ವೆನ್ಲಾಕ್ನಲ್ಲಿ ಹೊಸ ತುರ್ತು ಚಿಕಿತ್ಸಾ ಘಟಕ ಸರಕಾರದ ಅನುಮೋದನೆ: ಸಚಿವ ದಿನೇಶ್ ಗುಂಡೂರಾವ್
ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ(ಕ್ರಿಟಿಕಲ್ ಕೇರ್ ಯುನಿಟಿ) ನಿರ್ಮಾಣಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ ನೆರವೇರಿಸಿ, ಕಾಮಗಾರಿ ಶೀಗ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಆಧುನಿಕ ಆಸ್ಪತ್ರೆಯನ್ನು ಮೀರಿಸುವಂತಹ ಸೌಲಭ್ಯವನ್ನು ಹೊಂದಿದೆ. ಇದಕ್ಕೆ ಎಲ್ಲ ಸೌಕರ್ಯ ನೀಡಲಾಗಿದೆ.ಇದರ ನಿರ್ಮಾಣದಲ್ಲಿ ಎಲ್ಲರ ಕೊಡುಗೆ ಇದೆ. ಕೆಎಂಸಿಯಿಂದ ಆಸ್ಪತ್ರೆಯಿಂದ ದೊಡ್ಡ ಕೊಡುಗೆ ವೆನ್ಲಾಕ್ ಆಸ್ಪತ್ರಗೆ ಸಿಕ್ಕಿದೆ ಎಂದು ಹೇಳಿದರು.
ಮುಖ್ಯ ಅತಿಥಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿಗ ಸರಕಾರಿ ಮೆಡಿಕಲ್ ಕಾಲೇಜು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ದಕ ಜಿಲ್ಲೆ ಆರೋಗ್ಯ ಕ್ಷೇತ್ರದಲ್ಲಿ ಮುಂದುವರಿದಿದೆ. ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಸುಸಜ್ಜಿತ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ನಿರ್ಮಾಣದೊಂದಿಗೆ ಹೊಸ ಮೆರಗು ನೀಡಿದೆ. 9 ಜಿಲ್ಲೆಗಳ ರೋಗಿಗಳು ವೆನ್ಲಾಕ್ ಆಸ್ಪತ್ರೆಯನ್ನು ಆಶ್ರಯಿಸಿಕೊಂಡಿದ್ದಾರೆ ಎಂದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಮಂಗಳೂರು ನಗರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಸರಕಾರವನ್ನು ಆಗ್ರಹಿದರು. ಶಾಸಕ ವೇದ ವ್ಯಾಸ ಕಾಮತ್ ಸಮಾಂಭದ ಅಧ್ಯಕ್ಷತೆ ವಹಿಸಿದ್ದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಕೆ ಮಮತಾ ಡಿಎಸ್ ಗಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕೆ, ಮನಪಾ ಸದಸ್ಯ ಎ.ಸಿ. ವಿನಯ್ರಾಜ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮನಪಾ ವಿಪಕ್ಷ ನಾಯಕನ ಪ್ರವೀಣ್ ಚಂದ್ರ ಆಳ್ವ, ಮಾಹೆ ಮಣಿಪಾಲ ಕುಲಪತಿ ಲೆ.ಜ.ಡಾ.ಎಂ.ಡಿ ವೆಂಕಟೀಶ್, ಕೆಎಂಸಿ ಡೀನ್ ಪ್ರೊ. ಬಿ. ಉಣ್ಣಿಕೃಷ್ಣನ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ. ಜಿ.ಪಂ ಸಿಇಒ ಡಾ. ಆನಂದ ಕೆ, ಮನಪಾ ಆಯುಕ್ತ ಆನಂದ್ ಸಿಎಲ್, ಡಿಎಚ್ಒ ಡಾ.ಎಚ್ ಆರ್ ತಿಮ್ಮಯ್ಯ, ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ರಾಜು.ಕೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಕಾರ್ಯನಿರ್ವಾಹಕ ಚಂದ್ರಕಾಂತ್, ಪ್ರಧಾನ ವ್ಯವಸ್ಥಾಪಕ ಅರುಣ್ ಪ್ರಭಾ.ಕೆ.ಎಸ್ ಉಪಸ್ಥಿತರಿದ್ದರು.
ಆಸ್ಪತ್ರೆಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದ ವೈದ್ಯರನ್ನು ಸನ್ಮಾನಿಸಲಾಯಿತು. ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಡಾ.ಜಿಸಿಂತ ಡಿ ಸೋಜ ಸ್ವಾಗತಿಸಿ ವಂದಿಸಿದರು. ಡಾ. ಸದಾನಂದ ಮತ್ತು ಅನಿತಾ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.
‘‘ರಾಜ್ಯ ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮಾತನಾಡಿ ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಒಳ್ಳೆಯ ಆರೋಗ್ಯ ಸೌಲಭ್ಯ ಇರುವುದು ಮಂಗಳೂರಿನಲ್ಲಿ. ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವಾಗ ವೈದ್ಯರಿಗೆ ವೈಯಕ್ತಿಕ ವಿಚಾರಗಳು ಅಡ್ಡಬಾರದು ಎಂದರು.
ಜಯದೇವ , ಕಿದ್ವಾಯಿ, ನಿಮಾನ್ಸ್ನ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿ ಸ್ಥಾಪನೆಯಾಬೇಕು. ಈ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸಬೇಕಾಗಿದೆ ಎಂದು ಹೇಳಿದರು.







