಒಂದು ವರ್ಷ ಅವರಿಗೆ ಜೈಲು, ಉಳಿದ ಎರಡು ವರ್ಷಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದರು. ಅಲ್ಲಿಯೂ ಏಳು ಗ್ಯಾರಂಟಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.

ಜಾರ್ಖಂಡ್ ನಲ್ಲಿ ನುಸುಳುಕೋರರ ವಿಚಾರದಲ್ಲಿ ಅಬ್ಬರದ ಅಪ್ರಚಾರ ನಡೆದಿತ್ತು. ಅಲ್ಲಿನ ಜನತೆ ವಿಪಕ್ಷಗಳ ಅಪ್ರಚಾರವನ್ನು ತಿರಸ್ಕರಿಸಿದ್ದಾರೆ. ಅಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆಆರ್ ಲೋಬೊ, ಪಕ್ಷದ ಪ್ರಮುಖರಾದ ಪದ್ಮರಾಜ್ ಆರ್ ಪೂಜಾರಿ, ಶಶಿಧರ ಹೆಗ್ಡೆ, ಸಾರಿಕಾ ಪೂಜಾರಿ, ಟಿಕೆ ಸುಧೀರ್, ಮಿಥುನ್ ರೈ,ಲುಕ್ಮಾನ್ ಬಂಟ್ವಾಳ, ವಿಕಾಸ್ ಶೆಟ್ಟಿ, ಜಿತೇಂದ್ರ ಸುವರ್ಣ, ಚಿತ್ತರಂಜನ್ ಶೆಟ್ಟಿ, ನವೀನ್ ಡಿ ಸೋಜ ಉಪಸ್ಥಿತರಿದ್ದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X