ಸ್ವಚ್ಛತೆ ನಿಜವಾದ ದೇವರ ಸೇವೆ: ಎನ್. ವಿನಯ ಹೆಗ್ಡೆ
ಸ್ವಚ್ಛ ಮಂಗಳೂರು 2.0 ಅಭಿಯಾನ ಉದ್ಘಾಟನೆ

ಮಂಗಳೂರು, ಅ.1: ಸ್ವಚ್ಛತೆ ನಿಜವಾದದೇವರ ಸೇವೆ. ಸ್ವಚ್ಛಾಂಜಲಿ ಕಾರ್ಯಕ್ರಮದ ಮುಖಾಂತರ ಮಂಗಳೂರು ಜನತೆಗೆ ತನ್ಮೂಲಕ ಸಮಾಜಕ್ಕೆ ಈ ಸೇವೆ ಅರ್ಪಣೆಯಾಗಲಿ. ರಾಮಕೃಷ್ಣ್ಣ ಮಠದ ಸೇವೆ ಮಂಗಳೂರಿಗೆ ನಿರಂತರ ವಾಗಿರಲಿ. ರಾಮಕೃಷ್ಣ ಮಠ ಮತ್ತು ಮಂಗಳೂರಿನ ಜನತೆಯ ನಡುವೆಉತ್ತಮ ಸಂಬಂಧ ಮುಂದುವರಿಯಲಿ ಇದನ್ನು ಉಳಿಸುವ ಪ್ರಯತ್ನ ನಮ್ಮಿಂದಾಗಲಿ ಎಂದು ನಿಟ್ಟೆ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಹೇಳಿದ್ದಾರೆ.
ಪ್ರಧಾನ ಮಂತ್ರಿಗಳ ಕರೆಯಂತೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ನಡೆದ ಸ್ವಚ್ಛಾಂಜಲಿ - ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ದಲ್ಲಿಎರಡನೇ ಹಂತದ ಸ್ವಚ್ಛ ಮಂಗಳೂರು ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ರಾಮಕೃಷ್ಣ ಮಠದಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಚ್ಛಾಂಜಲಿಯ ಮೂಲಕ ಸ್ವಚ್ಛತೆಯ ಈ ಸೇವೆ, ಭಾರತ ಮಾತೆಗೆ ಹಾಗೂ ಸ್ವಚ್ಛತೆಯ ಕನಸು ಕಂಡ ಮಹಾತ್ಮಾ ಗಾಂಧೀಜಿಯವರಿಗೆಅರ್ಪಣೆಯಾಗಲಿ. ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸು ವುದೇ ನಮ್ಮ ಮುಖ್ಯಉದ್ದೇಶ. ಎರಡನೇಆವೃತ್ತಿಯ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಜನಜಾಗೃತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಸ್ವಚ್ಛತೆಯ ಈ ಕಾರ್ಯ ನಿರಂತರವಾಗಿ ಮುಂದುವರೆಯಬೇಕು. ನಮಗೆರಾಮಕೃಷ್ಣ ಮಠದ ಮಾರ್ಗದರ್ಶನಅಗತ್ಯ. ಮಹಾನಗರ ಪಾಲಿಕೆಯ ವತಿಯಿಂದ ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ದಕ್ಷಿಣಕನ್ನಡ ಲೋಕಸಭಾ ಸಂಸದರಾದ ನಳಿನ್ ಕುಮಾರ್ಕಟೀಲ್ ಭಾಗವಹಿಸಿದರು. ಗೌರವ ಅತಿಥಿಗಳಾಗಿ ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸಕಾಮತ್ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪಾಲ್ಗೊಂಡರು.
ವಿಶೇಷ ಆಹ್ವಾನಿತರಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆನಂದ್ ಹಾಗೂ ಕೆನರಾ ಬ್ಯಾಂಕ್ ಮಂಗಳೂರು ವೃತ್ತಕಚೇರಿಯ ಉಪಪ್ರಧಾನ ವ್ಯವಸ್ಥಾಪಕರಾದ ಸುಧಾಕರ ಕೊಟ್ಟಾರಿ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಮೊದಲ ಬಾರಿಗೆ ಬೃಹತ್ ಪ್ಲಾಗ್ಗಿಂಗ್ ಸಂಪನ್ನ
ಈ ಸಂದರ್ಭದಲ್ಲಿ ನಡೆದ ಬೃಹತ್ ಪ್ಲಾಗಿಂಗ್ಅಭಿಯಾನವನ್ನು ಎಂ. ಆರ್. ಪಿ. ಎಲ್. ಸಂಸ್ಥೆಯ ಎಚ್.ಅರ್. ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಕೃಷ್ಣ ಹೆಗ್ಡೆ ಉದ್ಘಾಟಿಸಿದರು. ಪ್ಲಾಗಿಂಗ್ ಎಂಬ ವಿನೂತನ ಪ್ರಯೋಗವು ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಯಶಸ್ವಿಯಾಗಿ ನಡೆಯಿತು. ಜಾಗಿಂಗ್ ನಡೆಸುತ್ತಾ ಕಸವನ್ನು ಹೆಕ್ಕುವ ಮೂಲಕ ಸ್ವಯಂ ಸೇವಕರು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.
ಪ್ರಮುಖ ಸಂಘ ಸಂಸ್ಥೆಗಳು ಭಾಗಿ
ಎಂ. ಆರ್. ಪಿ. ಎಲ್., ಕೆನರಾ ಬ್ಯಾಂಕ್, ಶ್ರೀರಾಮ್ ಟ್ರಾನ್ಸ್ಪೋರ್ಟ್ಸ್, ಶ್ರೀನಿವಾಸ ಫೈನಾನ್ಸ್, ಮಂಗಳೂರು ಮಹಾ ನಗರ ಪಾಲಿಕೆ ಸೇರಿದಂತೆ ಹಲವಾರು ಸಂಸ್ಥೆಯ ಉದ್ಯೋಗಿಗಳು ನಿಟ್ಟೆ ವಿಶ್ವವಿದ್ಯಾಲಯ, ಶ್ರೀನಿವಾಸ ವಿಶ್ವವಿದ್ಯಾಲಯ, ಸಹ್ಯಾದ್ರಿ ವಿದ್ಯಾಸಂಸ್ಥೆ, ಕೆನರಾ ಕಾಲೇಜು, ಎಸ್. ಡಿ. ಎಂ. ವ್ಯವಹಾರಅಧ್ಯಯನಕಾಲೇಜು, ಎಸ್. ಡಿ. ಎಂ. ಸ್ನಾತಕೋತ್ತರ ಅಧ್ಯಯನ ಕಾಲೇಜು, ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 800 ಕ್ಕೂ ಹೆಚ್ಚು ಸ್ವಯಂಸೇವಕರು ಈ ಶ್ರಮದಾನದಲ್ಲಿ ಭಾಗವಹಿಸಿದರು.







