Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿಕ್ಷಣವೇ ಶೋಷಿತ ಸಮುದಾಯದ ಮೊದಲ ಶಕ್ತಿ:...

ಶಿಕ್ಷಣವೇ ಶೋಷಿತ ಸಮುದಾಯದ ಮೊದಲ ಶಕ್ತಿ: ಡಾ. ಬಿ.ಎ ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ4 Feb 2024 3:49 PM IST
share
ಶಿಕ್ಷಣವೇ ಶೋಷಿತ ಸಮುದಾಯದ ಮೊದಲ ಶಕ್ತಿ: ಡಾ. ಬಿ.ಎ ವಿವೇಕ ರೈ

ಮಂಗಳೂರು, ಫೆ.4: ಶಿಕ್ಷಣವೇ ಶೋಷಿತ ಸಮುದಾಯದ ಮೊದಲ ಶಕ್ತಿಯಾಗಿದ್ದು, ಈ ನಿಟ್ಟಿನಲ್ಲಿ ಡಾ.ಅಂಬೇಡ್ಕರ್ ನಮಗೆ ಮಾದರಿಯಾಗುತ್ತಾರೆ. ಈ ಹಾದಿಯಲ್ಲೇ ಡಾ.ಅಭಯ ಕುಮಾರ್ ಸಾಗಿ ಬೆಳೆದಿದ್ದಾರೆ ಎಂದು ಡಾ.ಬಿ. ಎ.ವಿವೇಕ ರೈ ತಿಳಿಸಿದ್ದಾರೆ.

ನಗರದ ಬಲ್ಮಠ ಸಹೋದಯ ಸಭಾಂಗ ಣದಲ್ಲಿಂದು ಬಹು ಓದುಗ ಬಳಗದ ವತಿಯಿಂದ ರವಿವಾರ ಹಮ್ಮಿಕೊಂಡ ಡಾ.ಅಭಯ ಕುಮಾರ್ ಕೌಕ್ರಾಡಿ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು.

ಮಂಗಳೂರಿನಲ್ಲಿ ಕುದ್ಮುಲ್ ರಂಗರಾವ್ ಅವರು, ದಲಿತರಿಗೆ ಶಿಕ್ಷಣ ಮೊದಲು ಸಿಗಬೇಕು. ಜೊತೆಗೆ ವಸತಿಯೂ ಅಗತ್ಯ ಎಂದು ದಲಿತರು, ಹಿಂದುಳಿದ ಜಾತಿಯವರಿಗಾಗಿ ಹಾಸ್ಟೆಲ್ ಆರಂಭಿಸಿದರು. ಶಿಕ್ಷಣ ದಲಿತ ಸಮುದಾಯದಲ್ಲಿ ಆತ್ಮ ವಿಶ್ವಾಸಕ್ಕೆ ಕಾರಣವಾಗಿದೆ. 20ನೇ ಶತಮಾನದಲ್ಲಿ ಜ್ಞಾನ ಶಕ್ತಿಗೆ ಪ್ರಥಮ ಸ್ಥಾನ. ಜ್ಞಾನಶಕ್ತಿ ಜಗತ್ತನ್ನು ಆಳುತ್ತದೆ. ಡಾ.ಆಭಯ ಕುಮಾರ್ ಈ ರೀತಿಯ ಜ್ಞಾನ ಶಕ್ತಿಯಿಂದ ಬೆಳೆದವರು. ನಮ್ಮ ಬದುಕಿನಲ್ಲಿ ನಾವು ಆಡುವ ಮಾತುಗಳ ಜೊತೆ ನಾವು ಮಾಡುವ ಕೆಲಸಗಳು ಮುಖ್ಯ ವಾಗುತ್ತದೆ.ಅಭಯ ಕುಮಾರ್ ತಮ್ಮ ಜ್ಞಾನದ ಜೊತೆ ಮಾನವೀಯತೆಯನ್ನು ಮೈಗೂಡಿಸಿ ಕೊಂಡಿದ್ದರು ಎಂದು ವಿವೇಕ ರೈ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಭಯ ಕುಮಾರ್,"ನಾನು ನನ್ನ ವೃತ್ತಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರಾಮಾಣಿಕವಾಗಿ ತೊಡಗಿಸಿ ಕೊಂಡವನು.ನನ್ನ ಬರವಣಿಗೆ ಕೆಲಸಗಳಿಗೆ ನನ್ನ ಗುರುಗಳು ನನಗೆ ಪ್ರೇರಣೆ. ನನ್ನ ಸಮುದಾಯದಲ್ಲಿ ಮೊದಲು ಪಿ ಎಚ್ ಡಿ ಮಾಡಿದವನು ನಾನು. ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದಾಗ ನಾನು ತಲೆಯ ಮೇಲೆ ಹಾರುತ್ತಿದ್ದ ವಿಮಾನವನ್ನು ನೋಡುತ್ತಿದ್ದೆ. ಅಂತಹ ವಿಮಾನದಲ್ಲಿ ಲಂಡನ್ ಗೆ ಓದಲು ಹೋಗುವ ಕನಸು ನಾನು ಕಂಡವನಲ್ಲ. ನನ್ನ ಜೊತೆ ಇರುವವರಿಗೆ ನನ್ನಿಂದ ಸಾಧ್ಯವಾಗುವ ಸಹಾಯ ಮಾಡುತ್ತಾ ಬದುಕಿದ್ದೇನೆ. ಅದು ನನಗೆ ಸಮಾಜದಲ್ಲಿ ಗೌರವ ತಂದು ಕೊಟ್ಟಿದೆ. ಅದೇ ನನ್ನ ಸಂಪತ್ತು. ನನ್ನ ಬಗ್ಗೆ ಅಭಿನಂದನಾ ಕೃತಿ ರಚನೆ ಮಾಡಿದವರಿಗೆ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ಪೂವಪ್ಪ ಕಣಿಯೂರು ಮಾತನಾಡುತ್ತಾ, ಅಭಯ ಕುಮಾರ್ ಸದಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು. ತನ್ನ ಜೊತೆ ತನ್ನಂತೆ ಇರುವ ಇತರರಿಗೂ ತನ್ನಿಂದ ಆಗುವ ಸಹಾಯ ಮಾಡುತ್ತಾ ಬದುಕಿದವರು ಎಂದರು.

ಕೃತಿ ಪರಿಚಯ ಮಾಡಿದ ಡಾ.ಸುಧಾರಾಣಿ ಮಾತನಾಡುತ್ತಾ, ಈ ಕೃತಿ ಅಭಯ ಅವರ ಬದುಕಿನ ವಿವಿಧ ಮುಖಗಳನ್ನು ಅನಾವರಣಗೊಳಿಸಿದೆ ಎಂದರು.

ಸಮಾರಂಭದಲ್ಲಿ ಡಾ.ಆಶಾಲತಾ ಚೇವಾರ್, ಆಕೃತಿ ಪ್ರಕಾಶನದ ಮಾಲಕರಾದ ನಾಗೇಶ್ ಕಲ್ಲೂರು, ಡಾ.ಲತಾ ಅಭಯ ಕುಮಾರ್ ಉಪಸ್ಥಿತರಿದ್ದರು.

ಡಾ.ಗಿರಿಯಪ್ಪ ವಂದಿಸಿದರು.ಸೋಮಶೇಖರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X