Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಂಪನಕಟ್ಟೆ: ಬಸ್ ನಿಲ್ದಾಣದ ಮೇಲ್ಛಾವಣಿ...

ಹಂಪನಕಟ್ಟೆ: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ6 Sept 2024 2:12 PM IST
share
ಹಂಪನಕಟ್ಟೆ: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

ಮಂಗಳೂರು, ಸೆ.6: ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಶುಕ್ರವಾರ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್, ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್ ಮೆನೇಜರ್ ಅರುಣ್ ಪ್ರಭ ಉಪಸ್ಥಿತರಿದ್ದರು.

ಸರ್ವಿಸ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ಬಸ್ ಶೆಲ್ಟರ್‌ಗಳನ್ನು ನಿರ್ಮಿಸಲಾಗಿದೆ. ಎಲ್ಲ ಕಡೆಗಳಿಂದ ಆಗಮಿಸುವ ಪ್ರಯಾಣಿಕರಿಗೆ ಈ ಶೆಲ್ಟರ್ ಪ್ರಯೋಜನವಾಗಲಿದೆ. ಒಂದು ಶೆಲ್ಟರ್ ತಲಾ 85 ಮೀಟರ್ ಉದ್ದ ಇದ್ದು, 3 ಮೀಟರ್ ಅಗಲ ಹಾಗೂ 4.25 ಮೀಟರ್ ವಿಸ್ತಾರ ಇರಲಿದೆ. ಒಂದು ಬದಿಯಲ್ಲಿ ಆರರಂತೆ ಒಟ್ಟು 12 ಬಸ್‌ಗಳಿಗೆ ನಿಲ್ಲಲು ಅವಕಾಶ ಇದೆ. ಈ ರೀತಿ ಒಟ್ಟು ಐದೂವರೆ ಶೆಲ್ಟರ್‌ಗಳಿದ್ದು, ಏಕಕಾಲದಲ್ಲಿ ಒಟ್ಟು 66 ಬಸ್ ನಿಲುಗಡೆ ಸಾಧ್ಯ. ಪಾಲಿಕೆ

ಎರಡು ಶೌಚಾಲಯಗಳು ನಿರ್ಮಾಣವಾಗಲಿದ್ದು, ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು 3 ಕೋಟಿ ರೂ. ವೆಚ್ಚದಲ್ಲಿ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ತಿಳಿಸಿದರು.

ಪ್ರಯಾಣಿಕರು ಬಿಸಿಲು, ಮಳೆ ಲೆಕ್ಕಿಸದೆ ಬಸ್‌ಗೆ ಕಾಯಬೇಕಾಗುತ್ತದೆ. ಅವರ ಸಂಕಷ್ಟಕ್ಕೆ ಸ್ಪಂದಿಸಲು ಸ್ಮಾರ್ಟ್‌ಸಿಟಿ ವತಿಯಿಂದ ಮೇಲ್ಛಾವಣಿ ನಿರ್ಮಿಸಲಾಗುತ್ತಿದೆ. ಈಗಾಗಲೇ ಎರಡು ಕಡೆ ನಿರ್ಮಿಸಲಾಗಿದ್ದು, ಉಳಿದ ಕಡೆಗಳಲ್ಲಿ ತ್ವರಿತವಾಗಿ ನಿರ್ಮಿಸಿ ಪ್ರಯಾಣಿಕರ ಉಪಯೋಗಕ್ಕೆ ಬಿಟ್ಟುಕೊಡಲಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಸರ್ವಿಸ್ ಬಸ್ ನಿಲ್ದಾಣ ಪಾಲಿಕೆ ವ್ಯಾಪ್ತಿಗೆ ಒಳಪಟ್ಟರೂ ಅದರ ಜಾಗ ಜಿಲ್ಲಾಡಳಿತದ ಸುಪರ್ದಿಯಲ್ಲಿದೆ. ಹಾಗಾಗಿ ಈ ಬಸ್ ಶೆಲ್ಟರ್‌ಗಳ ನಿರ್ವಹಣೆಯನ್ನು ಬಸ್ ಮಾಲೀಕರ ಸಂಘಗಳಿಗೆ ಜಿಲ್ಲಾಡಳಿತ ಬಿಟ್ಟುಕೊಟ್ಟರೆ, ಸುಗಮ ನಿರ್ವಹಣೆ ಸಾಧ್ಯವಾಗಲಿದೆ ಎಂದರು.

ಬಸ್ ಮಾಲೀಕರ ಸಂಘದಿಂದ ಈ ಶೆಲ್ಟರ್‌ಗಳಲ್ಲಿ ಕುಡಿಯುವ ನೀರು, ಡೆಸ್ಟಿನೇಷನ್ ಬೋರ್ಡ್‌ಗಳು, ಬಸ್ ಮಾಲೀಕರ ಸಂಘಕ್ಕೆ ಕಚೇರಿ, ವಿಶ್ರಾಂತಿ ಕೊಠಡಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸುವಂತೆ ಶಾಸಕರು ಹಾಗೂ ಮೇಯರ್‌ಗೆ ಮನವಿ ಸಲ್ಲಿಸಲಾಯಿತು.

ಲೇಡಿಗೋಷನ್ ಬಸ್ ಸ್ಟಾಪ್ ರದ್ದು ಅವೈಜ್ಞಾನಿಕ

ನಗರದ ಸರ್ವಿಸ್ ಬಸ್ ನಿಲ್ದಾಣದ ಎದುರಿನ ಲೇಡಿಗೋಷನ್ ಬಸ್ ಸ್ಟಾಪ್ ರದ್ದುಪಡಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕ. ಈ ಸಂಚಾರ ಕ್ರಮವನ್ನು ಮರು ಪರಿಶೀಲಿಸಿ ಹಿಂದಿನಂತೆಯೇ ಮುಂದುವರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಮರು ಆಗ್ರಹಿಸಿದ್ದಾರೆ.

ಯಾವುದೇ ಬಸ್ ಸ್ಟಾಪ್ ರದ್ದುಪಡಿಸಬೇಕಾದರೆ ಸ್ಥಳೀಯರ, ಪ್ರಯಾಣಿಕರು, ಬಸ್ ಮಾಲೀಕರು, ಜನಪ್ರತಿನಿಧಿಗಳ ಸಲಹೆ ಸೂಚನೆಗಳನ್ನು ಪರಿಗಣಿಸಬೇಕು. ಆದರೆ ಇದಾವುದೂ ಇಲ್ಲದೆ ಕೇವಲ ಹೊರಗಿನವರಾದ ಉಸ್ತುವಾರಿ ಸಚಿವರು ಮೌಖಿಕವಾಗಿ ಹೇಳಿದ್ದನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪಾಲಿಸುತ್ತಿದೆ. ದಿನ ಬೆಳಗಾಗುವುದರ ಒಳಗೆ ಈ ರೀತಿ ಸಂಚಾರ ಮಾರ್ಪಾಟು ಮಾಡುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ. ಈ ಕ್ರಮವನ್ನು ಮರು ಪರಿಶೀಲಿಸಬೇಕು ಎಂದು ಅವರು ಹೇಳಿದರು.

Tags

Hampanakatte
share
ವಾರ್ತಾಭಾರತಿ
ವಾರ್ತಾಭಾರತಿ
Next Story
X