ಬೋಂದೆಲ್: ಸಂತ ಲಾರೆನ್ಸ್ ಚರ್ಚ್ಗೆ ಭೇಟಿ ನೀಡಿದ ಸಚಿವ ಕೆ.ಜೆ .ಜಾರ್ಜ್

ಮಂಗಳೂರು, ಅ.8: ಕರ್ನಾಟಕ ಸರಕಾರದ ಇಂಧನ ಸಚಿವ ಕೆ.ಜೆ .ಜಾರ್ಜ್ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ಗೆ ಭೇಟಿ ನೀಡಿದರು.
ಧರ್ಮ ಗುರು ವಂ.ಲಾರೆನ್ಸ್ ಕುಟಿನ್ಹಾ ಪಾಲನಾ ಮಂಡಳಿ ಉಪಾಧ್ಯಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯ ರೂಡಿ ಪಿಂಟೊ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ರಚನಾ ಅಧ್ಯಕ್ಷ ಜಾನ್ ಮೊಂತೆರೊ ಉಪಸ್ಥಿತರಿದ್ದರು.
ವಂ. ಧರ್ಮ ಗುರು ಪೀಟರ್ ಗೊನ್ಸಾಲ್ವಿಸ್ ಸ್ವಾಗತಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Next Story





