ಯಕ್ಷಗಾನ ಕಲಾವಿದರ ಅವಹೇಳನ ಆರೋಪ: ಪ್ರೊ.ಬಿಳಿಮಲೆ ವಿರುದ್ಧ ದೂರು

ಪ್ರೊ.ಪುರುಷೋತ್ತಮ ಬಿಳಿಮಲೆ
ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯಕ್ಷಗಾನ ಕಲಾವಿದ ರವಿ ಅಲೆವೂರಾಯ ಈ ದೂರು ನೀಡಿದ್ದು, ಯಕ್ಷಗಾನ ಕಲೆ ಮತ್ತು ಕಲಾವಿದರಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಪ್ರೊ.ಪುರುಷೋತ್ತಮ ಬಿಳಿಮಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಎಫ್ಐಆರ್ ದಾಖಲಿಸುವಂತಹ ಪ್ರಕರಣವಲ್ಲ: ಮಂಗಳೂರು ಕಮಿಷನರ್
ಯಕ್ಷಗಾನ ಕಲಾವಿದ ರವಿ ಅಲೆವೂರಾಯ ಎಂಬವರು ದೂರು ನೀಡಿದ್ದಾರೆ. ಇದು ಮಾನನಷ್ಟ ಪ್ರಕರಣ. ಪೋಲಿಸರು ಎಫ್ಐಆರ್ ಹಾಕಿ ತನಿಖೆ ಮಾಡುವ ಪ್ರಕರಣ ಅಲ್ಲ. ದೂರುದಾರರು ನ್ಯಾಯಾಲಯವನ್ನು ಸಂಪರ್ಕಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Next Story





