Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. : ನ.24ರಿಂದ ಡಿ.9ರವರೆಗೆ ಕುಷ್ಟರೋಗ...

ದ.ಕ. : ನ.24ರಿಂದ ಡಿ.9ರವರೆಗೆ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ21 Nov 2025 4:51 PM IST
share
ದ.ಕ. : ನ.24ರಿಂದ ಡಿ.9ರವರೆಗೆ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನ
ದ.ಕ. ಜಿಲ್ಲೆಯಲ್ಲಿ 2025-26ರಲ್ಲಿ 40 ಪ್ರಕರಣಗಳು ಪತ್ತೆ

ಮಂಗಳೂರು, ನ. 21: ದ.ಕ. ಜಿಲ್ಲೆಯಾದ್ಯಂತ ನ. 24ರಿಂದ ಡಿಸೆಂಬರ್ 9ರವರೆಗೆ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 2025-26ನೆ ಸಾಲಿನಲ್ಲಿ (ಎಪ್ರಿಲ್‌ನಿಂದ ಅಕ್ಟೋಬರ್‌ವರೆಗೆ) ಕುಷ್ಟರೋಗಕ್ಕೆ ಸಂಬಂಧಿಸಿ 40 ಪ್ರಕರಣಗಳು ಪತ್ತೆಯಾಗಿವೆ ಎಂದರು.

ಕಳೆದ ಐದು ವರ್ಷಗಳಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಷ್ಟರೋಗ ಪತ್ತೆ ಹಚ್ಚುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಸಲಾಗಿದೆ. ಈ ವರ್ಷ ಕಳೆದ ಐದು ವರ್ಷಗಳಲ್ಲಿ ಪತ್ತೆಯಾಗಿರು ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯಲ್ಲಿ ಮಹಿಳಾ ಮತ್ತು ಪುರುಷ ಸ್ವಯಂ ಸೇವಕರು, ಮೇಲ್ವಿಚಾರಕರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಮನೆ ಮನೆ ಸಮೀಕ್ಷೆ ನಡೆಸಿ ಕುಷ್ಟರೋಗ ಪ್ರಕರಣ ಕಂಡು ಹಿಡಿದು ಸೂಕ್ತ ಬಹುವಿಧ ಐಷಧಿ (ಎಂಡಿಟಿ) ಚಿಕಿತ್ಸೆ ಒದಗಿಸಲಾಗುವುದು. 2027-2030ಕ್ಕೆ ಶೂನ್ಯ ಪ್ರಸರಣ ತಲುಪಲು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ದೇಹದ ಮೇಲೆ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದು, ಸ್ಪರ್ಶಜ್ಞಾನ, ನೋವು, ನವೆ ಇಲ್ಲದೆ ಇದ್ದಲ್ಲಿ, ಕೈಕಾಲುಗಲ್ಲಿ ಜೋಮು ಉಂಟಾಗುವುದು ಮತ್ತು ಮರಗಟ್ಟುವುದು, ಮುಖ ಅಥವಾ ಕಿವಿಯ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುವುದು ಕುಷ್ಟರೋಗದ ಲಕ್ಷಣವಾಗಿರುತ್ತದೆ. 1ರಿಂದ 5 ಮಚ್ಚೆಗಳು ಹಾಗೂ ಒಂದು ನರಕ್ಕೆ ಸೋಂಕು ತಗಲಿದ್ದರೆ ಅದು ಪಾಸಿಬ್ಯಾಸಿಲ್ಲರಿ (ಪಿಬಿ) ಕುಷ್ಟರೋಗವೆಂದೂ, 6ಕ್ಕಿಂತ ಹೆಚ್ಚಿನ ಕಲೆ ಹಾಗೂ ಒಂದಕ್ಕಿಂತ ಹೆಚ್ಚಿನ ನರಗಳಿಗೆ ಸೋಂಕು ತಗಲಿದರೆ ಅದು ಮಲ್ಟಿಬ್ಯಾಸಿಲ್ಲರಿ (ಎಂಬಿ) ಕುಷ್ಟರೋಗವೆಂದು ಪರಿಗಣಿಸಲಾಗುತ್ತದೆ. ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪತ್ತೆಯಾಗಿರುವ 40ರಲ್ಲಿ 36 ಪ್ರಕರಣಗಳು ಎಂಬಿ ಪ್ರಕರಣಗಳಾಗಿವೆ. ಇದರಲ್ಲಿ 27ರಷ್ಟು ಪ್ರಕರಣಗಳು ದ.ಕ. ಜಿಲ್ಲೆಯ ನಿವಾಸಿಗಳಾಗಿದ್ದರು, ಉಳಿದವರು ಜಾರ್ಖಂಡ್‌, ಬಿಹಾರ ಮೊದಲಾದ ಕಡೆಗಳ ವಲಸೆ ಕಾರ್ಮಿಕರಾಗಿದ್ದಾರೆ. ಕುಷ್ಟರೋಗ ನಿಯಮಿತ ಚಿಕಿತ್ಸೆಯ ಮೂಲಕ ಸಂಪೂರ್ಣ ಗುಣಮುಖವಾಗುವ ಕಾಯಿಲೆಯಾಗಿದ್ದರೂ ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾರಣ ಈ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಸುದರ್ಶನ್ ಮಾಹಿತಿ ನೀಡಿದರು.

ಗೋಷ್ಟಿಯಲ್ಲಿ ವೆನ್‌ಲಾಕ್ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ. ನವೀನ್ ಉಪಸ್ಥಿತರಿದ್ದರು.

ಕಳೆದ ಆರು ವರ್ಷಗಳಲ್ಲಿ ಪತ್ತೆಯಾದ ಪ್ರಕರಣಗಳು :

ವರ್ಷ ಎಂಬಿ ಪಿಬಿ ಒಟ್ಟು

2020-21 23 6 29

2021-22 34 5 39

2022-23 68 7 75

2023-24 56 6 62

2024-25 41 2 43

2025-26 36 4 40

share
ವಾರ್ತಾಭಾರತಿ
ವಾರ್ತಾಭಾರತಿ
Next Story
X