Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮುದಾಯದ ಆಧಾರದ ಮೇಲೆ ಪ್ರಕರಣ...

ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ20 Dec 2025 10:28 PM IST
share
ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು, ಡಿ.20: ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ. ವಾಸ್ತವಾಂಶಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸ್‌ಡಿಪಿಐ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯ ವೇಳೆ ಭಾಷಣಕಾರರು ಪೊಲೀಸರು ಪ್ರಕರಣ ದಾಖಲಿಸುವಾಗ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಸಂಘ ಪರಿವಾರ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಬಂಧನ ವಿಚಾರದಲ್ಲಿ ಆರ್‌ಟಿಐ ದಾಖಲೆಗಳನ್ನು ಪಡೆದು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದರು.

ಆ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ "ನೀವು ಆರ್‌ಟಿಐನಲ್ಲಿ ಕೇಳುವ ಅಗತ್ಯವಿಲ್ಲ, ನಾನೇ ಮಾಹಿತಿ ಕೊಡುವೆ. ನೀವು 30 ದಿನಗಳನ್ನು ಏಕೆ ವ್ಯರ್ಥ ಮಾಡುತ್ತೀರಿ" ಎಂದಿದ್ದಾರೆ.

ಶಾಂತಿ ಭಂಗ ಅಥವಾ ಯಾವುದೇ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ಹಕ್ಕು ಪೊಲೀಸರಿಗಿದೆ. ಕಳೆದ 6 ತಿಂಗಳಲ್ಲಿ ಶಾರದೋತ್ಸವ ಮೆರವಣಿಗೆಗೆ ಮೊದಲು ನಾವು ಹಿಂದುತ್ವ ಸಂಘಟನೆಯವರನ್ನೂ ಬಂಧಿಸಿ ದ್ದೇವೆ. ಅದೇ ರೀತಿ ನಾವು ಈ ಪ್ರತಿಭಟನೆಯ ಮೊದಲು ಎಸ್‌ಡಿಪಿಐ ಅವರನ್ನೂ ಬಂಧಿಸಿದ್ದೇವೆ ಎಂದರು. ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಪ್ರಕರಣವೂ ಹೆಚ್ಚಿರುತ್ತದೆ, ಪೊಲೀಸರ ಕ್ರಮವೂ ಅದೇ ರೀತಿಯಾಗಿರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿವರ ನೀಡಿದ ಕಮಿಷನರ್: ಅಪರಾಧ ಪ್ರಕರಣ ಹಿನ್ನಲೆಯಲ್ಲಿ 521 ಹಿಂದೂ ಮತ್ತು 351 ಮುಸ್ಲಿಮರು ಹಾಗೂ ಇತರ ಸಮುದಾಯದ 23 ಸಹಿತ 895 ಮಂದಿಯಿಂದ ಜಾಮೀನು ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಬಾಂಡ್ ಉಲ್ಲಂಘನೆ ಪ್ರಕರಣದಲ್ಲಿ 39 ಹಿಂದೂಗಳು ಜಾಮೀನು ಇರಿಸಿದ್ದ 7,40,000 ರೂ. ಮತ್ತು 13 ಮುಸ್ಲಿಮರು ಇರಿಸಿದ್ದ 2,40,000 ಹಾಗೂ ಇತರ ಇಬ್ಬರ ಇರಿಸಿದ್ದ 35,000 ರೂ. ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬಜರಂಗದಳ, ವಿಎಚ್‌ಪಿ ಸಂಘಟನೆಯ ಬಜಪೆ ಶಾರದೋತ್ಸವ ಮೆರವಣಿಗೆಗೆ ಇಬ್ಬರು ವ್ಯಕ್ತಿಗಳ ಜಾಮೀನಿನ ಮೇರೆಗೆ 2 ಲಕ್ಷ ರೂ. ಬಾಂಡ್ ಪಡೆದುಕೊಳ್ಳಲಾಗಿದೆ. ಎಸ್‌ಡಿಪಿಐ ಪ್ರತಿಭಟನೆ ಸಂದರ್ಭವೂ ಇಬ್ಬರು ವ್ಯಕ್ತಿಗಳ ಜಾಮೀನಿನ ಮೇರೆಗೆ 2 ಲಕ್ಷ ರೂ. ಬಾಂಡ್ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X