Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಪರರ ಕಷ್ಟಗಳಿಗೆ ಸ್ಪಂದಿಸುವುದು...

ಮಂಗಳೂರು| ಪರರ ಕಷ್ಟಗಳಿಗೆ ಸ್ಪಂದಿಸುವುದು ಶ್ರೇಷ್ಠ ಗುಣ: ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ

‘ಎಜ್ಯುಕೇರ್‌ ಎಂಡೊಮೆಂಟ್ ಫಂಡ್’ ವಿತರಣಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ17 Oct 2024 8:01 PM IST
share
ಮಂಗಳೂರು| ಪರರ ಕಷ್ಟಗಳಿಗೆ ಸ್ಪಂದಿಸುವುದು ಶ್ರೇಷ್ಠ ಗುಣ: ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ

ಮಂಗಳೂರು: ತಾಯಿಯ ಆಶೀರ್ವಾದ ಅಮೂಲ್ಯವಾದದ್ದು. ನಮ್ಮಂತೆ ಪರರೆಂದು ಭಾವಿಸಿ ಅವರ ಕಷ್ಟ - ಕಾರ್ಪಣ್ಯಗಳಿಗೆ ಸ್ಪಂದಿಸುವುದು ಮನುಷ್ಯನ ಶ್ರೇಷ್ಠ ಗುಣ ಎಂದು ಮಂಗಳೂರಿನ ಬಿಷಪ್ ವಂ.ಡಾ.ಪೀಟರ್ ಪೌಲ್ ಸಲ್ದಾನ ಹೇಳಿದ್ದಾರೆ.

ನಗರದ ಸಿಒಡಿಪಿ ಸಭಾಂಗಣದಲ್ಲಿ ಗುರುವಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಅನಿವಾಸಿ ಉದ್ಯಮಿ ಮೈಕಲ್ ಡಿಸೋಜ ಮತ್ತು ಕುಟುಂಬ ಪ್ರಾಯೋಜಿರುವ ‘ಎಜ್ಯುಕೇರ್‌ ಎಂಡೊಮೆಂಟ್ ಫಂಡ್’ನಿಂದ ಬಡ್ಡಿರಹಿತ ಸಾಲ ಸೌಲಭ್ಯದ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಈ ಯೋಜನೆ ತುಂಬಾ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿ ಉದ್ಯೋಗ ಪಡೆದ ಬಳಿಕ ತನ್ನ ಋಣವನ್ನು ಸಂದಾಯ ಮಾಡುವುದರಿಂದ ಅಗತ್ಯವಿರುವ ಸಮಾಜದ ವಿದ್ಯಾರ್ಥಿ ಗಳಿಗೆ ನಿರಂತರವಾಗಿ ನೆರವು ಸಿಗುತ್ತದೆ ಎಂದು ಹೇಳಿದರು.

ಮೈಕಲ್ ಡಿಸೋಜ ತಮ್ಮ ತಾಯಿಯಿಂದ ಈ ಗುಣವನ್ನು ಬಳುವಳಿಯಾಗಿ ಪಡೆದುಕೊಂಡಿದ್ದಾರೆ. ಅವರು ಸಮಾಜದ ಅಗತ್ಯಗಳಿಗೆ ಪ್ರತ್ಯೇಕವಾಗಿ ಶಿಕ್ಷಣ, ವಸತಿ ಮತ್ತು ಚಿಕಿತ್ಸೆ - ಸ್ಪಂದಿಸುವ ಗುಣ ಸಮಾಜಕ್ಕೆ ಬಹು ದೊಡ್ಡ ಪ್ರೇರಣೆಯಾಗಿ ದ್ದಾರೆ ಎಂದರು.


ಉದ್ಯಮಿ ಮೈಕಲ್ ಡಿ ಸೋಜ ಮುಖ್ಯ ಅತಿಥಿಯಾಗಿ ಮಾತನಾಡಿ ವಸತಿ, ಚಿಕಿತ್ಸೆ, ಶಿಕ್ಷಣ - ಇವು ಮನುಷ್ಯನ ಪ್ರಾಥಮಿಕ ಅಗತ್ಯಗಳಾದರೂ ಸಮಾಜದಲ್ಲಿ ಸಾಕಷ್ಟು ಮಂದಿ ಇದರಿಂದ ವಂಚಿತರಾಗುತ್ತಿದ್ದಾರೆ. ಸೂಕ್ತ ವಿದ್ಯಾಭ್ಯಾಸ ಮತ್ತು ಉನ್ನಂತ ವ್ಯಾಸಂಗವಿದ್ದರೆ ಮಾತ್ರ ಉತ್ತಮ ಉದ್ಯೋಗ ಅಥವಾ ಉದ್ಯಮದಲ್ಲಿ ಪ್ರಗತಿ ಕಾಣಬಹುದು ಎಂದು ಹೇಳಿದರು.

ಕಳೆದ 13 ವರ್ಷಗಳಲ್ಲಿ 30 ಕೋಟಿ ರೂ.ಗಳನ್ನು ಸುಮಾರು 4 ಸಾವಿರ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಇದೀಗ ಹೊಸ ಯೋಜನೆಯಲ್ಲಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಸಿಒಡಿಪಿ ಅಧೀನದಲ್ಲಿ ಬಿಷಪ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ನೆರವು ನೀಡುವ ಶಾಶ್ವತ ಯೋಜನೆಯಾಗಿ ಎಜ್ಯುಕೇರ್‌ಎಂಡೊಮೆಂಟ್ ಫಂಡ್ ಮುಂದುವರಿಯಲಿದೆ ಎಂದರು.


ಜಗತ್ತಿನ ಯಾವ ಮೂಲೆಗೆ ಹೋದರೂ ಹೆತ್ತ ತಾಯಿ - ತಂದೆ, ತಾಯಿ ನುಡಿ ಮತ್ತು ತಾಯಿ ನಾಡನ್ನು ಮಾತ್ರ ಮರೆಯ ಬೇಡಿ. ನೀವು ಉತ್ತಮ ಉದ್ಯೋಗ ಅಥವಾ ಉದ್ಯಮ ಉತ್ತುಂಗಕ್ಕೆ ತಲುಪಿದಾಗ ನಿರೀಕ್ಷೆಯಲ್ಲಿರುವ ಇತರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಂಡರೆ ಅದೇ ನನಗೆ ನೀಡಬಹುದಾದ ಉತ್ತಮ ಕೃತಜ್ಞತೆ ಎಂದು ಅಭಿಪ್ರಾಯಪಟ್ಟರು.

ಅನಿವಾಸಿ ಉದ್ಯಮಿ ಮತ್ತು ಎಜ್ಯುಕೇರ್ ನಿಧಿಯ ದಾನಿಗಳಾದ ಮೈಕೆಲ್ ಡಿ ಸೋಜ ಮತ್ತು ಫ್ಲಾವಿಯಾ ಡಿ ಸೋಜ ದಂಪತಿಯನ್ನು ಬಿಷಪ್ ವಂ.ಡಾ.ಪೀಟರ್ ಪೌಲ್ ಸಲ್ದಾನ ಸನ್ಮಾನಿಸಿದರು.


ಸಿಒಡಿಪಿಯ ಎಜುಕೇರ್ ಫಂಡ್ ಸಮಿತಿಯ ಸದಸ್ಯರಾದ ಎವೆಲಿನ್ ಬೆನಿಸ್, ರಿಚರ್ಡ್ ಅಲ್ವಾರೆಸ್ ಮತ್ತು ಜಾನ್ ಡಿ ಸೋಜ ಅವರನ್ನು ಮತ್ತು ದತ್ತಿ ನಿಧಿಯ ಪ್ಯಾನಲ್‌ನ ರಾಬರ್ಟ್ ಡಿಸೋಜ, ಓಸ್ವಾಲ್ಡ್ ರೋಡ್ರಿಗಸ್, ಡೋರಾ ರೋಡ್ರಿಗಸ್ ಮತ್ತು ಮಿಸ್ ಎವೆಲಿನ್ ಬೆನಿಸ್ ಸಿಒಡಿಪಿ ಸಿಬ್ಬಂದಿ ರೀನಾ ಡಿಸೋಜ ಅವರನ್ನು ಗೌರವಿಸಲಾಯಿತು.

ಸಿಒಡಿಪಿ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜ ಸ್ವಾಗತಿಸಿದರು. ಫಾ. ಲಾರೆನ್ಸ್ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಎಜ್ಯುಕೇರ್‌ಎಂಡೊಮೆಂಟ್ ಫಂಡ್ ಮೂಲಕ ಈ ವರ್ಷ ಮೊದಲ ಕಂತಿನಲ್ಲಿ ಸೆ.16 ರಂದು 84 ವಿದ್ಯಾರ್ಥಿಗಳಿಗೆ 74.42 ಲಕ್ಷ ರೂ. ಮತ್ತು 2ನೇ ಕಂತಿನಲ್ಲಿ ಇದೀಗ 103 ವಿದ್ಯಾರ್ಥಿಗಳಿಗೆ 86.60 ಲಕ್ಷ ರೂ. ಸಾಲದ ನೆರವು ನೀಡಲಾಯಿತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X