Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯ ರಸ್ತೆಗಳ ದುಸ್ಥಿತಿ: 1...

ದ.ಕ. ಜಿಲ್ಲೆಯ ರಸ್ತೆಗಳ ದುಸ್ಥಿತಿ: 1 ವರ್ಷದಲ್ಲಿ 702 ಅಪಘಾತ, 122 ಮಂದಿ ಮೃತ್ಯು!

ವಾರ್ತಾಭಾರತಿವಾರ್ತಾಭಾರತಿ20 Sept 2025 6:52 PM IST
share
ದ.ಕ. ಜಿಲ್ಲೆಯ ರಸ್ತೆಗಳ ದುಸ್ಥಿತಿ: 1 ವರ್ಷದಲ್ಲಿ 702 ಅಪಘಾತ, 122 ಮಂದಿ ಮೃತ್ಯು!
ತಕ್ಷಣ ದುರಸ್ತಿ ಕಾರ್ಯಕ್ಕೆ ಮುಖ್ಯಮಂತ್ರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು, ಸೆ.20: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಹಾಗೂ ವಾಹನ ಸಂಚಾರದ ದಟ್ಟಣೆಯಿಂದಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಹುತೇಕ ರಸ್ತೆಗಳಿಗೆ ಗಂಭೀರ ಹಾನಿಯಾ ಗಿದೆ. ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಸರ್ವಿಸ್ ರಸ್ತೆಗಳ ದುಸ್ಥಿತಿಯಿಂದ ರಸ್ತೆ ಅಪಘಾತಗಳು ಗಣನೀಯವಾಗಿ ಏರಿಕೆಯಾಗಿದೆ. ಸಾರ್ವಜನಿಕರ ಜೀವ ಭದ್ರತೆಗೆ ದೊಡ್ಡ ಸವಾಲುಂಟಾಗಿದೆ. ಈಗಾಗಲೇ ನೂರಾರು ಮಂದಿ ಸಾವನ್ನಪ್ಪಿರುವುದು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸುತ್ತದೆ. ಅಪಘಾತ, ಸಾವು-ನೋವುಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ. 2025ರಲ್ಲೇ ದ.ಕ. ಜಿಲ್ಲೆಯಲ್ಲಿ 702 ರಸ್ತೆ ಅಪಘಾತಗಳು ದಾಖಲಾಗಿವೆ. ಅದರಲ್ಲಿ 122 ಮಂದಿ ಮೃತಪಟ್ಟರೆ 815 ಮಂದಿ ಗಾಯಗೊಂಡಿದ್ದಾರೆ. ಆದ್ದರಿಂದ ರಸ್ತೆಯನ್ನು ಶೀಘ್ರ ದುರಸ್ತಿಪಡಿಸುವಂತೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವರದಿಯಾದ ಒಟ್ಟು ಅಪಘಾತಗಳು 702. ಅದರಲ್ಲಿ ಮಾರಣಾಂತಿಕ ಪ್ರಕರಣಗಳು 119. ಮಾರಣಾಂತಿಕವಲ್ಲದ ಅಪಘಾತಗಳು 583. ಒಟ್ಟು ಸಾವುಗಳು 122. ಒಟ್ಟು ಗಾಯಾಳುಗಳು 815. ಪಾದಚಾರಿ ಸಾವುಗಳು 44. ಗಾಯಗೊಂಡ ಪಾದಚಾರಿಗಳು 149. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರ ಸಾವುಗಳು 63. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಗಾಯಾಳುಗಳು 416. ಈ ಅಂಕಿಅಂಶಗಳು ರಸ್ತೆಯ ಪರಿಸ್ಥಿತಿಯ ಗಂಭೀರತೆ ಸಾಕ್ಷಿಯಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

*ರಾಜ್ಯ ಹೆದ್ದಾರಿ-52 ಅತ್ಯಂತ ದುಸ್ಥಿತಿಯಲ್ಲಿದೆ. ಕುಂದಾಪುರ ತೀರ್ಥಹಳ್ಳಿ 52 ರಾಜ್ಯ ಹೆದ್ದಾರಿಯು 93 ಕಿ.ಮೀ ಉದ್ದವಿದೆ. ಕುಂದಾಪುರ, ಬಸ್ರೂರ್,ಸಿದ್ದಾಪುರ, ಹೊಸಂಗಡಿ, ಬಾಳೆಬರೆ ಘಾಟ್, ಮಾಸ್ತಿಕಟ್ಟೆ, ಕೈಮರ, ತೀರ್ಥಹಳ್ಳಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಈ ರಸ್ತೆ ಕಳೆದ 40 ವರ್ಷಗಳಿಂದ ಅಗಲವಾಗದ ಕಾರಣ ಸಂಚಾ ರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಕಂಡ್ಲೂರು ಸೇತುವೆ 1960ರಲ್ಲಿ ವಾರಾಹಿ ನದಿಗೆ ನಿರ್ಮಿಸಲ್ಪಟ್ಟಿದ್ದು, ಈಗ ಕುಸಿಯುವ ಅಂಚಿನಲ್ಲಿದೆ.

ಹಾಗಾಗಿ ಇದರ ಪುನಃ ನಿರ್ಮಾಣದ ಅಗತ್ಯವಿದೆ. ಅನುಪಾತದ ಪ್ರಕಾರ ರಸ್ತೆಯ ಅಗಲವಿಲ್ಲದ ಹಾಗೂ ರಸ್ತೆ ಬದಿ ಸ್ಥಳಾವಕಾಶ ಇಲ್ಲದ ಕಾರಣ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಈ ಹೆದ್ದಾರಿಯನ್ನು 4 ಲೇನ್ ಮಾಡುವುದು ಅಥವಾ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವುದು ಅವಶ್ಯಕವಾಗಿದೆ ಎಂದು ಮಂಜುನಾಥ ಭಂಡಾರಿ ವಿವರಿಸಿದ್ದಾರೆ.

*ಘಾಟ್ ಪ್ರದೇಶಗಳ ಸಮಸ್ಯೆಗಳು: ದ.ಕ., ಉಡುಪಿ ಜಿಲ್ಲೆಗಳ ಪ್ರಮುಖ ಘಾಟ್ ರಸ್ತೆಗಳನ್ನು (ಅಗುಂಬೆ, ಶಿರಾಡಿ, ಚಾರ್ಮಾಡಿ, ಬಾಳೆಬರೆ, ಸಂಪೇಕಟ್ಟೆ, ನಾಗೋಡಿ) ಸಂಚಾರಕ್ಕೆ ಬಳಸಲಾಗುತ್ತಿದೆ. ಇವು ಅತ್ಯಂತ ಕಿರಿದಾಗಿವೆ. ಇವುಗಳಲ್ಲಿ ವರ್ಷಪೂರ್ತಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ತುರ್ತುಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್‌ಗಳಿಗೂ ಅಡೆತಡೆ ಉಂಟಾಗುತ್ತಿದೆ. ಪ್ರವಾಸೋದ್ಯಮ ಮತ್ತು ಸ್ಥಳೀಯ ವ್ಯಾಪಾರಕ್ಕೆ ತೀವ್ರ ಹಾನಿಯುಂಟು ಮಾಡುತ್ತದೆ. ಈ ರಸ್ತೆ ಬೆಂಗಳೂರು, ಮಂತ್ರಾಲಯ, ಬಳ್ಳಾರಿ, ರಾಯಚೂರು, ಹೈದರಾಬಾದ್ ಇತ್ಯಾದಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಅವಕಾಶ ಹೊಂದಿದೆ. ಹಾಗಾಗಿ ಈ ರಸ್ತೆಗಳನ್ನು ಸುಧಾರಿಸಿದಲ್ಲಿ ದ.ಕ. ಅದರಲ್ಲೂ ವಿಶೇಷವಾಗಿ ಕುಂದಾಪುರ ಮತ್ತು ಬೈಂದೂರು ಕಡಲತೀರ ಪ್ರದೇಶ ಮತ್ತು ದೇವಾಲಯಗಳಿರುವ ಈ ಪ್ರದೇಶದಲ್ಲಿ ಪ್ರವಾಸೋದ್ಯಮವು ಉತ್ತೇಜನ ಪಡೆಯಲಿದೆ ಎಂದು ತಿಳಿಸಿದ್ದಾರೆ.

*ಅಭಿವೃದ್ಧಿ ಯೋಜನೆಗಳಲ್ಲಿ ನಿರ್ಲಕ್ಷ್ಯ!

ಕರ್ಣಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆಯಡಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನಿಂದ ಅನೇಕ ಹೆದ್ದಾರಿ ಗಳನ್ನು 4 ಲೇನ್ ಮಾಡಲಾಗಿದೆ. ಆದರೂ ರಾಜ್ಯ ಹೆದ್ದಾರಿ-52 ಮಾತ್ರ ಇದರಿಂದ ಹೊರಗಿಟ್ಟಿರುವುದು ತಾರತಮ್ಯ ಧೋರಣೆಯಾಗಿದೆ. ರಾಜ್ಯ ಸರಕಾರವು ಏಷಿಯನ್ ಅಭಿವೃದ್ಧಿ ಬ್ಯಾಂಕ್, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ರಾಜ್ಯ ಹೆದ್ದಾರಿ 52 ಅನ್ನು ಸುಧಾರಿಸಲು ಹಣಕಾಸು ಒದಗಿಸಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X