Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ,...

ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರಕಾರದ ಬೇಜವಾಬ್ದಾರಿ ನಡೆ ಕರಾವಳಿ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ: ಸಿಪಿಐಎಂ ಆರೋಪ

ಕೊಳ್ತಮಜಲಿನಲ್ಲಿ ಯುವಕನ ಕೊಲೆ: ಶಾಂತಿ ಕಾಪಾಡಲು ಸಿಪಿಐಎಂ ಮನವಿ

ವಾರ್ತಾಭಾರತಿವಾರ್ತಾಭಾರತಿ27 May 2025 8:29 PM IST
share
ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರಕಾರದ ಬೇಜವಾಬ್ದಾರಿ ನಡೆ ಕರಾವಳಿ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ: ಸಿಪಿಐಎಂ ಆರೋಪ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ನಡೆದಿರುವ ಯುವಕನ ಹತ್ಯೆಯನ್ನು ಸಿಪಿಐಎಂ ಬಲವಾಗಿ ಖಂಡಿಸಿದ್ದು, ಜನತೆ ಪ್ರಚೋದನೆಗೆ ಬಲಿಯಾಗದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.

ಚಾಲಕ ವೃತ್ತಿಯ ಅಮಾಯಕ ಮುಸ್ಲಿಂ ಯುವಕನನ್ನು ಮತೀಯ ದ್ವೇಷ, ಪ್ರತೀಕಾರದ ನೆಪದಲ್ಲಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಈ ಕೊಲೆ ಹಾಗು ಕರಾವಳಿ ಜಿಲ್ಲೆಯ ಇಂದಿನ ಈ ಸ್ಥಿತಿಗೆ ಬಿಜೆಪಿ ಶಾಸಕರುಗಳು ಹಾಗೂ ಸಂಘಪರಿವಾರದ ದ್ವೇಷ ಭಾಷಣ, ಪ್ರಚೋದನೆಯ ರಾಜಕಾರಣ ಹಾಗೂ ಪರಿಸ್ಥಿತಿಯ ಗಂಭೀರತೆಯ ಅರಿವಿದ್ದೂ ಬೇಜವಾಬ್ದಾರಿ ನಡೆ ಪ್ರದರ್ಶಿಸಿದ ರಾಜ್ಯ ಸರಕಾರ ನೇರ ಹೊಣೆ ಎಂದು ಸಿಪಿಐಎಂ ಆರೋಪಿಸಿದೆ.

ಕಳೆದ ಮೂರು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರುಗಳು ಹಾಗು ಸಂಘಪರಿವಾರ ಸತತವಾಗಿ ದ್ವೇಷಭಾಷಣದಲ್ಲಿ ತೊಡಗಿದೆ. ಕುಡುಪು ಮಾಬ್ ಲಿಂಚಿಂಗ್ ಹಾಗೂ ಸುಹಾಸ್ ಕೊಲೆಯ ತರುವಾಯ ಪ್ರತೀಕಾರ ಹಾಗೂ ಜನಾಂಗ ದ್ವೇಷದ ಮಾತುಗಳನ್ನು ಯಾವ ಅಳುಕೂ ಇಲ್ಲದೆ ಆಡಲಾಗುತ್ತಿದೆ. ಬಿಜೆಪಿ ಶಾಸಕರುಗಳೆ ಇಂತಹ ಮಾತುಗಳಿಗೆ ಬಹಿರಂಗ ಬೆಂಬಲವಾಗಿ ನಿಂತದ್ದನ್ನು ನಾಡಿನ ಜನತೆ ಪ್ರತ್ಯಕ್ಷ ಕಂಡಿದ್ದಾರೆ. ಇಂತಹ ಪ್ರತೀಕಾರ, ದ್ವೇಷದ ಮಾತುಗಳೆ ಇಂದು ಮುಸ್ಲಿಂ ಯುವಕನ ಕೊಲೆಗೆ ಪ್ರಚೋದನೆ ಒದಗಿಸಿದೆ. ಜಿಲ್ಲೆಯನ್ನು ತೀರಾ ಅಪಾಯಕಾರಿ ಸ್ಥಿತಿಗೆ ತಂದು ನಿಲ್ಲಿಸಿದೆ. ದುಡಿದು ಬದುಕು ಕಟ್ಟುವ ಜನ ಸಾಮಾನ್ಯರು ಮನೆಯಿಂದ ಹೊರ ಬರಲು ಅಂಜುವ, ಭೀತಿಯಿಂದ ತತ್ತರಿಸುವ ಸ್ಥಿತಿಗೆ ತಲುಪಿಸಿದೆ‌ ಎಂದು ಸಿಪಿಐಎಂ ಆರೋಪಿಸಿದೆ. ಪೊಲೀಸ್ ಇಲಾಖೆ ಮುಸ್ಲಿಂ ಯುವಕನ ಕೊಲೆಯ ಹಿಂದಿನ ಎಲ್ಲಾ ಪಿತೂರಿದಾರನ್ನು, ಭಾಷಣಗಳ ಮೂಲಕ ಪ್ರಚೋದಿಸಿದವನರನ್ನು ಬಯಲಿಗೆ ಎಳೆಯಬೇಕು, ಬಿಗು ಬಂದೋಬಸ್ತ್ ಮೂಲಕ ಪರಿಸ್ಥಿತಿ ಕೈತಪ್ಪದಂತೆ ನೋಡಿಕೊಳ್ಳಬೇಕು ಎಂದು ಸಿಪಿಎಂ ದ‌.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X