Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಡ್ರಗ್ಸ್ ಮುಕ್ತ ಕುದ್ರೋಳಿ’ ಮುಸ್ಲಿಂ...

‘ಡ್ರಗ್ಸ್ ಮುಕ್ತ ಕುದ್ರೋಳಿ’ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಬೃಹತ್ ಜನಜಾಗೃತಿ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ8 Aug 2023 11:03 PM IST
share
‘ಡ್ರಗ್ಸ್ ಮುಕ್ತ ಕುದ್ರೋಳಿ’ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಬೃಹತ್ ಜನಜಾಗೃತಿ ರ‍್ಯಾಲಿ

ಮಂಗಳೂರು: ಯುವ ಸಮೂಹದಲ್ಲಿ ಡ್ರಗ್ಸ್ ಸೇವನೆಯ ದುಷ್ಪರಿಣಾಮದ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಕುದ್ರೋಳಿಯಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ರ‍್ಯಾಲಿ ನಡೆಯಿತು.

ಜಾಮಿಅ ಮಸೀದಿ ಕುದ್ರೋಳಿಯಿಂದ ಕಂಡತ್ ಪಳ್ಳಿ ಜುಮಾ ಮಸೀದಿಯವರೆಗೆ ನಡೆದ ಜನಜಾಗೃತಿ ರ‍್ಯಾಲಿಯ ನೇತೃತ್ವವನ್ನು ಅಧ್ಯಕ್ಷ ಮುಹಮ್ಮದ್ ಯಾಸೀನ್ ಕುದ್ರೋಳಿ ವಹಿಸಿದ್ದರು.

ದಿಕ್ಸೂಚಿ ಬಾಷಣ ಮಾಡಿದ ಡಿವೈಎಫ್‌ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಡ್ರಗ್ಸ್ ಮುಕ್ತ ಕುದ್ರೋಳಿ ಅಭಿಯಾನಕ್ಕೆ ಇಡೀ ಊರಿಗೆ ಊರೇ ಹೋರಾಟದಲ್ಲಿ ನಿರತರಾಗಿದ್ದು ಇಡೀ ಜಿಲ್ಲೆಗೆ ಮಾದರಿಯಾಗಲಿದೆ ಎಂದರು.

ನಂತರ ಹಲವು ಎಚ್ಚರಿಕೆಯ ಘೋಷಣೆಗಳೊಂದಿಗೆ ಜಾಥವು ಸಾಗಿತು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಪೊರೇಟರ್ ಶಂಸುದ್ದೀನ್ ಐಕ್ಯತೆ ವೇದಿಕೆ ಪರವಾಗಿ ಡ್ರಗ್ಸ್ ಮಾರಾಟಗಾರರಿಗೆ ಸ್ಪಷ್ಟ ಎಚ್ಚರಿಕೆ ನೀಡಿದರು.

ರ‍್ಯಾಲಿಯಲ್ಲಿ ಮಾಜಿ ಮೇಯರ್ ಕೆ ಅಶ್ರಫ್, ಐದು ಮಸೀದಿ ಖತೀಬರುಗಳಾದ ಜುಬೈರ್ ಮೌಲಾನಾ ಜಾಮಿಯ ಮಸೀದಿ, ಕೆ ಎಸ್ ರಿಯಾಝ್ ಫೈಝಿ ನಡುಪಳ್ಳಿ, ಮುಹಮ್ಮದ್ ಬಾಖವಿ ಮೊಯ್ದೀನ್ ಪಳ್ಳಿ, ಅಹ್ಮದ್ ಅಲಿ ಖಾಸಿಮಿ ಸಲಫಿ ಮಸ್ಜಿದ್, ಪಿ ಎ ಮುಹಮ್ಮದ್ ರಫೀಕ್ ಮದನಿ ಕಂಡತ್ ಪಳ್ಳಿ , ಮಕ್ಬೂಲ್ ಕೋಶಾಧಿಕಾರಿ ಜಾಮಿಯಾ, ಸಂಚಾಲಕ ಎಂ ಅಝೀಝ್ ಕುದ್ರೋಳಿ , ಕಂಡತ್ ಪಳ್ಳಿ ಅಧ್ಯಕ್ಷ ಶಮೀಮ್ ಅಹ್ಮದ್ , ಕಾರ್ಯದರ್ಶಿ ಮಕ್ಬೂಲ್ ಅಹ್ಮದ್,ಉಪಾಧ್ಯಕ್ಷ ಎಸ್.ಎ. ಖಲೀಲ್ ಕಂಡತ್ ಪಳ್ಳಿ , ಸಹ ಕಾರ್ಯದರ್ಶಿಗಳಾದ ಹಾರಿಸ್ ಕುದ್ರೋಳಿ , ಎನ್ ಕೆ ಅಬೂಬಕ್ಕರ್ ಮುಝೈರ್ ಕುದ್ರೋಳಿ , ಸಮಿತಿ ಸದಸ್ಯರುಗಳಾ ಮುಸ್ತಾಕ್ ಕುದ್ರೋಳಿ , ಅಬ್ದುಲ್ ಲತೀಫ್ ಕ್ರಿಸ್ಟಲ್, ಅಬ್ದುಲ್ ವಹಾಬ್, ಬಿ ಎ ಇಸ್ಮಾಯಿಲ್ ಉಪಸ್ಥಿತರಿದ್ದರು.

ಜಾಮಿಅ ಮಸೀದಿ ಇಮಾಮ್ ಮೌಲಾನ ಮನ್ನಾನ್ ಸಾಬ್ ದುಆದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಹಾಜಿ ಬಿ ಅಬೂಬಕರ್ ಸ್ವಾಗತಿಸಿ, ಅಶ್ರಫ್ ಕಿನಾರ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿಗೆ ಮಿತಿ ಮೀರಿದ ಡ್ರಗ್ಸ್ ಮಾರಾಟ ಮತ್ತು ಸೇವನೆಯಿಂದ ಯುವ ಪೀಳಿಗೆಯು ದಾರಿ ತಪ್ಪುತ್ತಿರುವುದನ್ನು ಗಂಭೀರ ವಾಗಿ ಪರಿಗಣಿಸಿ ಕುದ್ರೋಳಿಯಲ್ಲಿ ಐದು ಮಸೀದಿ ಆಡಳಿತ ಮಂಡಳಿ, ಸಂಘ ಸಂಸ್ಥೆಗಳ ಪ್ರತಿನಿಧಿಯನ್ನೊಳಗೊಂಡ ಮುಸ್ಲಿಂ ಐಕ್ಯತ ವೇದಿಕೆಯು ಕಳೆದ ಒಂದು ತಿಂಗಳಿನಿಂದ ‘ಡ್ರಗ್ಸ್ ಮುಕ್ತ ಕುದ್ರೋಳಿ, ಯುವ ಪೀಳಿಗೆಯ ರಕ್ಷಣೆಯೇ ನಮ್ಮ ಗುರಿ ’ ಎಂಬ ಘೋಷಣೆಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಕಳೆದ ವಾರ ಐದು ಮಸೀದಿಯ ವ್ಯಾಪ್ತಿಯ ಸುಮಾರು 2000 ಸಾವಿರದಷ್ಟು ಮನೆ ಮನೆಗೆ ನಾಯಕರು ನಾಗರಿಕರ ಸಹಕಾರದೊಂದಿಗೆ ತೆರಳಿ ಕರಪತ್ರ ವಿತರಣೆ ಮೂಲಕ ಜಾಗೃತಿ ಮೂಡಿಸಿದೆ.

ಆ. 9ರಂದು ರಾತ್ರಿ 7.15ಕ್ಕೆ ಕುದ್ರೋಳಿ ಜಂಕ್ಷನ್‌ನಲ್ಲಿರುವ ಉರ್ದು ಶಾಲೆಯಲ್ಲಿ ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X