Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳು ಭಾಷಾ ಅಧ್ಯಯನಕ್ಕೆ ಪ್ರತ್ಯೇಕ...

ತುಳು ಭಾಷಾ ಅಧ್ಯಯನಕ್ಕೆ ಪ್ರತ್ಯೇಕ ಕೇಂದ್ರ ಸ್ಥಾಪನೆ ಅಗತ್ಯ : ಡಾ. ದೇವರಕೊಂಡಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ26 Oct 2023 7:30 PM IST
share
ತುಳು ಭಾಷಾ ಅಧ್ಯಯನಕ್ಕೆ ಪ್ರತ್ಯೇಕ ಕೇಂದ್ರ ಸ್ಥಾಪನೆ ಅಗತ್ಯ : ಡಾ. ದೇವರಕೊಂಡಾ ರೆಡ್ಡಿ

ಮಂಗಳೂರು: ಕೊಂಕಣಿ ಭಾಷೆಯ ಬಗ್ಗೆ ಆಳವಾದ ಅಧ್ಯಯನಕ್ಕೆ ಪೂರಕವಾಗುವ ಭಾಷಾ ಕೇಂದ್ರವಿದೆ. ಆದರೆ, ತುಳುನಾಡಿನಲ್ಲಿ ತುಳುವಿಗೆ ಬೇಕಾಗಿರುವ ತುಳು ಭಾಷಾ ಕೇಂದ್ರ ಇಲ್ಲದಿರುವುದು ಆಶ್ಚರ್ಯ ತಂದಿದೆ. ತುಳು ಭಾಷಾ ಅಧ್ಯಯನಕ್ಕೆ ಪ್ರತ್ಯೇಕ ಭಾಷಾ ಕೇಂದ್ರ ಸ್ಥಾಪನೆ ಅಗತ್ಯವಿದೆ ಎಂದು ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ಡಾ. ದೇವರಕೊಂಡಾ ರೆಡ್ಡಿ ತಿಳಿಸಿದ್ದಾರೆ.

ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್, ತುಳು ಪರಿಷತ್ ಮಂಗಳೂರು, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ರೋಶನಿ ನಿಲಯದ ಕನ್ನಡ ಸಂಘ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ಸ್ ಸಂಸ್ಥೆಯ ಸಹಯೋಗದೊಂದಿಗೆ ರೋಶನಿ ನಿಲಯದಲ್ಲಿ ಗುರುವಾರ ಆಯೋಜಿಸಲಾದ ‘ನೆಲಮೂಲದ ನಡೆ: ಶೋಧ-ಸ್ವಾದ’ ಎಂಬ ರಾಜ್ಯ ಮಟ್ಟದ ವಿಚಾರಗೋಷ್ಠಿ ಹಾಗೂ ಡಾ.ಇಂದಿರಾ ಹೆಗ್ಗಡೆ ಅವರು ಬರೆದ ‘ಅತಿಕಾರೆ’ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ತುಳುನಾಡಿನ ಸಮಗ್ರ ಅಸ್ಮಿತೆಯ ಅವಲೋಕನಕ್ಕಾಗಿ ಎಲ್ಲಾ ಜಾತಿ, ಧರ್ಮದವರನ್ನು ಇದರಲ್ಲಿ ಸೇರಿಸಬೇಕಾಗಿದೆ. ತುಳುನಾಡಿನಲ್ಲಿ ಇವತ್ತು ಇರುವ ಆಚರಣೆ ನಾಳೆಗೆ ಮರೆಯಾಗುತ್ತಿರುವ ಇಂತಹ ಕಾಲದಲ್ಲಿ ತುಳುನಾಡಿನ ಸಂರಚನೆಯ ಆಳ ಅಗಲವನ್ನು ಭವಿಷ್ಯಕ್ಕೆ ಕಾಪಾಡುವ ಉದ್ದೇಶದಿಂದ ಭಾಷಾ ಕೇಂದ್ರ ಅನಿವಾರ್ಯ ಎಂದರು.

ಮಂಜೇಶ್ವರ ಗೋವಿಂದ ಪೈ ಅದಿಯಾಗಿ ತುಳುನಾಡಿನ ಬಗ್ಗೆ ಹಲವು ಅಗ್ರಗಣ್ಯರು ವಿಸ್ತೃತವಾಗಿ ಅಧ್ಯಯನ ಮಾಡಿದ್ದಾರೆ. ಈ ಪಂಕ್ತಿಯಲ್ಲಿ ಡಾ.ಇಂದಿರಾ ಹೆಗ್ಗಡೆ ಅವರು ಕೂಡ ತುಳುನಾಡಿನ ವಿಶೇಷತೆಗಳ ಬಗ್ಗೆ ಬೆಳಕು ಚೆಲ್ಲುವ ವಿಶೇಷ ಪ್ರಯತ್ನ ವನ್ನು ಯಶಸ್ವಿಯಾಗಿ ನಡೆಸಿರುವುದು ಶ್ಲಾಘನೀಯ ಎಂದರು. ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಡಾ.ಜ್ಯೋತಿ ಚೇಳ್ಯಾರು ಪುಸ್ತಕದ ಕುರಿತಂತೆ ಮಾಹಿತಿ ನೀಡಿದರು.

ರೋಶನಿ ನಿಲಯದ ರಿಜಿಸ್ಟ್ರಾರ್ ಪ್ರೊ.ವಿನುತಾ ಕೆ , ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ತುಳು ಪರಿಷತ್ ಗೌರವಾಧ್ಯಕ್ಷ ಡಾ.ಪ್ರಭಾಕರ ನೀರುಮಾರ್ಗ ಉಪಸ್ಥಿತರಿದ್ದರು.

ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಪಿ.ಕೃಷ್ಣಮೂರ್ತಿ ಸ್ವಾಗತಿಸಿದರು. ಆಕೃತಿ ಆಶಯ ಪಬ್ಲಿಕೇಶನ್ಸ್‌ನ ಕಲ್ಲೂರು ನಾಗೇಶ ವಂದಿಸಿದರು. ಲೇಖಕಿ ಡಾ.ಸುಲತ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X