Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೋಡಿ ಕೊಲೆ ಪ್ರಕರಣದ ಆರೋಪ ಸಾಬೀತು:...

ಜೋಡಿ ಕೊಲೆ ಪ್ರಕರಣದ ಆರೋಪ ಸಾಬೀತು: ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ13 Jan 2026 8:55 PM IST
share
ಜೋಡಿ ಕೊಲೆ ಪ್ರಕರಣದ ಆರೋಪ ಸಾಬೀತು: ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ

ಮಂಗಳೂರು: ಸುಮಾರು ಐದು ವರ್ಷದ ಹಿಂದೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಏಳಿಂಜೆ ಗ್ರಾಮದ ಮುತ್ತಯ್ಯ ಕೆರೆ ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಆಲ್ಫೋನ್ಸ್ ಸಲ್ದಾನಾ (52) ಎಂಬಾತನ ಮೇಲಿನ ಆರೋಪ ಸಾಬೀತಾಗಿದೆ. ನ್ಯಾಯಾಲಯವು ಜ.14ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಆಲ್ಫೋನ್ಸ್ ಸಲ್ದಾನ ಮತ್ತು ನೆರೆಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜ ಮಧ್ಯೆ ವೈಮನಸ್ಸು ಇತ್ತೆನ್ನಲಾಗಿದೆ. ಅಂದರೆ ವಿನ್ಸಿಯ ಮನೆಯ ಜಾಗಕ್ಕೆ, ಮನೆಯ ಛಾವಣಿಗೆ ಆಲ್ಫೋನ್ಸ್‌ನ ಜಾಗದಲ್ಲಿರುವ ಮರದ ಕೊಂಬೆಗಳು ಬೀಳುವ ಬಗ್ಗೆ ತಕರಾರು ಇತ್ತು. ಈ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸುವ ಸಲುವಾಗಿ 2020ರ ಎ.29ರಂದು ಮುಖಾಮುಖಿಯಾಗಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಆಲ್ಫೋನ್ಸ್ ಮರದ ಕೊಂಬೆ ಗಳನ್ನು ತೆಗೆಯುವುದಿಲ್ಲ, ನೀನು ಏನು ಬೇಕಾದರೂ ಮಾಡು ಎಂದು ಸವಾಲು ಹಾಕಿದ್ದಲ್ಲದೆ ಚೂರಿಯಿಂದ ವಿನ್ಸೆಂಟ್ ಡಿಸೋಜಗೆ ತಿವಿದಿದ್ದ. ಅದನ್ನು ಗಮನಿಸಿದ ವಿನ್ಸೆಂಟ್ ಡಿಸೋಜರ ಪತ್ನಿ ಹೆಲೆನ್ ಡಿಸೋಜ (43) ಪತಿಯ ರಕ್ಷಣೆಗೆ ಧಾವಿಸಿದಾಗ ಆಕೆಗೂ ಅಲ್ಫೋನ್ಸ್ ಸಲ್ದಾನ ಚೂರಿಯಿಂದ ತಿವಿದಿದ್ದ. ಆವಾಗ ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ಬೆದರಿಕೆ ಹಾಕಿದ್ದ.

ಚೂರಿ ಇರಿತದಿಂದ ಗಂಭೀರ ಗಾಯಗೊಂಡ ವಿನ್ಸೆಂಟ್ ಡಿಸೋಜ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರ ಗಾಯ ಗೊಂಡಿದ್ದ ಹೆಲೆನ್ ಡಿಸೋಜ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದರು. ಈ ಬಗ್ಗೆ ತನಿಖೆ ನಡೆಸಿದ ಆಗಿನ ಇನ್‌ಸ್ಪೆಕ್ಟರ್ ಜಯರಾಮ ಡಿ. ಗೌಡ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು 24 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿ 46 ದಾಖಲೆಗಳನ್ನು ಗುರುತಿಸಿದ್ದರು. ಬಳಿಕ ಈ ಪ್ರಕರಣ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ/ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಅಲ್ಲಿನ ನ್ಯಾಯಾಧೀಶ ಜಗದೀಶ ವಿ.ಎನ್. ವಾದ ಆಲಿಸಿ ಆರೋಪಿ ಆಲ್ಫೋನ್ಸ್ ಸಲ್ದಾನನ ವಿರುದ್ಧ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು, ಭಾ.ದಂ.ಸಂ. ಕಲಂ. 506, 341, 302ರಡಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಅಭಿಯೋಜಕಿ ಜುಡಿತ್ ಒಲ್ಲಾ ಮಾರ್ಗರೇಟ್ ಕ್ರಾಸ್ತಾ ಸಾಕ್ಷಿ ವಾದ ಮಂಡಿಸಿದ್ದರು.

*ದಂಪತಿಯ ಕೊಲೆಯಿಂದ ಅವರ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಘಟನೆ ವೇಳೆ ದಂಪತಿಯ ಪುತ್ರಿ 10ನೇ ತರಗತಿ ಮತ್ತು ಪುತ್ರ 5ನೇ ತರಗತಿಯಲ್ಲಿ ಕಲಿಯುತ್ತಿದ್ದರು. ಮೃತಪಟ್ಟ ಮಹಿಳೆಯ ಸಹೋದರಿ ಮಕ್ಕಳನ್ನು ಇದೀಗ ನೋಡಿಕೊಳ್ಳುತ್ತಿದ್ದು, ಆಕೆಗೂ ಯಾವುದೇ ಆದಾಯದ ಮೂಲವಿಲ್ಲ. ಹಾಗಾಗಿ ಮಕ್ಕಳಿಗೆ ಹೆಚ್ಚಿನ ಪರಿಹಾರ ಮೊತ್ತ ವನ್ನು ನೀಡಬೇಕು ಎಂದು ನ್ಯಾಯಾಲಯಕ್ಕೆ ಸರಕಾರಿ ಅಭಿಯೋಜಕರು ಮನವರಿಕೆ ಮಾಡಿದ್ದಾರೆ.

*ಪ್ರಕರಣದ ವಿಚಾರಣೆಗೆ ವೇಳೆ ಆಲ್ಫೋನ್ಸ್ ಸಲ್ದಾನಾ ತಾನು ಮಾನಸಿಕ ಅಸ್ವಸ್ಥ ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದ. 2000- 2002ರಲ್ಲಿ ಮುಂಬೈಯಲ್ಲಿ ಚಿಕಿತ್ಸೆ ಪಡೆದಿರುವ ಬಗ್ಗೆ ಹಳೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ. ಆದರೆ ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದರು. ಪುನಃ ಹೈಕೋರ್ಟ್‌ನಲ್ಲೂ ಎರಡು ವರ್ಷಗಳ ಕಾಲ ವಿಚಾರಣೆ ನಡೆದಿತ್ತು. ಅಲ್ಲೂ ಅರ್ಜಿ ವಜಾ ಗೊಂಡಿತ್ತು.

Tags

Double murdercaseAccusations
share
ವಾರ್ತಾಭಾರತಿ
ವಾರ್ತಾಭಾರತಿ
Next Story
X