Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೇರು ಕೃಷಿಗೆ ಕೇಂದ್ರ ಸರಕಾರದಿಂದ...

ಗೇರು ಕೃಷಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ : ಸಚಿವೆ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ14 Nov 2025 10:28 PM IST
share
ಗೇರು ಕೃಷಿಗೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ : ಸಚಿವೆ ಶೋಭಾ ಕರಂದ್ಲಾಜೆ
ಕಾಜು ಶತಮಾನೋತ್ಸವ ಸಮ್ಮೇಳನ-2025

ಮಂಗಳೂರು, ನ.14: ಭಾರತದಲ್ಲಿ ಗೇರು ಬೀಜ ಉತ್ಪಾದನೆ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಗೇರುಬೀಜ ಆಮದು ಮಾಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಗೇರು ಕೃಷಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ದಿಮೆ ಮತ್ತು ಎಂಎಸ್‌ಎಂಇ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕರ್ನಾಟಕ ಗೋಡಂಬಿ ತಯಾರಕರ ಸಂಘದ ವತಿಯಿಂದ ಇಲ್ಲಿನ ಟಿಎಂಎ ಪೈ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ಶುಕ್ರವಾರ ಮೂರು ದಿನಗಳ ‘ಕಾಜು ಶತಮಾನೋತ್ಸವ ಸಮ್ಮೇಳನ-2025’ಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿ 4 ಲಕ್ಷ ಟನ್ ಗೇರು ಬೀಜದ ಬೇಡಿಕೆ ಇದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಗೇರು ಬೀಜ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಆಫ್ರಿಕಾ, ವಿಯೆಟ್ನಾಂ ದೇಶಗಳಿಂದ ಗೇರು ಆಮದು ಮಾಡಿಕೊಳ್ಳುವ ಪರಿಸ್ಥಿತಿ ತಲೆದೋರಿ ಎಂದರು.

ವಿಯೆಟ್ನಾಂನಲ್ಲಿ ಹೆಕ್ಟೇರ್‌ಗೆ 1ರಿಂದ 2 ಸಾವಿರ ಕೇಜಿ ಗೇರು ಉತ್ಪಾದನೆಯಾಗುತ್ತಿದೆ. ಆದರೆ ಭಾರತದಲ್ಲಿ ಹೆಕ್ಟೇರ್‌ಗೆ 674 ಕೆ.ಜಿ ಗೇರು ಬೀಜದ ಇಳುವರಿ ದೊರೆಯುತ್ತದೆ. ಇದಕ್ಕೆ ಹವಾಮಾನ ಹಾಗೂ ಗೇರು ಬೀಜಗಳ ಗುಣಮಟ್ಟ ಕಾರಣವಾಗಿದೆ ಎಂದರು.

ಸಾಮಾಜಿಕ ಭದ್ರತೆಗೆ ಕ್ರಮ :

ಗೇರು ಉತ್ಪಾದನಾ ವಲಯದಲ್ಲಿ ದುಡಿಯುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿದೆ. ಗೇರು ಕಾರ್ಮಿಕರ ಆರೋಗ್ಯದ ಸಲುವಾಗಿ ಇಎಸ್‌ಐ ಆಸ್ಪತ್ರೆಯ ಸೌಲಭ್ಯವನ್ನು ಖಾಸಗಿ ಆಸ್ಪತ್ರೆಗಳ ಜೊತೆ ಜೋಡಿಸಲಾಗುವುದು. ಈ ಕಾರ್ಮಿಕರಿಗೆ ಸೊಸೈಟಿ ಮೂಲಕ ಆಸ್ಪತ್ರೆ ವೆಚ್ಚ ಭರಿಸಲು ಕ್ರಮ ಕೈಗೊಳ್ಳಲಾಗುವುದು. ಇ ಶ್ರಮ ಯೋಜನೆಯಡಿ 30 ಕೋಟಿ ಕಾರ್ಮಿಕರು ನೋಂದಣಿಯಾಗಿದ್ದು, ಅವರಿಗೆಲ್ಲ ಪಿಂಚಣಿ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಗೇರು ಬೀಜ ಸೇರಿದಂತೆ ವಿವಿಧ ಉತ್ಪನ್ನಗಳ ರಫ್ತಿಗೆ ಅನುಕೂಲವಾಗಲು ಎಲ್ಲ ಜಿಲ್ಲೆಗಳಲ್ಲೂ ಆಹಾರ ಗುಣಮಟ್ಟ ಸರ್ಟಿಫಿಕೆಟ್ ನೀಡುವ ಬಗ್ಗೆ ರಾಜ್ಯ ಸರಕಾರದ ಸಹಕಾರೊಂದಿಗೆ ಕಾರ್ಯರೂಪಕ್ಕೆ ತರಲಾಗುವುದು ಎಂದರು.

ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗೇರು ಉದ್ದಿಮೆ ಈಗ ವಿಶ್ವ ವ್ಯಾಪಿಯಾಗಿದೆ. ಈ ಮೂಲಕ ಕರಾವಳಿಯ ಅಸ್ಮಿತೆಯನ್ನು ಎಲ್ಲೆಡೆಗೆ ಪಸರಿಸಿದೆ ಎಂದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಭಾಗೀರಥಿ ಮುರುಳ್ಯ, ಸ್ಪೈನ್ ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಅಶೋಕ್ ಕೃಷ್ಣನ್, ನೆದರ್‌ಲ್ಯಾಂಡ್‌ನ ಇಂಟರ್‌ನ್ಯಾಷನಲ್ ಖರೀದಿದಾರ ರೇನೋ ಗಾರ್ಡಿಯನ್, ಇಟಿಜಿ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ ಬಾರ್ಕೂರ್ ಮತ್ತಿತರರಿದ್ದರು.

ಕರ್ನಾಟಕ ಗೋಡಂಬಿ ತಯಾರಕರ ಸಂಘದ ಅಧ್ಯಕ್ಷ ಎ.ಕೆ.ರಾವ್ ಸ್ವಾಗತಿಸಿದರು. ಕಾಜು ಶತಮಾನೋತ್ಸವ ಸಮ್ಮೇಳನ ಸಮಿತಿ ಸಂಚಾಲಕ ಕಲ್ಬಾವಿ ಪ್ರಕಾಶ್ ರಾವ್ ಪ್ರಾಸ್ತಾವಿಕ ಮಾತನಾಡಿದರು.

ಸಮ್ಮೇಳನದ ಅಂಗವಾಗಿ ಗೋಡಂಬಿಯ ವಿವಿಧ ಉತ್ಪನ್ನಗಳ ಪ್ರದರ್ಶನ, ಮಾರಾಟ ಆಯೋಜಿಸಲಾಗಿದೆ.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X