Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್...

ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದಾಗದು: ಪದ್ಮರಾಜ್

ವಾರ್ತಾಭಾರತಿವಾರ್ತಾಭಾರತಿ23 Nov 2024 2:03 PM IST
share
Photo of Padmaraj

ಮಂಗಳೂರು, ನ. 23: ದ.ಕ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಬಿಜೆಪಿಯವರು ವಿನಾ ಕಾರಣ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆಯೇ ಹೊರತು, ಒಂದು ವೇಳೆ ಪಡಿತರ ಚೀಟಿಗಳ ಪರಿಷ್ಕರಣೆಯ ವೇಳೆ ಅಧಿಕಾರಿಗಳ ತಪ್ಪಿನಿಂದ ಏನೇ ಅಂತಹ ಸಮಸ್ಯೆ ಆಗಿದ್ದರೂ ಅದನ್ನು ಸರಕಾರ ಸರಿ ಮಾಡುವ ಕೆಲಸ ಮಾಡಲಿದೆ ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭರವಸೆ ನೀಡಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿಗಳನ್ನು ಆರ್ಥಿಕವಾಗಿ ಹಿಂದುಳಿದ ಮಾನದಂಡದಂತೆ ನೀಡಬೇಕಾಗಿದ್ದು, ಅನರ್ಹರಿಗೆ ನೀಡಿರುವ ಕಾರ್ಡ್‌ಗಳನ್ನು ಮಾತ್ರವೇ ರದ್ದುಪಡಿಸಲಾಗುತ್ತದೆ ಎಂದರು.

ಕೇಂದ್ರ ಸರಕಾರವು 5.80 ಕೋಟಿ ಇಂತಹ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಆದರೆ ಅದರ ಬಗ್ಗೆ ಚಕಾರವೆತ್ತದ ಬಿಜೆಪಿ ನಾಯಕರು ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರದಲ್ಲಿಯೂ ವಿನಾ ಕಾರಣ ಗೊಂದಲ ಸೃಷ್ಟಿಸುತ್ತಿರುವ ಬಿಜೆಪಿ ನಾಯಕರು ತಮ್ಮ 2019ರಲ್ಲಿ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವಿದ್ದಾಗ 226 ನೋಟೀಸು ನೀಡಿರುವುದನ್ನು ಮರೆತಿದೆ. ಇದು ಪ್ರಕ್ರಿಯೆಯೇ ಹೊರತು ಯಾವುದೇ ಕಾರಣಕ್ಕೂ ರೈತರು, ದೇವಸ್ಥಾನ, ಮಠ ಮಂದಿರಗಳ ಒಂದಿಂಚೂ ಜಾಗವನ್ನು ಕೂಡಾ ಸಾಕ್ಷ ಇಲ್ಲದೆ ವಕ್ಫ್‌ಗೆ ಹಸ್ತಾಂತರಿಸುವ ಕೆಲಸವನ್ನು ಸಿದ್ಧರಾಮಯ್ಯ ನೇತೃತ್ವದ ಸರಕಾರ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ ಎಂದವರು ಹೇಳಿದರು.

ಅದಾನಿ ವಿರುದ್ಧ ಅಮೆರಿಕದ ನ್ಯಾಯ ಇಲಾಖೆ ಮಾಡಿರುವ 2500 ಕೋಟಿರೂ.ಗಳ ಲಂಚ ಆರೋಪದ ರಾಷ್ಟ್ರ ಮಟ್ಟದಲ್ಲಿ ದೇಶ ತಲೆತಗ್ಗಿಸುವ ಕೆಲಸ ಮಾಡಲಾಗಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಪದ್ಮರಾಜ್ ಆಗ್ರಹಿಸಿದರು.

ಜಿಲ್ಲೆಯ ನೂತನ ಸಂಸದ ಬ್ರಿಜೇಶ್ ಚೌಟ ಅವರು ಪರದೇಶದಲ್ಲಿರುವ ನಮ್ಮೂರಿನವರಿಂದ ಹೂಡಿಕೆ ಮಾಡಿಸುವ ಕಾರ್ಯವನ್ನು ನಾನು ಅಭಿನಂದಿಸುತ್ತೇನೆ. ಚುನಾವಣಾ ಪ್ರಣಾಳಿಕೆಯಲ್ಲಿ ನನ್ನ ಭರವಸೆಗಳಲ್ಲಿ ಇದೂ ಸೇರಿದ್ದು, ನೂತನ ಸಂಸದರು ತಮ್ಮ ಹಳೆ ಚಾಳಿಯನ್ನು ಬಿಟ್ಟು ನಡೆಸುವ ಇಂತಹ ಕಾರ್ಯಗಳಿಗೆ ಪಕ್ಷಬೇಧ ಮರೆತು ಸಹಕರಿಸುತ್ತೇವೆ ಎಂದು ಪದ್ಮರಾಜ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಮೊದಲಾದವರು ಉಪಸ್ಥಿತರಿದ್ದರು.

ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್‌ಗ್ಯಾಸ್, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್‌ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್‌ಐಟಿಕೆಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮವಹಿಸಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್‌ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಮನಪಾ ಹಿರಿಯ ಸದಸ್ಯ ಹಾಗೂ ಮಾಜಿ ಮೇಯರ್ ಶಶಿಧರ ಹೆಗ್ಡೆ ಒತ್ತಯಿಸಿದರು.

ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಎಲ್ಲಾ ಚುನಾವಣೋತ್ತರ ಫಲಿತಾಂಶಗಳನ್ನು ಮೀರಿ ಬಂದಿದೆ. ಈ ಮೂಲಕ ಜನತೆ ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅಭಿವೃದ್ಧಿ ಪೂರಕ ಕೆಲಸಕ್ಕೆ ಬೆಂಬಲ ನೀಡಿದಂತಾಗಿದೆ. ಜಾರ್ಕಂಡ್‌ನಲ್ಲಿಯೂ ಸಮೀಕ್ಷೆಯನ್ನು ಮೀರಿ ಕಾಂಗ್ರೆಸ್‌ಗೆ ಗೆಲುವು ದೊರಕಿದೆ. ಮಹಾರಾಷ್ಟ್ರದ ಕಾಂಗ್ರೆಸ್ ಸೋಲನ್ನು ನಾವು ಸ್ವೀಕರಿಸುತ್ತೇವೆ. ಆದರೆ, ಮೀರಾ ಭವರ್ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿದ್ದ ಸಂದರ್ಭ ಅಲ್ಲಿನ ಬೂತ್ ಒಂದರಲ್ಲಿ ನಡೆದ ಚುನಾವಣಾ ಅಕ್ರಮದ ವೇಳೆ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅದರಂತೆ ಮೂರ ಜನ ಅಧಿಕಾರಿಗಳನ್ನು ಅಮಾನತುಗೊಳಿಸುವ ಕಾರ್ಯ ನಡೆದಿತ್ತು. ಅದಾನಿಯವರೇ ಅಲ್ಲಿ ಚುನಾವಣೆ ನಡೆಸುತ್ತಿರುವ ಮಾತು ಕೇಳಿ ಬಂದಿತ್ತು. ಹಾಗಿದ್ದರೂ ಸೋಲನ್ನು ಒಪ್ಪಿಕೊಳ್ಳುವ ಜತೆಗೆ ದೇಶದ ಸಂವಿಧಾನ ವಿರದ್ದುವಾಗಿ ಕೆಲಸ ಮಾಡುವವರ ವಿರುದ್ಧ ಎಚ್ಚರಿಸುವ ಕೆಲಸವನ್ನು ಕಾಂಗ್ರೆಸ್ ಮುಂದುವರಿಸಲಿದೆ ಎಂದು ಪದ್ಮರಾಜ್ ಆರ್. ಪೂಜಾರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X