Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ...

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Nov 2023 4:52 PM IST
share
ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ

ಮಂಗಳೂರು: ಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗಿನ ಮರಗಳ ಮೌಲ್ಯಗಳ ಬಗ್ಗೆ ನಾವು ಚೆನ್ನಾಗಿ ತಿಳಿದುಕೊಂಡಿಲ್ಲ. ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.

ನಗರದ ಮರೋಳಿಯಲ್ಲಿ ಗುರುವಾರ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ( ಸೌತ್ ಕೆನರಾ ಕೊಕೊನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್)ಯ ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿದರು.

ದುರದೃಷ್ಟವಶಾತ್ ತೆಂಗಿನ ಸಾಮಥ್ಯವನ್ನು ಗುರುತಿಸುವಲ್ಲಿ ಮತ್ತು ಪೋಷಿಸುವಲ್ಲಿ ನಮ್ಮಲ್ಲಿ ಮಾಹಿತಿಯ ಕೊರತೆ ಇದೆ. ತೆಂಗಿನ ಚಿಪ್ಪುಗಳನ್ನು ವಿವಿಧ ಉಪ ಉತ್ಪನ್ನಗಳಾಗಿ ಪರಿವರ್ತಿಸಬಹುದು ಮತ್ತು ಆದಾಯ ಮತ್ತು ಉದ್ಯೋಗಾವಕಾಶ ಗಳನ್ನು ಸೃಷ್ಟಿಸಲು ಸಾಧ್ಯವಿದೆ ಎಂದು ಸ್ವಾಮೀಜಿ ನುಡಿದರು.

ಸಮಾರಂಭದಲ್ಲಿ ಸ್ವಾಮೀಜಿ ಹಾಗೂ ಇತರ ಗಣ್ಯರು ತೆಂಗಿನ ಎಣ್ಣೆ, ಕೊಬ್ಬರಿ ಒಣ ಚಟ್ನಿ ಸೇರಿದಂತೆ ತೆಂಗಿನ ಉತ್ಪನ್ನಗಳನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸೌತ್ ಕೆನರಾ ಕೊಕೊನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್‌ನ ಸಿಇಒ ಚೇತನ್ ಎ ಅವರು ಭವಿಷ್ಯದ ಯೋಜನೆಗಳನ್ನು ವಿವರಿಸಿದರು, ಪುತ್ತೂರು ಶಾಖೆಯ ಮೇಲ್ವಿಚಾರಕಿ ನವ್ಯಶ್ರೀ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಸರಗೋಡು ಐಸಿಎಆರ್ - ಸಿಪಿಸಿಆರ್‌ಐ ನಿರ್ದೇಶಕ ಡಾ.ಹೆಬ್ಬಾರ್ ಕೆ.ಬಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಎಚ್.ಆರ್.ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಎಚ್, ಮರೋಳಿ ವಾರ್ಡ್‌ನ ಕಾರ್ಪೊರೇಟರ್ ಕೇಶವ ಮರೋಳಿ, ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ನಬಾರ್ಡ್ ವ್ಯವಸ್ಥಾಪಕ ಸಂಗೀತಾ ಎಸ್.ಕರ್ತಾ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಮತ್ತು ಹಿರಿಯ ವಿಜ್ಞಾನಿ ಡಾ.ರಮೇಶ್, ಭಾರತೀಯ ವಿಕಾಸ ಟ್ರಸ್ಟ್‌ನ ಜಿಲ್ಲಾ ಮುಖ್ಯಸ್ಥ ಜೀವನ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ, ಪುಣಚ, ಕರ್ನಾಟಕ ರಾಜ್ಯ ರೈತ ಹಸಿರು ಸೇನೆಯ ದ.ಕ. ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಸೂರ್ಯನಾರಾಯಣ ದೇವಸ್ಥಾನದ ಟ್ರಸ್ಟಿ ಉಮೇಶ್ ರೈ ಭಾಗವಹಿಸಿದ್ದರು.

ಸೌತ್ ಕೆನರಾ ಕೋಕೋನಟ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಕುಸುಮಾಧರ್ ಎಸ್.ಕೆ , ನಿರ್ದೇಶಕರಾದ ಹರಿಪ್ರಸಾದ್ , ಲತಾ .ಪಿ, ತಿಮ್ಮಪ್ಪ , ವರ್ಧಮಾನ್ ಜೈನ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಗಿರೀಧರ ಸ್ಕಂದ ಸ್ವಾಗತಿಸಿದರು , ಸುಳ್ಯ ಶಾಖೆಯ ಮೇಲ್ವೀಚಾರಕಿ ಅಪರ್ಣಾ ವಂದಿಸಿದರು, ಡಾ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X