Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾಕಿ ಉಳಿಸಿದ ಕನಿಷ್ಠ ಕೂಲಿ ಪಾವತಿಗೆ...

ಬಾಕಿ ಉಳಿಸಿದ ಕನಿಷ್ಠ ಕೂಲಿ ಪಾವತಿಗೆ ಆಗ್ರಹ: ಕೈಕಂಬದಲ್ಲಿ ಬೀಡಿ ಡಿಪೋಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ9 Oct 2025 3:41 PM IST
share
ಬಾಕಿ ಉಳಿಸಿದ ಕನಿಷ್ಠ ಕೂಲಿ ಪಾವತಿಗೆ ಆಗ್ರಹ: ಕೈಕಂಬದಲ್ಲಿ ಬೀಡಿ ಡಿಪೋಗೆ ಮುತ್ತಿಗೆ

ಮಂಗಳೂರು, ಅ.9: ಬೀಡಿ ಕಾರ್ಮಿಕರಿಗೆ 2018 ರಿಂದ 2024ರ ವರಗಿನ ಬಾಕಿ ಉಳಿಸಿರುವ ಕನಿಷ್ಠ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ ದ.ಕ. ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘ ಜಂಟಿಯಾಗಿ ಕೈಕಂಬದಲ್ಲಿರುವ ಟೆಲಿಫೋನ್ ಬೀಡಿ ಡಿಪೋಗೆ ಗುರುವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದವು.

ಬೆಳಗ್ಗೆ 10 ಗಂಟೆಗೆ ಆರಂಭಗೊಂಡ ಮುತ್ತಿಗೆ ಪ್ರತಿಭಟನೆ ಸುಮಾರು ಮೂರು ತಾಸು ಮುಂದುವರಿಯಿತು. ಐನೂರಕ್ಕೂ ಹೆಚ್ಚು ಮಹಿಳಾ ಬೀಡಿ ಕಾರ್ಮಿಕರು ಉರಿ ಬಿಸಿಲನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

2018ರಲ್ಲಿ ತ್ರಿಪಕ್ಷೀಯ ಮಾತುಕತೆಯ ಆಧಾರದಲ್ಲಿ ಸರಕಾರ 40 ರೂ. ಹೆಚ್ಚಿಸಿ ಕನಿಷ್ಠ ಕೂಲಿ ನಿಗದಿಗೊಳಿಸಿ ಆದೇಶ ಹೊರಡಿಸಿತ್ತು. ಮಾಲಕರು ಈ ಆದೇಶವನ್ನು ಜಾರಿಗೊಳಿಸದೆ ಕಾರ್ಮಿಕರನ್ನು ವಂಚಿಸುತ್ತಾ ಬಂದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

2024 ರಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಲಕರ ಪರವಾಗಿ ಹಿಮ್ಮುಖವಾಗಿ ಕನಿಷ್ಠ ಕೂಲಿ ಕಡಿತಗೊಳಿಸಿ ಏಕಪಕ್ಷೀಯಾಗಿ ಆದೇಶ ಹೊರಡಿಸಿದ್ದರು. ಮಾಲಕರ ಪರವಾಗಿ ಹಿಮ್ಮುಖವಾಗಿ ಹೊರಡಿಸಲಾದ ಆದೇಶವನ್ನೂ ಜಾರಿಗೊಳಿಸದೆ ಬೀಡಿ ಮಾಲಕರು ಕಾರ್ಮಿಕರ ಬಾಕಿ ವೇತನ ಪಾವತಿಸದಿರುವ ಕಾರಣದಿಂದಾಗಿ ಈಗ ಬೀಡಿ ಮಜೂರರ ಸಂಘಗಳು ಹೋರಾಟವನ್ನು ತೀವ್ರಗೊಳಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಗುರುವಾರ ಕೈಕಂಬ, ಗುರುಪುರ, ವಾಮಂಜೂರು, ಕುಪ್ಪೆಪದವು ಪ್ರದೇಶದ ಬೀಡಿ ಕಾರ್ಮಿಕರ ಸಂಘಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ವಸಂತ ಆಚಾರಿ, ಬಿ ಶೇಖರ್, ಮುನೀರ್ ಕಾಟಿಪಳ್ಳ, ಬಾಲಕೃಷ್ಣ ಶೆಟ್ಟಿ, ಸದಾಶಿವ ದಾಸ್, ಸೀತಾರಾಮ ಬೇರಿಂಜೆ ಮಾತನಾಡಿದರು.

ಪ್ರತಿಭಟನೆಯ ನೇತೃತ್ವವನ್ನು ಸ್ಥಳೀಯ ಬೀಡಿ ಮಜೂರರ ಸಂಘದ ಪದಾಧಿಕಾರಿಗಳಾದ ವಸಂತಿ ಕುಪ್ಪೆಪದವು, ನೋಣಯ್ಯ ಗೌಡ, ಯಶೋಧ ಮಳಲಿ, ಭವಾನಿ ವಾಮಂಜೂರು, ಹೊನ್ನಯ್ಯ ಅಮೀನ್ ವಾಮಂಜೂರು, ಕುಸುಮ ಕುಪ್ಪೆಪದವು, ವಾರಿಜ ಕುಪ್ಪೆಪದವು, ಅಶೋಕ ವಾಮಂಜೂರು ಮತ್ತಿತರರು ವಹಿಸಿದ್ದರು.

ನೋಣಯ್ಯ ಗೌಡ ಸ್ವಾಗತಿಸಿ, ವಸಂತಿ ಕುಪ್ಪೆಪದವು ವಂದಿಸಿದರು.

Tags

Beedi workers ProtestManglore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X