Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರಿಗೆ ಇನ್ನೊಂದು ಕಾರು ಢಿಕ್ಕಿ: ಮಾತಿನ...

ಕಾರಿಗೆ ಇನ್ನೊಂದು ಕಾರು ಢಿಕ್ಕಿ: ಮಾತಿನ ಚಕಮಕಿ, ಪರಸ್ಪರ ಹಲ್ಲೆ; ದೂರು, ಪ್ರತಿ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ17 Aug 2025 6:34 PM IST
share
ಕಾರಿಗೆ ಇನ್ನೊಂದು ಕಾರು ಢಿಕ್ಕಿ: ಮಾತಿನ ಚಕಮಕಿ, ಪರಸ್ಪರ ಹಲ್ಲೆ; ದೂರು, ಪ್ರತಿ ದೂರು ದಾಖಲು

ಉಳ್ಳಾಲ: ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿರುವ ಕಾರಣಕ್ಕಾಗಿ ಮಾತಿನ ಚಕಮಕಿ, ಹೊಡೆದಾಟ ನಡೆದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ.

ತಲಪಾಡಿಯ ಟೋಲ್‌ಗೇಟ್ ಬಳಿ ಸೈಯದ್ ತ್ವಾಹ ಎಂಬವರು ಪ್ರಯಾಣಿಸುತ್ತಿದ್ದ ಕಾರನ್ನು ಹಿಂದಿಕ್ಕಿ ಇನ್ನೊಂದು ಕಾರಿನ ಚಾಲಕ ಮನ್ವಿತ್ ಎಂಬವರು ಅಪಾಯಕಾರಿಯಾಗಿ ಮುಂದೆ ನುಗ್ಗಿಸಲು ಯತ್ನಿಸಿದ ಎನ್ನಲಾಗಿದೆ.

ಆಗ ತ್ವಾಹ ಕಾರಿಗೆ ಇನ್ನೊಂದು ಕಾರು ಸ್ಪರ್ಶಿಸಿದೆ ಎಂದು ತಿಳಿದು ಬಂದಿದೆ. ಬಳಿಕ ಇದೇ ವಿಚಾರದಲ್ಲಿ ಎರಡು ಕಾರಿನ ಚಾಲಕರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಸ್ಪರ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯ ವಿವರ: ಸೈಯದ್ ತ್ವಾಹ ಎಂಬವರು ತನ್ನ ತಾಯಿಯೊಂದಿಗೆ ಕಾರಿನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಕುಂಜತ್ತೂರು ನಿಂದ ಕಲ್ಲಾಪುವಿಗೆ ಹೋಗುತ್ತಿದ್ದ ಈ ಘಟನೆ ನಡೆದಿದ್ದು ಈ ಬಗ್ಗೆ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.

ಸೆಯ್ಯದ್ ತ್ವಾಹ ಅವರು ತನ್ನ ತಾಯಿಯೊಂದಿಗೆ ಮಾರುತಿ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಟೋಲ್ ಗೇಟ್ ಬಳಿ ಒಮ್ಮೆಲೇ ದಾಟಿ ಬಂದ ಶಿಫ್ಟ್ ಕಾರು ಮಾರುತಿ ಕಾರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಮುಂದಕೆ ಸಾಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾನು ಸ್ವಲ್ಪ ಮುಂದೆ ಹೋಗುವಷ್ಟರಲ್ಲಿ ಆ ಕಾರಿನವರು ತನ್ನ ಕಾರನ್ನು ನಿಲ್ಲಿಸಲು ಸೂಚಿಸಿದರು. ಕಾರಲ್ಲಿದ್ದ ಇಬ್ಬರು ಗಂಡಸರು ಹಾಗೂ ಇಬ್ಬರು ಹೆಂಗಸರು ಇಳಿದು ನನಗೆ ಹಾಗೂ ನನ್ನ ಕಾರಲ್ಲಿದ್ದ ನನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಸಿ, ಕೊಲೆ ಬೆದರಿಕೆಯೊಡ್ಡಿದ್ದಾರೆ. ಇದರ ಬಳಿಕ ಕೊಲ್ಯ ಎಂಬಲ್ಲಿ ವಾಹನದ ಮೇಲೆ ದಾಳಿ ಮಾಡಿ ನನಗೆ ಅವಾಚ್ಯ ಶಬ್ದಗಳಿಂದ ಬೈದು ನನ್ನ ಹಾಗೂ ನನ್ನ ತಾಯಿಯ ಮೇಲೆ ಹಲ್ಲೆಗೈದಿದ್ದಾರೆ ಎಂದು ತ್ವಾಹ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಶಿಫ್ಟ್ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಶಕ್ತಿನಗರದ ಬಿಂದ್ಯಾ ದೂರು ನೀಡಿದ್ದು, ಕಾರಿನಲ್ಲಿ ತಾನು, ರಕ್ಷಾ, ರೀಷ್ಮಾ ಜೀವನ್, ಮನ್ವಿತ್ ಪ್ರಯಾಣಿಸುತ್ತಿದ್ದೆವು. ಟೋಲ್ ಗೇಟ್ ಬಳಿ ಹಠಾತ್ತನೆ ಬ್ರೇಕ್ ಹೊಡೆದು ನಿಂತಿದ್ದ ಮಾರುತಿ 800 ಕಾರಿನ ಹಿಂಬಂದಿಗೆ ನಮ್ಮ ಕಾರು ಢಿಕ್ಕಿ ಹೊಡೆದಿದೆ . ಬಳಿಕ ನಮ್ಮನ್ನು ಬೆನ್ನಟ್ಟಿ ಬಂದ ಮಾರುತಿ 800ನ ಚಾಲಕನು ತಲಪಾಡಿಯ ಮರೋಳಿ ಬಾರ್ ಬಳಿ ನಮ್ಮ ಕಾರನ್ನ ಅಡ್ಡ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರುವುದಾಗಿ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತರು ಹಲ್ಲೆ ನಡೆಸಿ ರುವುದಾಗಿ ಪ್ರತಿದೂರಿ ನಲ್ಲಿ ತಿಳಿಸಿದ್ದಾರೆ ಎರಡೂ ಕಡೆಯವರು ನೀಡಿರುವ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X