Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ...

ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಅಶ್ವಿನಿ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ3 Nov 2025 12:26 PM IST
share
ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಅಶ್ವಿನಿ ಶೆಟ್ಟಿ

ಮಂಗಳೂರು: ವೈದ್ಯಕೀಯ ಸೇವೆ, ಸಾಮಾಜಿಕ ಕಲ್ಯಾಣ ಮತ್ತು ಯುವ ಸಬಲೀಕರಣ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಗಾಗಿ ಮಂಗಳೂರು ಮೂಲದ ಡಾ.ಅಶ್ವಿನಿ ಶೆಟ್ಟಿ ಪ್ರಸಕ್ತ ಸಾಲಿನ ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ನ.1ರಂದು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಶ್ವಿನಿ ಶೆಟ್ಟಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ದಕ್ಷಿಣ ಕನ್ನಡ ಉಪ ಆಯುಕ್ತರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಯೆನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯದ ವಿಸ್ತರಣೆ ಮತ್ತು ಔಟ್ ರೀಚ್ ನಿರ್ದೇಶಕಿಯಾಗಿರುವ ಡಾ.ಅಶ್ವಿನಿ ಶೆಟ್ಟಿ ಕಳೆದ 17 ವರ್ಷಗಳ ಸೇವಾ ಪಯಣದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಸಮಾಜಸೇವೆ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಯೆನೆಪೊಯ ಮೆಡಿಕಲ್ ಕಾಲೇಜಿನ ಅನಾಟಮಿ ವಿಭಾಗದ ಪ್ರಾಧ್ಯಾಪಕಿಯಾಗಿರುವ ಅವರು ಅಕಾಡಮಿಕ್ ಶ್ರೇಷ್ಠತೆ ಮತ್ತು ಸಾಮಾಜಿಕ ಬದ್ಧತೆಯ ಸಮನ್ವಯದ ಮಾದರಿಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಮಹಿಳೆಯರ ಆರೋಗ್ಯದ ಅರಿವು ಮೂಡಿಸುವುದು, ಕ್ಯಾನ್ಸರ್ ತಡೆ ಮತ್ತು ಮುಂಚಿತ ಪತ್ತೆ ಕುರಿತು ಜಾಗೃತಿ ಅಭಿಯಾನಗಳು, ಹಾಗೂ ಆದಿವಾಸಿ ಪ್ರದೇಶಗಳಲ್ಲಿ ಸರಕಾರದ ಅನುದಾನಿತ ರೋಗ ತಪಾಸಣೆ (NCD Screening) ಯೋಜನೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಸೇರಿದಂತೆ ಹಲವಾರು ಜನಮುಖಿ ಕಾರ್ಯಗಳಲ್ಲಿ ಅವರು ಮುಂದಿದ್ದಾರೆ.

'ಯುವ ಮನಸ್ಸುಗಳು ಬದಲಾವಣೆಯ ದೀಪಗಳು' ಎಂದು ನಂಬುವ ಡಾ. ಶೆಟ್ಟಿ ಯುವ ಶಕ್ತಿ ಮತ್ತು ಸಾಮಾಜಿಕ ಬದ್ಧತೆಯ ಹೋರಾಟಗಾರ್ತಿ. ರಾಷ್ಟ್ರೀಯ ಸೇವಾ ಯೋಜನೆ (NSS) ಕಾರ್ಯಕ್ರಮ ಸಂಯೋಜಕಿಯಾಗಿ ಅವರು ವಿದ್ಯಾರ್ಥಿಗಳನ್ನು ಅಕಾಡಮಿಕ್ ಗಡಿಗಳನ್ನು ಮೀರಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಹೋಗುವಂತೆ ಪ್ರೇರೇಪಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗ್ರಂಥಮಿತ್ರ ಯೋಜನೆ, ಶಾಲಾ ದತ್ತು ಕಾರ್ಯಕ್ರಮಗಳು, ಆರೋಗ್ಯ ಜಾಗೃತಿ ಅಭಿಯಾನಗಳು, ಮತ್ತು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅವರ ಶ್ರದ್ಧೆ, ದೃಷ್ಟಿ ಮತ್ತು ನೇತೃತ್ವವು 'Education for Transformation'ಎಂಬ ಯೆನೆಪೊಯ ವಿಶ್ವವಿದ್ಯಾನಿಲಯದ ಧ್ಯೇಯವನ್ನು ಮತ್ತಷ್ಟು ಬಲಪಡಿಸಿದೆ.

ಡಾ.ಅಶ್ವಿನಿ ಶೆಟ್ಟಿಯವರು ಅವರು ಯೆನೆಪೊಯ ವಿವಿ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ, ಪ್ರೊ ಚಾನ್ಸಲರ್ ಫರ್ಹಾದ್ ಯೆನೆಪೊಯ, ಉಪ ಕುಲಪತಿ ಡಾ.ಎಂ.ವಿಜಯಕುಮಾರ್, ರಿಜಿಸ್ಟ್ರಾರ್ ಡಾ. ಕೆ.ಎಸ್. ಗಂಗಾಧರ ಸೋಮಯಾಜಿ, ಮತ್ತು ಪ್ರೊ-ವೈಸ್ ಚಾನ್ಸಲರ್ ಡಾ. ಶ್ರೀಪಥ್ ರಾವ್ ಅವರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X