Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಗರೀಕರಣದಿಂದ ಮಾನವೀಯ ಮೌಲ್ಯಗಳಿಗೆ...

ನಗರೀಕರಣದಿಂದ ಮಾನವೀಯ ಮೌಲ್ಯಗಳಿಗೆ ಧಕ್ಕೆ: ಪ್ರೊ. ಪಿ.ಎಲ್.ಧರ್ಮ

ವಾರ್ತಾಭಾರತಿವಾರ್ತಾಭಾರತಿ23 Oct 2024 12:13 AM IST
share
ನಗರೀಕರಣದಿಂದ ಮಾನವೀಯ ಮೌಲ್ಯಗಳಿಗೆ ಧಕ್ಕೆ: ಪ್ರೊ. ಪಿ.ಎಲ್.ಧರ್ಮ

ಮಂಗಳೂರು: ನಗರೀಕರಣದಿಂದಾಗಿ ಜನರ ನಡುವೆ ಪರಸ್ಪರ ವಿಶ್ವಾಸ ,ಮಾನವೀಯ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದ್ದಾರೆ.

ನಗರದ ರೋಶನಿ ನಿಲಯದ ಮರಿಯಾ ಪೈವಾ ಸಭಾಂಗಣದಲ್ಲಿ ಮಂಗಳವಾರ ಸ್ಕೂಲ್ ಆಫ್ ಸೋಶಿಯಲ್ ವರ್ಕ್, ಮಂಗಳೂರು ಸಮಾಜಶಾಸ್ತ್ರ - ಅರ್ಥಶಾಸ್ತ್ರ ವೇದಿಕೆ ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘ (ಎಂಎಸ್‌ಎ) ಆಶ್ರಯದಲ್ಲಿ ಆರಂಭಗೊಂಡ ‘ಭಾರತದಲ್ಲಿ ಅಂತರ್ಗತ ನಗರೀಕರಣ:ಅಂಚೀಕೃತ ಸಮುದಾಯಗಳ ಸವಾಲುಗಳು ಎಂಬ ವಿಷಯದ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ನಗರೀಕರಣದಿಂದಾಗಿ ಮಂಗಳೂರಿನಲ್ಲಿ ಭತ್ತದ ಗದ್ದೆಗಳು ಮಾಯವಾಗಿದೆ. ಕೃಷಿ ಭೂಮಿಯು ಪರಿವರ್ತನೆಗೊಂಡು ಕೈಗಾರಿಕೆ, ದೊಡ್ಡ ಕಟ್ಟಡಗಳು ತಲೆ ಎತ್ತಿವೆ. ಇದರಿಂದಾಗಿ ಕಸ ವಿಲೇವಾರಿ, ಡ್ರೈನೇಜ್ ಸೇರಿದಂತೆ ನಗರದಲ್ಲಿ ನಾನಾ ಸಮಸ್ಯೆ ಎದುರಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರು ದೊರೆಯುತ್ತಿದ್ದ ಬಾವಿಯಲ್ಲಿ ಕೊಳಚೆ ನೀರು ಸೇರಿಕೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ನಗರಾಡಳಿತ ಸಂಸ್ಥೆ ಒಳಚರಂಡಿ ವ್ಯವಸ್ಥೆಯ ಕಡೆಗೆ ಗಮನ ನೀಡುತ್ತಿಲ್ಲ. ರಸ್ತೆಯ ಪಕ್ಕದಲ್ಲಿ ನೀರು ಹರಿದು ಹೋಗಲು ಚರಂಡಿಗಳಿಲ್ಲ. ಮಂಗಳೂರು ನಗರದ ಸಮಸ್ಯೆಗಳ ಬಗ್ಗೆ ಸಮಾಜ ಕಾರ್ಯ ವಿದ್ಯಾರ್ಥಿಗಳು ಅಧ್ಯಯನ ನಡೆಸಬೇಕಾಗಿದೆ ಎಂದರು.

ಧಾರವಾಡದ ಕರ್ನಾಟಕ ವಿವಿ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ ಸೋಮಶೇಖರಪ್ಪ ಸಿ.ಎ ಅವರು ದಿಕ್ಚೂಚಿ ಭಾಷಣ ಮಾಡಿದರು.

ಮಂಗಳೂರು ಸಮಾಜಶಾಸ್ತ್ರ ಸಂಘದ (ಎಂಎಸ್‌ಎ)ಅಧ್ಯಕ್ಷ ಡಾ ಗಿರಿಧರ್ ರಾವ್, ಕಾರ್ಯದರ್ಶಿ ಡಾ.ಕಿರಣ್ ಪ್ರಸಾದ್ ಬಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸರ್ವಿಸಸ್‌ನ ಅಧ್ಯಕ್ಷೆ ವಿದಾ ಸಿಕ್ವೇರಾ, ಉಪಸ್ಥಿತರಿದ್ದರು.

ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ರಿಚರ್ಡ್ ಪಾಯಸ್ ಸಂಪಾದಕರಾಗಿರುವ ಮಂಗಳೂರು ಸಮಾಜಶಾಸ್ತ್ರ ಸಂಘದ 32ನೇ ಸಂಚಿಕೆ ‘ಸಮಾಜ ಶೋಧನಾ’ವನ್ನು ಪ್ರೊ.ಪಿ.ಎಲ್. ಧರ್ಮ ಬಿಡುಗಡೆಗೊಳಿಸಿದರು.

ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನ ಪರೀಕ್ಷಾಂಗ ನಿಯಂತ್ರಕರಾದ ಪ್ರೊ. ಸಿಸಿಲಿಯಾ ಎಫ್ ಗೋವೆಯಸ್ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಸಾಂಡ್ರಾ ಸುನೀತಾ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಂದ್ರ.ಕೆ ವಂದಿಸಿದರು.

24 ಪ್ರಬಂಧಗಳ ಮಂಡನೆ: ಎರಡು ತಾಂತ್ರಿಕ ಗೋಷ್ಠಿಗಳಲ್ಲಿ ವಿಷಯ ತಜ್ಞರು, ಸಂಶೋಧನಾ ವಿದ್ಯಾರ್ಥಿಗಳು, ಸೇರಿದಂತೆ 24 ಮಂದಿ ಪ್ರಬಂಧ ಮಂಡಿಸಿದರು. ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಸಮಾಜ ಶಾಸ್ತ್ರ ವಿಭಾಗದ ಪ್ರೊ. ವಿನಯ್ ರಜತ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಎಂಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ ರಾಘವೇಂದ್ರ ರಾವ್ ಅಧ್ಯಕ್ಷತೆಯಲ್ಲಿ ಎರಡನೇ ಗೋಷ್ಠಿ ನಡೆಯಿತು. ಎರಡನೇ ಗೋಷ್ಠಿಯಲ್ಲಿ ಅಜ್ಜರಕಾಡು ಜಿ.ಶಂಕರ್ ಜಿಡಬ್ಲ್ಯುಎಫ್‌ಜಿ ಕಾಲೇಜಿನ ಡಾ. ರಾಜೇಂದ್ರ ಕೆ ಮತ್ತು ಮಂಗಳೂರು ವಿವಿ ಕಾಲೇಜಿನ ಡಾ.ಗಾಯತ್ರಿ ಎನ್ ಗೋಷ್ಠಿಗಳನ್ನು ನಿರ್ವಹಿಸಿದರು.

Tags

Prof. PL Dharma
share
ವಾರ್ತಾಭಾರತಿ
ವಾರ್ತಾಭಾರತಿ
Next Story
X