Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಪಿಟಿ, ನಂತೂರು ಜಂಕ್ಷನ್‌ ನಲ್ಲಿ...

ಕೆಪಿಟಿ, ನಂತೂರು ಜಂಕ್ಷನ್‌ ನಲ್ಲಿ ಇಲೆವೇಟೆಡ್ ಹೈವೇ ಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Dec 2023 3:03 PM IST
share
ಕೆಪಿಟಿ, ನಂತೂರು ಜಂಕ್ಷನ್‌ ನಲ್ಲಿ ಇಲೆವೇಟೆಡ್ ಹೈವೇ ಗೆ ಒತ್ತಾಯ

ಮಂಗಳೂರು, ಡಿ.12: ರಾಷ್ಟ್ರೀಯ ಹೆದ್ದಾರಿ- 66ರ ಕೆಪಿಟಿ ಮತ್ತು ನಂತೂರು ಜಂಕ್ಷನ್‌ನಲ್ಲಿ ವಾಹನ ಮೇಲ್ಸೇತುವೆ(ವೆಹಿಕ್ಯುಲರ್ ಓವರ್‌ಪಾಸ್-ವಿಒಪಿ) ಬದಲು ಎತ್ತರಿಸಿದ ಹೆದ್ದಾರಿ (ಇಲೆವೇಟೆಡ್ ಹೈವೆ) ನಿರ್ಮಿಸಬೇಕು ಎಂದು ಸೊಸೈಟಿ ಫಾರ್ ಫಾರೆಸ್ಟ್, ಎನ್ವಿರಾನ್‌ಮೆಂಟ್ ಆ್ಯಂಡ್ ಕ್ಲೈಮೆಟ್ ಚೇಂಜ್ ಸಂಸ್ಥೆ ಒತ್ತಾಯಿಸಿದೆ.

ಕೆಪಿಟಿಯಲ್ಲಿ ವಿಒಪಿ ನಿರ್ಮಾಣಕ್ಕೆ ಈಗಾಗಲೇ ಕಾರ್ಯಾದೇಶವಾಗಿದೆ. ಅಪಘಾತಗಳನ್ನು ತಪ್ಪಿಸಲು (ಬ್ಲ್ಯಾಕ್ಸ್ ಸ್ಪಾಟ್ ಸರಿಪಡಿಸಲು) ಮತ್ತು ವಾಹನ ದಟ್ಟಣೆಯನ್ನು ಸರಿಪಡಿಸಲು ವಿಒಪಿ ನಿರ್ಮಿಸುತ್ತಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೇಳುತ್ತಿದ್ದಾರೆ. ಆದರೆ ವಿಒಪಿ ನಿರ್ಮಿಸಿದರೆ ಬ್ಲ್ಯಾಕ್ ಸ್ಪಾಟ್‌ಗಳು ಹೋಗುವುದಿಲ್ಲ, ಅಪಘಾತಗಳು ಹೆಚ್ಚಾಗಲಿವೆ. ಅದರ ಬದಲು ಕುಂಟಿಕಾನದಿಂದ ಪಂಪ್‌ವೆಲ್‌ವರೆಗೆ ಎತ್ತರಿಸಿದ ಹೆದ್ದಾರಿ ನಿರ್ಮಿಸಬೇಕು ಎಂದು ಸೊಸೈಟಿಯ ಕಾರ್ಯದರ್ಶಿ ಬೆನೆಡಿಕ್ಟ್ ಸಿ ಫೆರ್ನಾಂಡಿಸ್ ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.

ಈ ವ್ಯವಸ್ಥೆಯಿಂದ ನಗರ ಮತ್ತು ಹೆದ್ದಾರಿಯ ವಾಹನಗಳ ಸಂಚಾರ ಪ್ರತ್ಯೇಕವಾಗಿ ಸಂಚಾರ ಸುಗಮವಾಗಲಿದೆ. ಈಗಿನ ಯೋಜನೆ ಪ್ರಕಾರ ಮೊದಲ ಹಂತದಲ್ಲಿ ಕೆಪಿಟಿ ಬಳಿ ಮೇಲ್ಸೇತುವೆ ನಿರ್ಮಾಣವಾಗಲಿದೆ. ಕೆಪಿಟಿಯಿಂದ ಪದವು ಶಾಲೆಯವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಮೂರೂವರೆ ಮೀಟರ್ ಆಳಕ್ಕೆ ಅಗೆಯಲಾಗುತ್ತದೆ. ಪದವು ಶಾಲೆಯ ಹತ್ತಿರ ಅಗೆಯುವುದಿಲ್ಲ. ಅದು ದಿಬ್ಪದ ಹಾಗೆ ಉಳಿಯಲಿದೆ. ಸುರತ್ಕಲ್‌ನಿಂದ ಬರುವ ಬುಲೆಟ್ ಟ್ಯಾಂಕರ್, ಎನ್‌ಎಂಪಿಟಿ ವಾಹನಗಳು ಸೇರಿದಂತೆ ಬೆಂಗಳೂರು ಕಡೆಗೆ ತೆರಳುವ ವಾಹನಗಳು ಪದವು ಶಾಲೆಯ ಬಳಿ ಎಡಭಾಗಕ್ಕೆ ತಿರುಗಿ ಕುಲಶೇಖರ ಮೂಲಕ ಹೋಗಬೇಕು. ಎರಡನೇ ಹಂತದಲ್ಲಿ ನಂತೂರಿನಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ. ಈ ಕಾಮಗಾರಿ ಪ್ರಕಾರ ಬೆಂಗಳೂರಿನಿಂದ ಬರುವ ವಾಹನಗಳು ಮೇಲ್ಸೇತುವೆ ಮೇಲೆ ಬಂದು ನಂತೂರಿನಲ್ಲಿ ಬಲಭಾಗಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ- 66ರನ್ನು ಸಂಪರ್ಕಿಸಬೇಕು. ಇದರಿಂದಾಗಿ ಬ್ಲ್ಯಾಕ್ ಸ್ಪಾಟ್‌ಗಳನ್ನು ಸರಿಪಡಿಸಿದಂತೆ ಆಗುವುದಿಲ್ಲ. ಸಮಸ್ಯೆಗೆ ಪರಿಹಾರವೂ ಸಿಗುವುದಿಲ್ಲ. ಮುಖ್ಯವಾಗಿ ಪದವು ಶಾಲೆಯ ಎದುರು ಮೂರು ರಸ್ತೆಗಳು ಸೇರಿ ಅಲ್ಲಿ ಬ್ಲ್ಯಾಕ್‌ಸ್ಪಾಟ್ ನಿರ್ಮಾಣವಾಗಿ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ಫೆರ್ನಾಂಡಿಸ್ ಹೇಳಿದರು.

ಸೊಸೈಟಿ ಸದಸ್ಯ ಭುವನ್ ದೇವಾಡಿಗ ಅವರು ಮಾತನಾಡಿ, ವಿಒಪಿ ಬದಲು ಇಲೆವೇಟೆಡ್ ಹೈವೆ ನಿರ್ಮಾಣಕ್ಕೆ ಈಗಾಗಲೇ ಹೆದ್ದಾರಿ ಪ್ರಾಧಿಕಾರದವರಿಗೆ ಬೇಡಿಕೆ ಸಲ್ಲಿಸಿದ್ದೇವೆ. ಆದರೆ ಪ್ರಾಧಿಕಾರದವರು ಹಣಕಾಸಿನ ಕೊರತೆಯನ್ನು ಮುಂದಿಡುತ್ತಿದ್ದಾರೆ. ಬೆಂಗಳೂರು ಅನಂತರ ಮಂಗಳೂರು ಅಧಿಕ ಆದಾಯ ನೀಡುವ ನಗರವಾಗಿದೆ. ಹಾಗಾಗಿ ಇಲ್ಲಿನ ಕಾಮಗಾರಿಗೆ ಅಗತ್ಯ ಹಣ ವಿನಿಯೋಗ ಮಾಡಬೇಕು. ಈಗಿನ ಯೋಜನೆಯಡಿ ಕಾಮಗಾರಿ ನಡೆದರೆ ಮಳೆಗಾಲದಲ್ಲಿ ಪಂಪ್‌ವೆಲ್‌ನಂತೆ ರಸ್ತೆಯಲ್ಲೇ ಮಳೆನೀರು ನಿಲ್ಲುವ ಸಾಧ್ಯತೆ ಇದೆ ಎಂದು ಹೇಳಿದರು.

ಸೊಸೈಟಿಯ ಸದಸ್ಯ ದಿಲೀಪ್ ವಾಸ್ ನಾಯ್ಕ್ ಅವರು ಮಾತನಾಡಿ, ಮಂಗಳೂರು ನಗರಕ್ಕೆ ಸಂಚಾರ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಮಾಸ್ಟರ್ ಪ್ಲ್ಯಾನ್ ಇಲ್ಲ. ದೂರದೃಷ್ಟಿಯ ಯೋಜನೆ ಇಲ್ಲದೆ ಅಪಘಾತಗಳು ಕೂಡ ಹೆಚ್ಚುತ್ತಿವೆ. ಕಮಿಷನರೆಟ್ ವ್ಯಾಪ್ತಿಯಲ್ಲಿ 2017-2022ರ ಅವಧಿಯಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 845 ಮಂದಿ ಮೃತಪಟ್ಟಿದ್ದಾರೆ. 3,477 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 2,247 ಮಂದಿಗೆ ಸಾಮಾನ್ಯ ಗಾಯಗಳಾಗಿವೆ. ಇದೀಗ ವಿಒಪಿಗಳ ನಿರ್ಮಾಣದಿಂದ ಮತ್ತಷ್ಟು ಅಪಘಾತವಾಗುವ ಆತಂಕವಿದೆ ಎಂದು ಹೇಳಿದರು.

ಮರಗಳ ಸ್ಥಳಾಂತರ

ಯೋಜನೆಗಾಗಿ ಈಗಾಗಲೇ ಕೆಪಿಟಿಯಿಂದ ನಂತೂರುವರೆಗೆ ಸುಮಾರು 602 ಮರಗಳನ್ನು ಕಡಿಯಲು ಪ್ರಾಧಿಕಾರದವರು ನಿರ್ಧರಿಸಿದ್ದಾರೆ. ಇದರಲ್ಲಿ 110 ಮರಗಳನ್ನು ಈಗಾಗಲೇ ಸ್ಥಳಾಂತರಿಸಿದ್ದೇವೆ. ಉಳಿದ ಮರಗಳನ್ನು ಕೂಡ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ಪರಿಸರ ಕಾರ್ಯಕರ್ತರ ಜೀತ್‌ಮಿಲನ್ ರೋಚ್ ತಿಳಿಸಿದರು.

Tags

KPTNanthuru junction
share
ವಾರ್ತಾಭಾರತಿ
ವಾರ್ತಾಭಾರತಿ
Next Story
X