Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಬಿ-ಜಿ ರಾಮ್ ಜಿ ಬಗ್ಗೆ...

ವಿಬಿ-ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್‌ನಿಂದ ಅಪಪ್ರಚಾರ: ವಿಶ್ವೇಶ್ವರ ಕಾಗೇರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ10 Jan 2026 7:08 PM IST
share
ವಿಬಿ-ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್‌ನಿಂದ ಅಪಪ್ರಚಾರ: ವಿಶ್ವೇಶ್ವರ ಕಾಗೇರಿ ಆರೋಪ
ಬಿಜೆಪಿಯಿಂದ ಜ.15ರಿಂದ ಫೆ. 25ರವರೆಗೆ ರಾಜ್ಯವ್ಯಾಪಿ ಅಭಿಯಾನ

ಮಂಗಳೂರು, ಜ.10: ಮಹಾತ್ಮಾ ಗಾಂಧೀ ನರೇಗಾ ಯೋಜನೆಯ ಹೆಸರನ್ನು ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್-ಗ್ರಾಮೀಣ(ವಿಬಿ-ಜಿ ರಾಮ್ ಜಿ) ಯೋಜನೆಯಾಗಿ ಬದಲಾಯಿಸಿದ್ದು ಮಾತ್ರವಲ್ಲ ಅದರಲ್ಲಿ ಹಲವು ಪ್ರಯೋಜನಗಳನ್ನೂ ಸೇರಿಸಲಾಗಿದೆ. ಈ ಬಗ್ಗೆ ಕಾಂಗ್ರೆಸ್ ವಿನಾಕಾರಣ ಅಪಪ್ರಚಾರ ಮಾಡುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಅಪಪ್ರಚಾರ ಬಯಲು ಮಾಡಲು ಜ.15ರಿಂದ ಫೆ.25ರ ವರೆಗೆ ಬಿಜೆಪಿಯಿಂದ ರಾಜ್ಯವ್ಯಾಪಿ ಅಭಿಯಾನ ಕೈಗೊಳ್ಳಲಾಗುವುದು ಎಂದರು.

ಕಾಲ ಕಾಲಕ್ಕೆ ಯೋಜನೆಗಳ ಹೆಸರು ಬದಲಾಗುತ್ತದೆ. ಹಿಂದೆ ನೆಹರೂ ರೋಜ್‌ಗಾರ್ ಯೋಜನಾ ಎಂದಿದ್ದ ಹೆಸರನ್ನು ಕಾಂಗ್ರೆಸ್‌ನವರೇ ಅವರ ಸರಕಾರವಿದ್ದಾಗ ನರೇಗಾ ಎಂದು ಬದಲಾಯಿಸಿದ್ದರು. 2016ರಲ್ಲಿ ಮನರೇಗಾ ಆಗಿ ಬದಲಾಯಿತು. ಈಗ 20 ವರ್ಷಗಳ ಬಳಿಕ ಅದರಲ್ಲಿ ಬದಲಾವಣೆ ತರಲಾಗಿದೆ ಎಂದರು.

ಉದ್ಯೋಗದ ಖಾತರಿಯೀಗ 100ರಿಂದ 125 ದಿನಗಳಿಗೆ ಆಗಿದೆ. ಕೂಲಿ ಪಾವತಿ ಒಂದೇ ವಾರದಲ್ಲಿ ಆಗಲಿದೆ. ಹಲವು ರೀತಿಯ ಆಡಳಿತಾತ್ಮಕ ಸುಧಾರಣೆ ಮಾಡಲಾಗಿದೆ ಎಂದ ಅವರು ಗ್ರಾಮ ಪಂಚಾಯತಿಯೇ ಕೆಲಸದ ಆಯ್ಕೆ ಮಾಡಲಿದೆ ಹೊರತು ಇದು ಕೇಂದ್ರೀಕೃತವಲ್ಲ. ಕಾಂಗ್ರೆಸ್ ನಾಯಕರು ಕೇವಲ ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು.

ಜಲಸಂರಕ್ಷಣೆಗಾಗಿ ಚೆಕ್ ಡ್ಯಾಂ ನಿರ್ಮಾಣ, ಕೆರೆ, ಬಾವಿ ನಿರ್ಮಾಣ, ಸ್ವಹಾಯ ಸಂಘ, ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪನಿಗೆ ಒತ್ತು ಪ್ರಕೃತಿ ವಿಕೋಪಗಳಿಗೆ ತಡೆ ಆದ್ಯತೆಯಾಗಿದೆ, 2016ರಲ್ಲಿ ಉದ್ಯೋಗ ಖಾತರಿಗೆ 33000 ಕೋ.ರೂ. ಇದ್ದ ಬಜೆಟ್ ಈಗ 86 ಸಾವಿರ ಕೋಟಿಗೆ ಏರಿಕೆ ಯಾಗಿದೆ. ರಾಜ್ಯಗಳ ಭಾಗಿದಾರಿಕೆ ಹೆಚ್ಚಾಗಬೇಕು ಎನ್ನುವ ದೃಷ್ಟಿಯಿಂದ ಅವರ ಪಾಲನ್ನು ಶೇ.40ಕ್ಕೆ ಏರಿಕೆ ಮಾಡಲಾಗಿದೆ ಎಂದರು.

ಕೇಂದ್ರದ ಯೋಜನೆಗಳಿಗೆ ರಾಜ್ಯದ ಹಣ ಬಳಸಿಕೊಂಡು ಪ್ರಧಾನಿಯ ಫೊಟೊ ಹಾಕುತ್ತಾರೆ ಎಂಬ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ಅವರು, ಕೇಂದ್ರದ ಯೋಜನೆಗಳ ಪ್ರಯೋಜನವನ್ನು ಫಲಾನುಭವಿಗಳಿಗೆ ಸಿಗದಂತೆ ಮಾಡುವುದು ಕಾಂಗ್ರೆಸ್‌ನವರ ಹುನ್ನಾರ, ಆಯುಷ್ಮಾನ್ ಭಾರತ, ವಯೋವಂದನೆ ಯೋಜನೆಗಳಲ್ಲೂ ಅದನ್ನೇ ಮಾಡಿದ್ದಾರೆ, ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಅವರ ಜಾಯಮಾನವಾಗಿದೆ ಎಂದರು.

ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್, ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ ಉಪಸ್ಥಿತರಿದ್ದರು.

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬಗ್ಗೆ ಮಾಡಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತಾನು ಈಗಲೂ ಬದ್ಧನಿದ್ದೇನೆ. ಆ ಬಗ್ಗೆ ನ್ಯಾಯಾಧೀಶರಿಂದ ತನಿಖೆಗೆ ಸರಕಾರ ಆದೇಶಿಸಲಿ. ಆ ಬಳಿಕ ಅಗತ್ಯವಿದ್ದರೆ ನಾನೇ ದಾಖಲೆ ಪತ್ರ ಒದಗಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರಿಸಿದರು.

Tags

CongresspropagandaVishweshwar Kageri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X