Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷ ಪ್ರೇರಿತ ಕೊಲೆಗಳಿಗೆ ದ್ವೇಷ ಭಾಷಣಕಾರರೇ ಕಾರಣ: ಎಪಿಸಿಆರ್ ಆರೋಪ

ಕೊಳತ್ತಮಜಲು ಯುವಕನ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 May 2025 8:11 PM IST
share
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷ ಪ್ರೇರಿತ ಕೊಲೆಗಳಿಗೆ ದ್ವೇಷ ಭಾಷಣಕಾರರೇ ಕಾರಣ: ಎಪಿಸಿಆರ್ ಆರೋಪ

ಮಂಗಳೂರು: ಬಂಟ್ವಾಳದಲ್ಲಿ ಇಬ್ಬರು ಯುವಕರ ಮೇಲೆ ನಡೆದ ಭೀಕರ ದಾಳಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕೋಮು ದ್ವೇಷದ ರಾಜಕಾರಣಕ್ಕೆ ಯುವಕರು ಬಲಿಯಾಗುತ್ತಿರುವುದಕ್ಕೆ ಇದು ಮತ್ತೊಂದು ನಿದರ್ಶನವಾಗಿದೆ.‌ ಈ ದ್ವೇಷದ ಕೊಲೆಯನ್ನು ಖಂಡಿಸುತ್ತೇವೆ. ಈ ಹೇಯ ಕೃತ್ಯ ನಡೆಸಿರುವ ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಎಪಿಸಿಆರ್ - ಕರ್ನಾಟಕವು ಆಗ್ರಹಿಸಿದೆ.

ಇಲ್ಲಿ ಹೀಗೆ ಕೋಮು ದ್ವೇಷ ಪ್ರೇರಿತ ಕೊಲೆ ಹಲ್ಲೆಗಳು ಪುನರಾವರ್ತನೆಯಾಗುತ್ತಿರುವುದಕ್ಕೆ ಪ್ರಮುಖ ಕಾರಣ ಯುವಕರಲ್ಲಿ ಕೋಮು ದ್ವೇಷವನ್ನು ಪ್ರೇರೇಪಿಸುತ್ತಿರುವ ದ್ವೇಷ ಭಾಷಣಕಾರರು. ತಮ್ಮ ದ್ವೇಷಭಾಷಣಗಳಿಂದ ಯುವಕರನ್ನು ತಪ್ಪುದಾರಿಗೆ ತಳ್ಳುತ್ತಿರುವ ದ್ವೇಷಭಾಷಣಕಾರರನ್ನು ಪೊಲೀಸರು ಗುರುತಿಸಿ ತಕ್ಷಣ ಬಂಧಿಸಬೇಕು. ಇಂತಹ ಕೃತ್ಯ ಪುನಾರವರ್ತಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದ್ದರೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ಖೇದಕರ. ಈ ಹಿಂದೆ ನಡೆದ ಮಾಬ್ ಲಿಂಚಿಂಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸದೇ ಇರುವುದು ಸಹ ಈ ಕ್ರಿಮಿನಲ್ ಕೆಲಸಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ. ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಅಮಾಯಕ ಯುವಕರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ತಪಿತ್ತಸ್ಥರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಬೇಕು ಎಂದು ಎಪಿಸಿಆರ್ ಕರ್ನಾಟಕದ ಕಾರ್ಯದರ್ಶಿ ಹುಸೈನ್‌ ಕೋಡಿಬೆಂಗ್ರೆ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಈ ಹಿಂದೆ ಕುಡುಪುವಿನಲ್ಲಿ ಮಾಡಿದಂತೆ ಬೇಜವಾಬ್ದಾರಿಯಾಗಿ ವರ್ತಿಸಿದ ಜಿಲ್ಲಾ ಪೋಲಿಸ್ ಕಮಿಷನರ್ ಅವರು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲರಾಗಿರುವುದರಿಂದ ಈ ಹತ್ಯೆ ನಡೆಯಲು ಕಾರಣವಾಗಿದೆ. ಆದ್ದರಿಂದ ಪೋಲಿಸ್ ಆಯುಕ್ತನ್ನು ತಕ್ಷಣ ಬದಲಿಸಿ ಬೇರೆಯವರನ್ನು ನೇಮಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಲು ವಿಶೇಷ ತಂಡ ಹಾಗೂ ತನಿಖಾದಿಕಾರಿಯನ್ನು ನೇಮಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ( ಎಪಿಸಿಆರ್),ಕರ್ನಾಟಕ ರಾಜ್ಯ ಘಟಕ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X