Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಗ್ರೆಸ್‌ ಗೆ ಸೋಲು ವಿವಾದ | ವಾಟ್ಸಾಪ್...

ಕಾಂಗ್ರೆಸ್‌ ಗೆ ಸೋಲು ವಿವಾದ | ವಾಟ್ಸಾಪ್ ಒತ್ತಾಯಕ್ಕೆ ನಾನು ರಾಜೀನಾಮೆ ನೀಡಲ್ಲ: ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Jun 2024 3:19 PM IST
share
ಕಾಂಗ್ರೆಸ್‌ ಗೆ ಸೋಲು ವಿವಾದ | ವಾಟ್ಸಾಪ್ ಒತ್ತಾಯಕ್ಕೆ ನಾನು ರಾಜೀನಾಮೆ ನೀಡಲ್ಲ: ಹರೀಶ್ ಕುಮಾರ್

ಮಂಗಳೂರು, ಜೂ.7: ದ.ಕ. ಲೋಕಸಭಾ ಸೋಲಿನಲ್ಲಿ ಜಿಲ್ಲಾಧ್ಯಕ್ಷನಾಗಿ ನನ್ನ ಜವಾಬ್ಧಾರಿಯೂ ಇದೆ ಎಂಬುದನ್ನು ಒಪ್ಪುತ್ತೇನೆ. ಆದರೆ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಯಾರೋ ರಾಜೀನಾಮೆ ಕೇಳಿದರೆಂದು ನಾನು ನೀಡಲಾರೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ವಾಟ್ಸಾಪ್‌ಗಳಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ರಾಜೀನಾಮೆ ಒತ್ತಾಯದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ನಾನು ಪಕ್ಷದ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆಯೇ ಹೊರತು ಪಕ್ಷದ ಅಧ್ಯಕ್ಷ ಎಂದು ಹೇಳಿಕೊಂಡು ನನ್ನದೇ ಗ್ರೂಪ್ ಕಟ್ಟಿಕೊಂಡು ಹೋಗಿಲ್ಲ. ಪಕ್ಷದ ಜವಾಬ್ಧಾರಿಯುತ ನಾಯಕರು, ಕಾರ್ಯಕರ್ತರು, ಶಾಸಕರು ಅಥವಾ ವಿಧಾನಸಭೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಲೋಕಸಭೆಯಲ್ಲಿ ಇತ್ತೀಚೆಗೆ ಸ್ಪರ್ಧಿಸಿರುವ ಪದ್ಮರಾಜ್ ಅವರು ರಾಜೀನಾಮೆ ಕೇಳುವುದರಲ್ಲಿ ಅರ್ಥವಿದೆ. ಅದು ಬಿಟ್ಟು ವಾಟ್ಸಾಪ್ ಯುನಿವರ್ಸಿಟಿಯಲ್ಲಿ ರಾಜೀನಾಮೆ ಕೇಳಿದರೆ ಆಗುವುದಿಲ್ಲ. ನಾನು ವಾಟ್ಸಾಪ್ ಯುನಿವರ್ಸಿಟಿ ವಿದ್ಯಾರ್ಥಿ ಅಲ್ಲ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಲವು ಹುದ್ದೆಗಳ ಜವಾಬ್ಧಾರಿಯನ್ನು ನಿರ್ವಹಿಸಿದ್ದೇನೆ. ಮನೆಯಲ್ಲಿ ಕುಳಿತವನನ್ನು ಪಕ್ಷ ಜಿಲ್ಲಾಧ್ಯಕ್ಷನಾಗಿ ಮಾಡಿಲ್ಲ. 89ರಲ್ಲಿ ನನಗೆ ವಿಧಾನಸಭೆಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಬಿ ಫಾರಂ ನೀಡಲಾಗಿತ್ತು. ಅದಕ್ಕಾಗಿ ಕೆಲಸ ಆರಂಭಿಸಿದ್ದೆ. ಕೊನೆ ಘಳಿಗೆಯಲ್ಲಿ ಬಿ ಫಾರಂ ರದ್ದಾಯಿತು. ಆ ಸಂದರ್ಭ ಪಕ್ಷ ಭಾರೀ ಬಹುಮತದಲ್ಲಿ ಗೆದ್ದಿತ್ತು. ನಾನು ಬಳಿಕವೂ ಪಕ್ಷದಲ್ಲಿ ನಿಷ್ಟಾವಂತನಾಗಿ ದುಡಿಯುತ್ತಿದ್ದೇನೆ. 2004ರಲ್ಲಿ ಮತ್ತೆ ಟಿಕೆಟ್ ದೊರೆಯಿತು. ಪಕ್ಷಕ್ಕೆ 40 ಸ್ಥಾನ ದೊರಕಿತ್ತು. ನಾನೂ ಸೋತೆ. ನನ್ನನ್ನು ಇಂತವರು ಸೋಲಿಸಿದರು ಎಂದು ನಾನು ಕೆಪಿಸಿಸಿಗೆ ದೂರು ನೀಡಿಲ್ಲ. ಯಾರಿಂದಲೂ ಯಾರನ್ನೂ ಸೋಲಿಸಲು ಅಥವಾ ಗೆಲ್ಲಿಸಲು ಆಗುವುದಿಲ್ಲ ಎಂದು ಹರೀಶ್ ಕುಮಾರ್ ಹೇಳಿದರು.

ರಾಜೀನಾಮೆ ಯಾರೂ ಕಿಸೆಯಲ್ಲಿ ಇಟ್ಟುಕೊಂಡು ಓಡಾಡುವುದಿಲ್ಲ. ಜಿಲ್ಲಾಧ್ಯಕ್ಷರನ್ನು ಪಕ್ಷ ನೇಮಕ ಮಾಡುವುದು. ಬ್ಲಾಕ್, ಜಿಲ್ಲಾ ಅಧ್ಯಕ್ಷರಿಗೆ ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಅರಿವು ಇರುತ್ತದೆ. ಪಕ್ಷ ಸೋತಿತು ಅದಕ್ಕಾಗಿ ವಾಟ್ಸಾಪ್ ಯುನಿವರ್ಸಿಟಿಗಳಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದಾಕ್ಷಣ ನೀಡಿ ನಾನು ಓಡಿ ಹೋಗಲು ಆಗುವುದಿಲ್ಲ. ಜಿಲ್ಲೆಯಲ್ಲಿ ಹಿಂದೆ ಜನಾರ್ದನಪೂಜಾರಿಯವರು, ನಾಲ್ಕು ಬಾರಿ, ಮೊಯ್ಲಿಯವರು ಸೋತಿದ್ದಾರೆ. ಜಿ.ಪಂ, ತಾಪಂ, ಮನಪಾಗಳಲ್ಲಿ ಪಕ್ಷ ಸೋತಿದೆ. ಸೋತ ತಕ್ಷಣ ಯಾರೂ ಜಿಲ್ಲಾಧ್ಯಕ್ಷರ ರಾಜೀನಾಮೆ ನೀಡಿಲ್ಲ. ಅಂತಹ ಪರಂಪರೆ ಇದ್ದರೆ ನಾನು ಈ ಬಗ್ಗೆ ಆಲೋಚಿಸಬಹುದಿತ್ತು. ಆದರೆ ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿದ್ದು, ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮುಖಂಡರಾದ ಶುಭೋದಯ ಆಳ್ವ, ಸುರೇಂದ್ರ ಕಂಬಳಿ, ಸುಹಾನ್ ಆಳ್ವ,ಪ್ರಕಾಶ್ ಸಾಲಿಯಾನ್, ನೀರಜ್ ಪಾಲ್, ಜಿತೇಂದ್ರ ಸುವರ್ಣ, ಭರತೇಶ್ ಅಮೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X