Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.26ರಂದು ‘ಡೆನ್‌ಡೆನ್’ 3ನೇ ಆವೃತ್ತಿಯ...

ಜ.26ರಂದು ‘ಡೆನ್‌ಡೆನ್’ 3ನೇ ಆವೃತ್ತಿಯ ಸ್ಪರ್ಧೆ; ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಈಜಿಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ7 Jan 2026 7:52 PM IST
share
ಜ.26ರಂದು ‘ಡೆನ್‌ಡೆನ್’ 3ನೇ ಆವೃತ್ತಿಯ ಸ್ಪರ್ಧೆ; ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಈಜಿಗೆ ಸಿದ್ಧತೆ

ಮಂಗಳೂರು, ಜ.8: ಸಮುದ್ರದಲ್ಲಿ ಈಜುವುದೆಂದರೆ ಅದೊಂದು ಸಾಹಸ. ಅಂತಹ ಸಾಹಸ ಕ್ರೀಡೆಯನ್ನು ಮಂಗಳೂರು ಸರ್ಫ್ ಕ್ಲಬ್ ವತಿಯಿಂದ ಕಳೆದ ಎರಡು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು, 3ನೇ ಆವೃತ್ತಿಯ ರಾಷ್ಟ್ರಮಟ್ಟದ ‘ಡೆನ್ ಡೆನ್ ಈಜು’ ಸ್ಪರ್ಧೆ ಜ.26ರಂದು ನಡೆಯಲಿದೆ.

ಮಂಗಳೂರು ಸರ್ಫ್ ಕ್ಲಬ್ ವತಿಯಿಂದ ಈ ಸಾಹಸಮಯ ಈಜು ಸ್ಪರ್ಧೆಗೆ ಸಿದ್ಧತೆಗಳು ನಡೆದಿದ್ದು, ವರ್ಷದಿಂದ ವರ್ಷಕ್ಕೆ ಈ ಸ್ಪರ್ಧೆ ಹೆಚ್ಚಿನ ಈಜುಪಟುಗಳನ್ನು ಆಕರ್ಷಿಸುತ್ತಿದೆ. ಸರ್ಫ್ ಕ್ಲಬ್ ಬೀಚ್ (ತಣ್ಣೀರು ಬಾವಿ ಬೀಚ್-1)ನಲ್ಲಿ ತಣ್ಣೀರುಬಾವಿ ಬೀಚ್‌ನ ಸಮುದ್ರ ನೀರಿನಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾರತ ವಿವಿಧ ಕಡೆಗಳಿಂದ ರಾಷ್ಟ್ರ ಮಟ್ಟದ ಈಜುಗಾರರು ಭಾಗವಹಿಸಲಿದ್ದಾರೆ. ಕಳೆದ ವರ್ಷ ನಡೆದ 2ನೆ ಆವೃತ್ತಿಯ ಡೆನ್‌ಡೆನ್ ಈಜು ಸ್ಪರ್ಧೆಯಲ್ಲಿ 200 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಈ ವರ್ಷ ಸುಮಾರು 400 ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎನ್ನುತ್ತಾರೆ ಮಂಗಳೂರು ಸರ್ಫ್‌ಕ್ಲಬ್‌ನ ಕಾರ್ಯದರ್ಶಿ ಕಾರ್ತಿಕ್ ನಾರಾಯಣ್.

ಲಂಡನ್‌ನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಒಲಿಂಪಿಯನ್, ಮಂಗಳೂರು ಸರ್ಫ್ ಕ್ಲಬ್‌ನ ಗಗನ್ ಉಳ್ಳಾಲ್ ಅವರು ಈ ಸಾಲಿನ ಡೆನ್‌ಡೆನ್ ಈಜು ಸ್ಪರ್ಧೆಯ ತಾಂತ್ರಿಕ ಸಮಿತಿಯ ನೇತೃತ್ವವನ್ನು ವಹಿಸಿದ್ದಾರೆ.

ಈಜು ಸ್ಪರ್ಧೆಗೆ ಕೋರ್ಸ್ಟ್ ಗಾರ್ಡ್ ಸಹಕಾರ

ತಣ್ಣೀರುಬಾವಿಯ ಸಮುದ್ರದಲ್ಲಿ ಈ ಅಂತಾರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ ನಡೆಯುತ್ತಿರುವುದರಿಂದ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಪ್ರತಿ ವರ್ಷದಂತೆ ಈ ವರ್ಷವೂ ಸುರಕ್ಷಾ ಕಾರ್ಯದಲ್ಲಿ ಸಹಕರಿಸಲಿದೆ. ಸ್ಪರ್ಧಿಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಲೈಫ್ ಗಾರ್ಡ್ ಜತೆಗೆ ಸ್ಪರ್ಧೆಯ ಸಂದರ್ಭ ಸಮುದ್ರ ಯಾವುದೇ ರೀತಿಯ ದೋಣಿ ಅಥವಾ ಬೋಟ್‌ಗಳಿಂದ ತೊಂದರೆ ಆಗದಂತೆ ರಕ್ಷಣೆಯನ್ನು ಒದಗಿಸುವ ಕಾರ್ಯವನ್ನು ಕೋಸ್ಟ್ ಗಾರ್ಡ್ ನಿರ್ವಹಿಸಲಿದೆ.

ಡೆನ್‌ಡೆನ್ ಈಜು ಅಭಿಯಾನವು ಸಮುದ್ರ ನೀರಿನ ಸುರಕ್ಷತೆಯನ್ನು ಖಾತರಿ ಪಡಿಸುವ ಪ್ರಮುಖ ಉದ್ದೇಶದೊಂದಿಗೆ ನಡೆಸಲಾಗುತ್ತಿದೆ. ಬೆಳಗ್ಗೆ 6.30ಕ್ಕೆ ಈ ಸ್ಪರ್ಧೆ ಆರಂಭಗೊಂಡು ಬೆಳಗ್ಗೆ 9.30ಕ್ಕೆ ಕೊನೆಗೊಳ್ಳಲಿದೆ.

ಈ ಬಾರಿಯ ವಿಶೇಷತೆ

"ತಣ್ಣೀರುಬಾವಿ ಬೀಚ್‌ನ ಸಮುದ್ರ ಕಿನಾರೆಯಲ್ಲಿ ಕಳೆದ ವರ್ಷ 500 ಮೀಟರ್, 2 ಕಿ.ಮೀ., 4 ಕಿ.ಮೀ. ಹಾಗೂ 6 ಕಿ.ಮೀ. ಈಜು ಸ್ಪರ್ಧೆ ನಡೆದಿದ್ದರೆ, ಈ ವರ್ಷದ ವಿಶೇಷತೆಯಾಗಿ 8 ಕಿ.ಮೀ.ನ ಸ್ಪರ್ಧೆ ಸೇರ್ಪಡೆಗೊಂಡಿದೆ. ಕಳೆದ ವರ್ಷ 3 ಮಂದಿ ಅಂತರಾಷ್ಟ್ರೀಯ ಈಜುಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆ, ಈ ಬಾರಿ 10 ಮಂದಿ ಭಾಗಹಿಸುವ ನಿರೀಕ್ಷೆ ಇದೆ".

-ಕಾರ್ತಿಕ್ ನಾರಾಯಣ್, ಕಾರ್ಯದರ್ಶಿ, ಮಂಗಳೂರು ಸರ್ಫ್ ಕ್ಲಬ್.

Tags

Denden
share
ವಾರ್ತಾಭಾರತಿ
ವಾರ್ತಾಭಾರತಿ
Next Story
X