Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪು ನಾಗರಿಕ ಸಮಿತಿ ವತಿಯಿಂದ...

ಮುಡಿಪು ನಾಗರಿಕ ಸಮಿತಿ ವತಿಯಿಂದ ʼಬಂಧುತ್ವʼ ಕಾರ್ಯಕ್ರಮ, ಸೌಹಾರ್ದ ಇಫ್ತಾರ್ ಕೂಟ

ಎಲ್ಲಾ ಜಾತಿ, ವರ್ಗದ ಜನರು ಉತ್ತಮ ಸಮಾಜ ನಿರ್ಮಾಣದ‌ ಸಂಕಲ್ಪ ಮಾಡಬೇಕಿದೆ: ಯು.ಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ3 April 2024 11:59 AM IST
share
  • ಮುಡಿಪು ನಾಗರಿಕ ಸಮಿತಿ ವತಿಯಿಂದ ʼಬಂಧುತ್ವʼ ಕಾರ್ಯಕ್ರಮ, ಸೌಹಾರ್ದ ಇಫ್ತಾರ್ ಕೂಟ
  • ಮುಡಿಪು ನಾಗರಿಕ ಸಮಿತಿ ವತಿಯಿಂದ ʼಬಂಧುತ್ವʼ ಕಾರ್ಯಕ್ರಮ, ಸೌಹಾರ್ದ ಇಫ್ತಾರ್ ಕೂಟ

ಕೊಣಾಜೆ: ನಾಗರಿಕ ಸಮಿತಿ ಮುಡಿಪು ಇದರ ಆಶ್ರಯದಲ್ಲಿ ಮುಡಿಪು ಜಂಕ್ಷನ್ ಸಮೀಪ ಮಂಗಳವಾರ ಸಂಜೆ ʼಬಂಧುತ್ವʼ ಕಾರ್ಯಕ್ರಮದ ಅಂಗವಾಗಿ ನಡೆದ ಸೌಹಾರ್ದ ಇಪ್ತಾರ್ ಕೂಟವು ವಿವಿಧ ಜಾತಿ, ವರ್ಗದ ಸಾವಿರಾರು ಜನರ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಮಾತನಾಡಿ, ನಮ್ಮ ದೇಶವು ಸೌಹಾರ್ದತೆಯ ಪ್ರತೀಕವಾಗಿದೆ. ಹಿರಿಯರ ಮಾರ್ಗದರ್ಶನದೊಂದಿಗೆ ಎಲ್ಲಾ ಜಾತಿ, ವರ್ಗದ ಜನರು ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣದ‌ ಸಂಕಲ್ಪ ಮಾಡಬೇಕಿದೆ. ಪ್ರತಿಯೊಂದು ಕಡೆಯಲ್ಲೂ ಸೌಹಾರ್ದತೆಯ ವಾತವರಣ ಸೃಷ್ಟಿಸುವುದರೊಂದಿಗೆ ರಾಷ್ಟ್ರ ನಿರ್ಮಾಣ‌ದ ಕಾರ್ಯವಾಗಬೇಕು.‌ ಮುಡಿಪುವಿನಲ್ಲಿ ನಾಗರಿಕ ಸಮಿತಿ ವತಿಯಿಂದ ನಡೆದ ಬಂಧುತ್ವ ಕಾರ್ಯಕ್ರಮವು ಸಾಮಾಜಿಕ ಚಿಂತನೆಯ,‌‌ ಸಾಮರಸ್ಯದ ಕಾರ್ಯಕ್ರಮವಾಗಿದೆ ಎಂದರು. ಇಂತಹ ಮಾದರಿ ಕಾರ್ಯಕ್ರಮ ಪ್ರತಿ ಗ್ರಾಮಗಳಲ್ಲೂ ಆಗಬೇಕಿದ್ದು, ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಇದು ಪ್ರೇರಣೆಯಾಗಲಿದೆ ಎಂದರು.‌

ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರರಾದ ದೇವಿಪ್ರಸಾದ್ ಪೊಯ್ಯತ್ತಾಯ ಅವರು ಮಾತನಾಡಿ, ಭಾರತದೇಶ ಎನ್ನುವುದು ಸೌಹಾರ್ದತೆಯ ರಾಷ್ಟ್ರ. ಪ್ರತಿಯೊಂದು ಧರ್ಮವೂ ದಾನ ಧರ್ಮದ ಮೂಲಕ ಉತ್ತಮ ಶಾಂತಿಯುತ ಸಮನ್ವಯ ತೆಯ ಸಮಾಜ ನಿರ್ಮಿಸಬೇಕೆಂದು ಹೇಳಿದೆ.ಆದ್ದರಿಂದ ನಾವಲ್ಲರೂ ಒಟ್ಟಿಗೆ ಸೇರಿ ಸೌಹಾರ್ದತೆಯ ಬದುಕು ಸಾಗಿಸಬೇಕು ಎಂದರು.

ಮುಡಿಪು ಸಂತ ಜೋಸೆಫ್ ವಾಜ್ ಚರ್ಚ್ ನ ಧರ್ಮ ಗುರುಗಳಾದ ಫಾದರ್ ಅಸ್ಸಿಸಿ ರೆಬೆಲ್ಲೋ ಅವರು ಮಾತನಾಡಿ, ಬಂಧುತ್ವದ ಇಫ್ತಾರ್ ಕೂಟವು ಸೌಹಾರ್ದತೆಯ ವಾತಾವರಣ ಸೃಷ್ಟಿಸಿ ದೆ. ಬಂಧುತ್ವ, ಸಮನ್ವಯತೆಯ ಎಂದೆಂದಿಗೂ ಇರಲಿ. ಪ್ರತಿಯೊಬ್ಬರು ಪರಸ್ಪರರನ್ನು ಪ್ರೀತಿಸಿ ಶಾಂತಿ ನೆಮ್ಮದಿಯಿಂದ ಜೀವನ ನಡೆಸೋಣ ಎಂದರು.

ಹೂಹಾಕುವ ಕಲ್ಲು ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ಇಕ್ಬಾಲ್ ಫಾಳಿಲಿ ಅವರು ಮಾತನಾಡಿ, ಎಲ್ಲಾ ಧರ್ಮದವರು ಒಟ್ಟು ಸೇರಿ ಮಾಡುವ ಇಂತಹ ಕಾರ್ಯಕ್ರಮ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ರಮೇಶ್ ಶೇಣವ, ಪುಂಡರೀಕಾಕ್ಷ ಮೂಲ್ಯ, ರಾಧಾಕೃಷ್ಣ ಉಮಿಯ, ಮಾರ್ಷೆಲ್ ಡಿಸೋಜ, ಜೋಸೆಫ್ ಕುಟಿನ್ಹ, ಕುರ್ನಾಡು ಪಂಚಾಯತಿ ಅಧ್ಯಕ್ಷೆ ಲೋಲಾಕ್ಷಿ ಶೆಟ್ಟಿ, ಮುಖಂಡರಾದ ಇಬ್ರಾಹಿಂ ನಡುಪದವು, ಅಬ್ದುಲ್ ಜಲೀಲ್ ಮೋಂಟುಗೋಳಿ, ಎನ್ .ಎಸ್.ನಾಸೀರ್ ನಡುಪದವು, ಅರುಣ್ ಡಿಸೋಜ, ತಾಜುದ್ದೀನ್ ಕೊಣಾಜೆ, ಶಿಕ್ಷಕರಾದ‌ ರವೀಂದ್ರ ರೈ ಹರೇಕಳ,‌ ರಾಜೇಶ್ ಪಿ, ವಿಜೇಶ್ ‌ನಾಯ್ಕ್, ಮಹಮ್ಮದ್ ಮೋನು, ಮುಸ್ತಫಾ ಹರೇಕಳ,‌ನವಾಝ್ ನರಿಂಗಾನ, ಶೀನ ಶೆಟ್ಟಿ, ಹೈದರ್ ಕೈರಂಗಳ ಉಪಸ್ಥಿತರಿದ್ದರು.

ಮುಡಿಪು ನಾಗರಿಕ ಸಮಿತಿಯ ದೇವದಾಸ ಭಂಡಾರಿ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಅಬ್ದುಲ್ ರಝಾಕ್ ಕುಕ್ಕಾಜೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X