Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ:...

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಲಕ್ಷಾಂತರ ರೂ. ಕಳೆದುಕೊಂಡ ಸಂತ್ರಸ್ತರ ಅಳಲು, ದೂರು

ವಾರ್ತಾಭಾರತಿವಾರ್ತಾಭಾರತಿ8 Nov 2023 3:15 PM IST
share
ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಲಕ್ಷಾಂತರ ರೂ. ಕಳೆದುಕೊಂಡ ಸಂತ್ರಸ್ತರ ಅಳಲು, ದೂರು

ಮಂಗಳೂರು, ನ. 8: ನಗರದ ಕಂಕನಾಡಿಯಲ್ಲಿ ಸಂಸ್ಥೆಯನ್ನು ಹೊಂದಿರುವ ವೀಸಾ ಏಜೆಂಟರೊಬ್ಬರು ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಡೆದು ವೀಸಾ ಕೊಡಿಸದೆ, ಹಣವನ್ನೂ ವಾಪಸ್ ನೀಡದೆ ಕಳೆದ ಮೂರು ವರ್ಷಗಳಿಂದೀಚೆಗೆ ವಂಚನೆ ಮಾಡಿರುವುದಾಗಿ ಸಂತ್ರಸ್ತರು ಆರೋಪಿಸಿದ್ದಾರೆ.

ನಗರದ ಪ್ರೆಸ್ಕ್ಲಬ್ನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸುದ್ದಿಗೋಷ್ಠಿಯಲ್ಲಿ ವೀಸಾ ವಂಚನೆ ಕುರಿತಂತೆ ಆರೋಪ ಮಾಡಿದ ಸಂತ್ರಸ್ತ ಜೈಸನ್ ಡಿಸೋಜ, ಮೂರು ವರ್ಷಗಳ ಹಿಂದೆ ಪತ್ನಿ ಹಾಗೂ ತನಗೆ ಯುರೋಪ್ ದೇಶದಲ್ಲಿ ಉದ್ಯೋಗದ ಭರವಸೆಯೊಂದಿಗೆ ವೀಸಕ್ಕಾಗಿ 8.5 ಲಕ್ಷ ರೂ.ನ್ನು ಆಲ್ವಿನ್ ಡಿಮೆಲ್ಲೋ ಎಂಬವರಿಗೆ ನೀಡಿರುವುದಾಗಿ ಹೇಳಿದರು.

ಕೆಲಸ ಸಿಗದಿದ್ದರೆ ಹಣ ವಾಪಸ್ ನೀಡುವ ಭರವಸೆ ಮೇರೆಗೆ ಹಣ ಪಾವತಿಸಲಾಗಿತ್ತು. ಆದರೆ, ಕಳೆದ ಮೂರು ವರ್ಷಗಳಿಂದಲೂ ವೀಸಾ ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಹೇಳುತ್ತಾ ಬಂದಿದ್ದಾರೆ. ಕೊನೆಗೆ ಹಣ ವಾಪಸ್ ಕೇಳಿದರೆ, ಮಾನಸಿಕ ಒತ್ತಡದ ಮೂಲಕ ದೂರು ನೀಡದಂತೆ ತಡೆಯೊಡ್ಡಿದ್ದಾರೆ ಎಂದು ಜೈಸನ್ ಆರೋಪಿಸಿದ್ದಾರೆ.

ಇನ್ನೋರ್ವ ಸಂತ್ರಸ್ತ ಬ್ರಾಂಡನ್ ಪಿಂಟೋ ತಮ್ಮ ನೋವು ತೋಡಿಕೊಳ್ಳುತ್ತಾ, ದುಬೈನಲ್ಲಿ ಉದ್ಯೋಗಕ್ಕಾಗಿ 2022ರ ಜನವರಿಯಲ್ಲಿ 1,30,000 ರೂ.ಗಳನ್ನು ಪಾವತಿಸಿದ್ದೆ. ವೀಸಾ ಒಂದೆರಡು ತಿಂಗಳಲ್ಲಿ ಸಿಗಲಿದೆ ಎಂದು ಹೇಳುತ್ತಾ ಬಂದಿದ್ದು, 2022ರ ಸೆಪ್ಟಂಬರ್ನಲ್ಲಿ ದುಬೈಗೆ ಕಳುಹಿಸುವ ಭರವಸೆಯೂ ದೊರಕಿತ್ತು. 2023ರ ಫೆಬ್ರವರಿ ತಿಂಗಳಲ್ಲಿ ನೇಮಕಾತಿ ಆದೇಶವಾಗಿದೆ. ಜೂನ್, ಜುಲೈನಲ್ಲಿ ವೀಸಾ ಬರಲಿದೆ. ಆಗಸ್ಟ್ನಲ್ಲಿ ದುಬೈಗೆ ನೀವೆಲ್ಲಾ ಹಾರಲಿದ್ದೀರಿ ಎಂದು ಹೇಳಿ ತಮ್ಮ ಕಚೇರಿಯಲ್ಲಿ ನನ್ನಂತೆ 30 ಮಂದಿಗೆ ತರಬೇತಿಯನ್ನು ನೀಡಲಾಗಿತ್ತು. ಅದೂ ನೆರವೇರದಾಗ ನಮ್ಮ ಹಣ ವಾಪಸ್ ಕೊಡುವಂತೆ ಕೇಳಿದರೆ ದೇವರಿದ್ದಾನೆ ಎಂಬ ದೇವರ ವಾಕ್ಯಗಳನ್ನು ವಾಟ್ಸ್ ಆ್ಯಪ್ ಮೆಸೇಜ್ ಮೂಲಕ ಕಳುಹಿಸುತ್ತಾ ಮರುಳು ಮಾಡಲಾಗಿದೆ ಎಂದು ದೂರಿದರು.

ಗೋವಾದಲ್ಲಿ ನೆಲೆಸಿರುವ ಅನಿತಾ ಎಂಬ ಸಂತ್ರಸ್ತೆ ಮಾತನಾಡಿ, ದುಬೈನಲ್ಲಿ ಕಚೇರಿ ಉದ್ಯೋಗಕ್ಕಾಗಿ 75,000 ರೂ.ಗಳನ್ನು ಎರಡು ವರ್ಷಗಳ ಹಿಂದೆ ಪಾವತಿಸಿದ್ದೆ. ಆದರೆ ಉದ್ಯೋಗ ದೊರಕಿಲ್ಲ. ಹಣವೂ ವಾಪಸ್ ನೀಡಿಲ್ಲ ಎಂದು ದೂರಿದರು.

ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಮಾತನಾಡಿ, ಕಂಕನಾಡಿಯ ಲೆಜೆಂಡ್ ಐ.ಇ.ಎಲ್.ಟಿ.ಎಸ್. ಸಂಸ್ಥೆಯ ಆಲ್ವಿನ್ ಡಿಮೆಲ್ಲೋ ಎಂಬಾತ ಹಲವು ಮಂದಿಗೆ ಈ ರೀತಿ ಮೋಸ ಮಾಡಿದ್ದು, ಸುಮಾರು 60 ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ. ಆ ಸಂತ್ರಸ್ತರಿಗೆ ಆಗಿರುವ ಅನ್ಯಾಯದ ಬಗ್ಗೆ ಅವರ ಮನವಿಯ ಮೇರೆಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಸಂತ್ರಸ್ತರ ಪರ ಮನವಿ ಸಲ್ಲಿಸಲಾಗಿದೆ ಎಂದರು.

ಬೆಂಗಳೂರಿನ ನಿವಾಸಿ ಸ್ಟೀಫನ್ ಎಸ್. ಎಂಬವರು ಇದೇ ವೀಸಾ ಕೊಡಿಸುವ ಸಂಸ್ಥೆಯ ವಿರುದ್ಧ 2022ರ ಆಗಸ್ಟ್ನಲ್ಲಿ ನೀಡಿದ್ದ ದೂರಿನ ಮೇರೆಗೆ ಸ್ಪಂದಿಸಿರುವ ಭಾರತ ಸರಕಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧೀನದ ಬೆಂಗಳೂರಿನ ವಲಸಿಗರ ಸಂರಕ್ಷಕ (ಪ್ರೊಟೆಕ್ಟರ್ ಆಫ್ ಇಮಿಗ್ರೆಂಟ್) ಅಧಿಕಾರಿ ಅವನೀಶ್ ಶುಕ್ಲಾ, ಕಳೆದ ಸೆಪ್ಟಂಬರ್ 5ರಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ವ್ಯವಹಾರ ನಡೆಸಿ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಆಯುಕ್ತರಿಗೆ ಮನವಿ ಸಲ್ಲಿಸುವ ಸಂದರ್ಭ ಈ ಪ್ರಕರಣದ ಅರಿವು ಇರುವುದಾಗಿ ಹೇಳಿರುವ ಪೊಲೀಸ್ ಆಯುಕ್ತರು ಕ್ರಮದ ಭರವಸೆ ನೀಡಿದ್ದಾರೆ ಎಂದು ಯೋಗೀಶ್ ಶೆಟ್ಟಿ ಜಪ್ಪು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಭಟ್, ಶರಣ್ ರಾಜ್, ಮುನೀರ್ ಮುಕ್ಕಚ್ಚೇರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X